ಗದಗ | ಹಿಂದಿ ಹೇರಿಕೆ ವಿರೋಧಿಸಿದ ಕರವೇ ಕಾರ್ಯಕರ್ತರ ಬಂಧನ; ಬಿಡುಗಡೆಗೆ ಆಗ್ರಹ

Date:

“ರಾಜ್ಯದಲ್ಲಿ ಒತ್ತಾಯ ಪೂರ್ವಕವಾಗಿ ಹಿಂದಿ ಹೇರಿಕೆ ವಿರೋಧಿಸಿ ಬೆಂಗಳೂರಿನಲ್ಲಿ ಹೋರಾಟ ಮಾಡಿದ ಕರವೇ ಕಾರ್ಯಕರ್ತರನ್ನು ಬಂಧಿಸಿರುವ ಪೊಲೀಸ ಕ್ರಮವನ್ನು ಖಂಡಿಸುತ್ತೇವೆ. ಕೂಡಲೇ ಬಿಡುಗಡೆ ಮಾಡಬೇಕು” ಎಂದು ಕರವೇ ಜಿಲ್ಲಾಧ್ಯಕ್ಷ ಹಣಮಂತ ಅಬ್ಬಿಗೇರಿ ಆಗ್ರಹಿಸಿದರು.

ಗದಗ ಪಟ್ಟಣದ ಜಿಲ್ಲಾಡಳಿತ ಭವನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ರಾಜ್ಯದಲ್ಲಿ ಹಿಂದಿ ಹೇರಿಕೆಯನ್ನು ವಿರೋಧಿಸಿ 41 ಜನರ ಕರವೇ ಕಾರ್ಯಕರ್ತರ ಬಂದಿಸಿರುವವರನ್ನು ಬಿಡುಗಡೆ ಮಾಡುವಂತೆ  ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದರು.

“ಕೇಂದ್ರ ಸರ್ಕಾರದ ಹಿಂದಿ ಹೇರಿಕೆಯನ್ನು ಖಂಡಿಸಿ, ನಮ್ಮ ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ. ಕೇವಲ ಮೂನ್ನೂರು ವರ್ಷಗಳ ಇತಿಹಾಸವಿರುವ ಹಿಂದಿಯನ್ನು ರಾಷ್ಟ ಭಾಷೆ ಎಂದು ಹೇಳುತ್ತಿದ್ದು, ಆರು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆ ಯಾಕೆ ರಾಷ್ಟ ಭಾಷೆ ಆಗಬಾರದು” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಿನ್ನ ಬೆಂಗಳೂರು ನಗರದಲ್ಲಿ ಪ್ರತಿಷ್ಠ ಹೊಟೇಲ್ ತಾಜ್ ವೆಸ್ಟೆಂಡ್ ಹೋಟೇಲ್‌ನಲ್ಲಿ ಹಿಂದಿ ಹೇರಿಕೆಯ ಸಭೆ ನಡೆದಿದ್ದು, ನಮ್ಮ ರಾಜ್ಯದ ದುರ್ದೈವ. ಇಂತಹ ಸಭೆಯನ್ನು ತಡೆದಿದ್ದಕ್ಕಾಗಿ ನಮ್ಮ ಪೊಲೀಸ ಇಲಾಖೆ ನಮ್ಮ ಕಾರ್ಯಕರ್ತರನ್ನು ಬಂಧಿಸಿದ್ದು ಖಂಡನೀಯ. ಈ ಕೂಡಲೇ ಅವರನ್ನು ಬಿಡುಗಡೆ ಮಾಡಬೇಕು” ಎಂದು ಆಗ್ರಹಿಸಿದರು.

“ಇಲ್ಲದಿದ್ದರೆ ನಮ್ಮ ರಾಜ್ಯಾಧ್ಯಕ್ಷರಾದ ಟಿ. ಎ. ನಾರಾಯಣಗೌಡರ ಆದೇಶದಂತೆ ಗದಗ ಜಿಲ್ಲೆಯಲ್ಲಿ ಮುಂದಿನ ದಿನಮಾನಗಳಲ್ಲಿ ಉಗ್ರವಾದ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಕರವೇ ಮುಖಂಡರು ನಿಂಗನಗೌಡ ಮಾಲಿಪಾಟೀಲ್, ಮುತ್ತಣ್ಣ ಚವಡಣ್ಣವರ, ತೌಸಿಫ ಡಾಲಾಯತ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷರು ಲಕ್ಷ್ಮಿ  ಹಿತ್ತಲಮನಿ, ವಿನಾಯಕ ಬದಿ, ಯಲ್ಲಪ್ಪ ಭೋವಿ, ಗಿರೀಶ್ ಕೆಗಡದಿನ್ನಿ, ರೆಹಮಾನ್ ದರ್ಗದ, ಯಶೋಧ ಬಾಲಾಜಿ, ಗಂಗಮ್ಮ ಕೇಳಿಕೆತರ್, ರೂಪಾ ಕುಲಕರ್ಣಿ, ಸಿರಾಜ್ ಹೊಸಮನಿ, ಈರಣ್ಣ ಹಿರೇಗೌಡ್ರು, ಯಲಪ್ಪ ನಾಗಸಮುದ್ರ ಇನ್ನೂ ಅನೇಕ ಕರವೇ ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...