ಗಂಗಾವತಿ | ಹಂಪಿ ಪ್ರಕರಣದ ಬೆನ್ನಲ್ಲೇ ಮತ್ತೊಂದು ಘಟನೆ; ಮಹಿಳೆಯರ ಮುಖದ ಮೇಲೆ ಸಿಗರೇಟು ಹೊಗೆ ಬಿಟ್ಟ ದುಷ್ಟರು

Date:

ಕೆಲ ಕಿಡಿಗೇಡಿಗಳು ಸಿಗರೇಟು ಹೊಗೆಯನ್ನು ವಾಯು ವಿಹಾರಕ್ಕೆಂದು ಬಂದಿದ್ದ ಯುವತಿಯರು, ಮಹಿಳೆಯರ ಮುಖದ ಮೇಲೆ ಬಿಟ್ಟು ದುಷ್ಟತನ ಮೆರೆದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯ ಎಂಎನ್ಎಂ ಶಾಲೆಯ ಬಳಿ ಶುಕ್ರವಾರ ರಾತ್ರಿ ನಡೆದಿದೆ.

ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ವಾಯು ವಿಹಾರದಲ್ಲಿ ತೊಡಗಿದ್ದ ಮಹಿಳೆಯರು, ಪುರುಷರು ಗುಂಪಾಗಿ ಕಿಡಿಗೇಡಿ ಯುವಕರನ್ನು ಹಿಡಿದು ತರಾಟೆಗೆ ತೆಗೆದುಕೊಂಡಿದ್ದು, ಬಳಿಕ ಕೂಡಿ ಹಾಕಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಸಂದರ್ಭದಲ್ಲಿ ಇಬ್ಬರು ಯುವಕರು ತಪ್ಪಿಸಿಕೊಂಡು ಓಡಿ ಹೋಗಿದ್ದಾರೆ. ಘಟನೆಯಿಂದಾಗಿ ಸ್ಥಳದಲ್ಲಿ ಕೆಲಕಾಲ ಆತಂಕಕಾರಿ ವಾತಾವರಣ ನಿರ್ಮಾಣವಾಗಿತ್ತು.

ಕುವೆಂಪು ಬಡಾವಣೆ ಮತ್ತು ಜಯನಗರದ ಮಧ್ಯೆ ಇರುವ ಮಳೆಮಲ್ಲೇಶ್ವರ-ಗಾಯತ್ರಿ ದೇವಸ್ಥಾನಕ್ಕೆ ಹೋಗುವ ಮಾರ್ಗ ಮಧ್ಯದ ಜನ ವಸತಿ ಪ್ರದೇಶದಲ್ಲಿ ನೂತನ ವಸತಿ ಲೇಔಟ್ ನಿರ್ಮಾಣವಾಗಿದೆ. ಸಂಜೆ ಮತ್ತು ಬೆಳಿಗ್ಗೆ ವಾಯು ವಿಹಾರಕ್ಕೆ ಹೋಗುವ ಜನರಿಗೆ ಈ ಲೇಔಟ್​ನ ರಸ್ತೆಗಳು ಹೇಳಿ ಮಾಡಿಸಿದಂತಿವೆ. ಹೀಗಾಗಿ ಎಂದಿನಂತೆ ಶುಕ್ರವಾರ ರಾತ್ರಿ 9 ಗಂಟೆಯ ನಂತರ ಮಹಿಳೆಯರು ವಾಯು ವಿಹಾರದಲ್ಲಿ ತೊಡಗಿದ್ದರು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ರಸ್ತೆಯ ಬದಿಯಲ್ಲಿ ಕುಳಿತಿದ್ದ ಯುವಕರು ಸಿಗರೇಟು ಸೇದಿ, ಅದೇ ಮಾರ್ಗದಲ್ಲಿ ಹೋಗುತ್ತಿದ್ದ ಮಹಿಳೆಯರ ಮುಖಕ್ಕೆ ಸಿಗರೇಟಿನ ಹೊಗೆ ಬಿಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಈ ಬಗ್ಗೆ ಮಹಿಳೆಯರು ಪ್ರಶ್ನಿಸಿದ್ದಕ್ಕೆ “ನಮ್ಮ ಹಣದಲ್ಲಿ ನಾವು ಸೇದುತ್ತೇವೆ. ನೀವ್ಯಾರು ಕೇಳಲು. ಮುಖಕ್ಕೆ ಹೊಗೆ ಬರಬಾರದು ಎಂದರೆ ಈ ರಸ್ತೆಯಲ್ಲಿ ಓಡಾಡಬಾರದು” ಎಂದು ಯುವಕರು ತಾಕೀತು ಮಾಡಿದ್ದಲ್ಲದೇ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆಂದು ತಿಳಿದುಬಂದಿದೆ. ಇದರಿಂದ ಕೋಪಗೊಂಡ ಮಹಿಳೆಯರು, ಯುವಕರನ್ನು ತರಾಟೆಗೆ ತೆಗೆದುಕೊಳ್ಳುತಿದ್ದಂತೆಯೇ ಜನ ಜಮಾಯಿಸಿ ಯುವಕರನ್ನು ಹಿಡಿಯಲು ಯತ್ನಿಸಿದ್ದಾರೆ. ಈ ಪೈಕಿ ಇಬ್ಬರು ತಪ್ಪಿಸಿಕೊಂಡು ಓಡಿ ಹೋಗಿದ್ದಾರೆ. ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ ಬಳಿಕ 112 ವಾಹನ ಸ್ಥಳಕ್ಕೆ ಬಂದು ಯುವಕರನ್ನು ಕರೆದೊಯ್ದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಶನಿವಾರ ಜಯನಗರ, ಕುವೆಂಪು ಬಡಾವಣೆ, ಸತ್ಯನಾರಾಯಣ ಪೇಟೆಯ ಸುಮಾರು 150ಕ್ಕೂ ಹೆಚ್ಚು ಜನ ಆಗಮಿಸಿ ನಗರ ಠಾಣೆಯ ಪೊಲೀಸರಿಗೆ ದೂರು ನೀಡಿದರು.

ದೂರು ಸ್ವೀಕರಿಸಿದ ಬಳಿಕ ಪ್ರತಿಕ್ರಿಯೆ ನೀಡಿದ ಡಿವೈಎಸ್‌ಪಿ ಸಿದ್ದಲಿಂಗಪ್ಪಗೌಡ ಪಾಟೀಲ್, “ಖಾಸಗಿ ಲೇಔಟ್​ಗಳಲ್ಲಿ ಸಿಸಿ ಕ್ಯಾಮರಾ ಹಾಕಿಸುವಂತೆ ನಗರಸಭೆಗೆ ಸೂಚನೆ ನೀಡಲಾಗುವುದು. ಹೆಚ್ಚಿನ ಭದ್ರತೆ ನೀಡಲು ಪೊಲೀಸ್ ಗಸ್ತು ನಿಯೋಜಿಸಲಾಗುವುದು” ಎಂದು ಭರವಸೆ ನೀಡಿದರು.

ಇದೇ ಮಾರ್ಚ್‌ ತಿಂಗಳ ಮೊದಲ ವಾರದಲ್ಲಿ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿಯಿರುವ ತುಂಗಭದ್ರಾ ಎಡದಂಡೆ ಕಾಲುವೆ ಬಳಿ ವಾಯುವಿಹಾರಕ್ಕೆಂದು ಹೋಗಿದ್ದ ಸಂದರ್ಭದಲ್ಲಿ ವಿದೇಶಿಯರಿದ್ದ ಗುಂಪಿನ ಮೇಲೆ ಮೂವರು ಯುವಕರು ಹಲ್ಲೆ ನಡೆಸಿ, ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಬೆಳಕಿಗೆ ಬಂದಿತ್ತು. ಅಲ್ಲದೆ, ಆರೋಪಿಗಳನ್ನು ಪುರುಷ ಪ್ರವಾಸಿಗರನ್ನು ಕಾಲುವೆಗೆ ತಳ್ಳಿದ್ದು, ಒಡಿಶಾ ಮೂಲದ ಪ್ರವಾಸಿ ಯುವಕ ಬಿಬಾಸ್ ಮೃತಪಟ್ಟಿದ್ದರು. ಅಮೆರಿಕದ ಪ್ರವಾಸಿಗ ಡೇನಿಯಲ್ ಹಾಗೂ ಇಸ್ರೇಲ್ ಮೂಲದ ಮಹಿಳೆ, ಗಂಗಾವತಿ ತಾಲೂಕಿನ ಆನೆಗೊಂದಿಯ ಹೋಂ ಸ್ಟೇವೊಂದರ ಮಾಲಕಿ​, ಮಹಾರಾಷ್ಟ್ರದ ನಾಸಿಕ್​ನ ಪಂಕಜ್ ಪಟೇಲ್ ಹಲ್ಲೆಗೊಳಗಾಗಿದ್ದರು.

ಈ ಸುದ್ದಿ ಓದಿದ್ದೀರಾ? ಗಂಗಾವತಿ ಪ್ರಕರಣ ಬಳಿಕ ಎಚ್ಚೆತ್ತ ಪೊಲೀಸ್‌ ಇಲಾಖೆ; ಹೋಂ ಸ್ಟೇ, ರೆಸಾರ್ಟ್​ಗಳ ಮೇಲೆ ದಾಳಿ

ಇದೀಗ ತಾಲೂಕಿನ ಎಂಎನ್ಎಂ ಶಾಲೆಯ ಬಳಿ ಶುಕ್ರವಾರ ರಾತ್ರಿ 9 ಗಂಟೆಯ ನಂತರ ವಾಯು ವಿಹಾರದಲ್ಲಿ ನಿರತರಾಗಿದ್ದ ಮಹಿಳೆಯರ ಮುಖದ ಮೇಲೆ ಕಿಡಿಗೇಡಿಗಳು ಸಿಗರೇಟಿನ ಹೊಗೆ ಬಿಟ್ಟು ನೀಚತನ ಮೆರೆದಿರುವುದಾಗಿ ವರದಿಯಾಗಿದ್ದು, ಸ್ಥಳೀಯ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ರಾತ್ರಿವೇಳೆ ಸ್ವತಂತ್ರವಾಗಿ ತಿರುಗಾಡದಂತ ಪರಿಸ್ಥಿತಿ ಬಂದೊದಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...