ಗಜೇಂದ್ರಗಡ | ಬೀದಿಬದಿ ವ್ಯಾಪಾರಸ್ಥರ ತಾಲೂಕು ಸಮಾವೇಶ

Date:

ಗದಗ ಜಿಲ್ಲೆಯಲ್ಲಿಯೇ ಶರವೇಗದಲ್ಲಿ ಬೆಳೆಯುತ್ತಿರುವ ನಗರ ಗಜೇಂದ್ರಗಡ. ಇಲ್ಲಿನ ಸುತ್ತಮುತ್ತಲಿನ ಜನರಿಗೆ ವ್ಯಾಪಾರವು ಒಂದು ಜೀವಾಳವಾಗಿದೆ ಎಂದು ಪುರಸಭೆ ಮಾಜಿ ಸದಸ್ಯ ಎಂ ಎಸ್ ಹಡಪದ ಹೇಳಿದರು.

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಸೇವಾಲಾಲ್ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಬೀದಿಬದಿ ವ್ಯಾಪಾರಸ್ಥರ ಸಂಘ(ಸಿಐಟಿಯು) ಸಹಯೋಗದಲ್ಲಿ ನಡೆದ ತಾಲೂಕು ಬೀದಿಬದಿ ವ್ಯಾಪಾರಸ್ಥರ ಸಮಾವೇಶ ಉದ್ಘಾಟಿಸಿ ಮಾತನಾಡಿರು.

“ಪಟ್ಟಣದಲ್ಲಿನ ಮಾರುಕಟ್ಟೆ ಸ್ಥಳಾಂತರವಾಗಿ ಎಷ್ಟೋ ಬಡ ಕುಟುಂಬಗಳು ಬೀದಿಗೆ ಬರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನು ಸರಿಪಡಿಸಲು ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಮುಂದಾಗಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಐಟಿಯು ಮುಖಂಡ ಬಾಲು ರಾಠೋಡ ಮಾತನಾಡಿ, “ಗಜೇಂದ್ರಗಡ ಪಟ್ಟಣದಲ್ಲಿ ಬೀದಿಬದಿ ವ್ಯಾಪಾರಸ್ಥರಿಗೆ ಮಾರಾಟ ಮಾಡಲು ಅಧಿಕಾರಿಗಳು ನಿರ್ಬಂಧ ಹಾಕಿರುವುದನ್ನು ಕೈ ಬಿಡಬೇಕು. ಎಲ್ಲ ವ್ಯಾಪಾರಸ್ಥರಿಗೆ ಕಾಲುದಾರಿ ಮೇಲೆ ವ್ಯಾಪಾರ ಮಾಡಲು ಅವಕಾಶ ಮಾಡಿಕೊಡಬೇಕು. ಬೀದಿಬದಿ ಕಾಯ್ದೆ ಅಡಿ ವ್ಯಾಪಾರಸ್ಥರಿಗೆ ರಕ್ಷಣೆ ನೀಡುವಂತಾಗಬೇಕು. ವ್ಯಾಪಾರ ಮಾಡಲು ಒಂದು ಶಾಶ್ವತ ಸ್ಥಳಾವಕಾಶ ಮಾಡಿಕೊಡಬೇಕು” ಎಂದು ಹೇಳಿದರು.

“ಡಬಲ್ ರೋಡ್ ಭಾಗವಾದ ದುರ್ಗಾ ಸರ್ಕಲ್‌ನಿಂದ ಕೆಕೆ ಸರ್ಕಲ್‌ನ ನಾಲ್ಕು ಭಾಗದಲ್ಲಿ 2004 ಕಾಯ್ದೆ ಅಡಿಯಲ್ಲಿ ಅವಕಾಶ ನಿಡಬೇಕು. ಸಂಬಂಧಪಟ್ಟ ಶಾಸಕರು ಪುರಸಭೆ ಮುಖ್ಯಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸೇರಿ ಎಲ್ಲ ವ್ಯಾಪಾರಸ್ಥರ ನಡುವೆ ಒಂದು ಜಂಟಿ ಸಭೆಯನ್ನು ನಡೆಸಿ ತಿರ್ಮಾನ ತೆಗೆದುಕೋಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಸಿದರು.

“ತರಕಾರಿ ಮಾರುಕಟ್ಟೆಗೆ ಪ್ರತ್ಯೇಕ ಸ್ಥಳ ಮೂಲಭೂತ ಸೌಕರ್ಯ ಕಲ್ಪಿಸಬೇಕು. ಹಣ್ಣು, ಎಗ್ ರೈಸ್, ಕಬ್ಬಿನ ಹಾಲು, ಬಟ್ಟೆ ವ್ಯಾಪಾರ, ಚಪ್ಪಲಿ, ಎಲೆ ಅಡಿಕೆ, ಪಾನಿಪುರಿ ಮಾರುವ ಎಲ್ಲ ವ್ಯಾಪಾರಸ್ಥರಿಗೆ ಬೀದಿಬದಿ ವ್ಯಾಪಾರ ಮಾಡಲು ಅವಕಾಶ ಮಾಡಿಕೊಡಬೇಕು” ಎಂಬ ಅಂಶಗಳ ಕುರಿತು ಸಮಾವೇಶದಲ್ಲಿ ನೂತನ ಸಮಿತಿಯ ತುರ್ತು ನಿರ್ಣಯಗಳನ್ನು ತೆಗೆದುಕೊಂಡರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕ್ಷೇತ್ರದ ಅಭಿವೃದ್ಧಿಯೇ ನನ್ನ ಮೊದಲ ಆದ್ಯತೆ : ಶಾಸಕ ಶೈಲೇಂದ್ರ ಬೆಲ್ದಾಳೆ

ಗಜೇಂದ್ರಗಡ ಬೀದಿಬದಿ ವ್ಯಾಪಾರಸ್ಥರ ತಾಲೂಕು ಅಧ್ಯಕ್ಷ ಶಾಮೀದ್ಅಲಿಸಾಬ್ ದಿಂಡವಾಡ, ಪ್ರಧಾನ ಕಾರ್ಯದರ್ಶಿ ಪೀರು ರಾಠೋಡ, ಪದಾಧಿಕಾರಿಗಳು ಚೌಡಮ್ಮ ಯಲ್ಪು, ಮೈಬೂಸಾಬ್ ಮಾಲ್ದಾರ, ಮುತ್ತಣ್ಣ ರಾಠೋಡ, ಅಂಬರೇಶ ಚವ್ಹಾಣ, ಮಾರುತಿ ಗೊಂದಳೆ, ಮುತ್ತಣ್ಣ ತೇಜಪ್ಪ ರಾಠೋಡ, ವಿಷ್ಣು ಚಂದುಕರ, ಮಹಾಂತೇಶ ಹೀರೇಮಠ, ಖಜಾಂಚಿ ಪರಶುರಾಮ ಬಡಿಗೇರ, ಸದಸ್ಯ ಗಂಗಾಧರ ಸತ್ಯನ್ನವರ, ಯಮನೂರಸಾಬ್ ಗಾದಿ, ಮರ್ತುಜಾ ದಿಂಡವಾಡ, ಅಶೋಕ್ ಚವ್ಹಾಣ, ಕಳಕಪ್ಪ ಮಾಳೋತ್ತರ, ರಾಜುಪಾಲ, ಅಲ್ಲಾಬಕ್ಷಿ ಮುಚ್ಚಾಲಿ, ಸುರೇಶ್ ಅಕ್ಕಸಾಲಿ, ನಾಗರಾಜ ಅಜ್ಮೀರ, ದೇವಕ್ಕ ರಾಠೋಡ, ಭದ್ರೇಶ್ ರಾಠೋಡ ಸೇರಿದಂತೆ 30 ಜನರ ಸಮಿತಿಯನ್ನು ರಚಿಸಲಾಯಿತು.

ಈ ಸಂದರ್ಭದಲ್ಲಿ ರೈತ ಮುಖಂಡ ಬಾಲು ರಾಠೋಡ, ಮೆಹಬೂಬ್ ಹವಾಲ್ದಾರ್, ವಿದ್ಯಾರ್ಥಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಚಂದ್ರು ರಾಠೋಡ ಹಾಗೂ ವ್ಯಾಪಾರಸ್ಥರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...