ಗಂಗಾವತಿ | ಕೇಂದ್ರ ಸರ್ಕಾರದ ಯೋಜನೆಗಳ ಜಾಗೃತಿ ಅಭಿಯಾನ; ಛಾಯಾಚಿತ್ರ ಪ್ರದರ್ಶನ

Date:

ಬಳ್ಳಾರಿಯ ಕೇಂದ್ರ ಸಂವಹನ ಇಲಾಖೆಯಿಂದ ಫೆಬ್ರವರಿ 19ರಂದು ಕೊಪ್ಪಳ ಜಿಲ್ಲೆಯ ಗಂಗಾವತಿಯ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಛಾಯಾಚಿತ್ರ ಪ್ರದರ್ಶನ ಹಾಗೂ ಜನ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ನಗರಸಭೆ ಅಧ್ಯಕ್ಷ ಮೌಲಾಸಾಬ್ ದಾದೇಸಾಬ್ ಛಾಯಾಚಿತ್ರ ಪ್ರದರ್ಶನದ ಉದ್ಘಾಟನೆ ನೆರವೇರಿಸಿ, “ಗ್ರಾಮೀಣ ಭಾಗಗಳ ಜನರಿಗೆ ಸರ್ಕಾರದ ಯೋಜನೆಗಳ ಮಾಹಿತಿ ತಲುಪಬೇಕು. ಇಂತಹ ಛಾಯಾಚಿತ್ರ ಪ್ರದರ್ಶನಗಳು ಮಾಹಿತಿಪೂರ್ಣವಾಗಿವೆ” ಎಂದು ತಿಳಿಸಿದರು.

ಕೇಂದ್ರ ಸರ್ಕಾರದ ಯೋಜನೆ

ಎಸ್‌ಬಿಐ ಬ್ಯಾಂಕ್‌ನ ಆರ್ಥಿಕ ಸಲಹೆಗಾರ ಆಂಜನೇಯ ಮಾತನಾಡಿ, “ಕೇಂದ್ರ ಸರ್ಕಾರದ ಪಿಂಚಣಿ ಹಾಗೂ ವಿಮಾ ಯೋಜನೆಗಳು ತಳಮಟ್ಟದ ಜನರಿಗೆ ಆರ್ಥಿಕ ಭದ್ರತೆ ಕಲ್ಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಅಟಲ್ ಪಿಂಚಣಿ ಯೋಜನೆ ವಯಸ್ಕರಿಗೆ ಹಣಕಾಸು ಭದ್ರತೆ ಒದಗಿಸುತ್ತದೆ. ಜನರ ಸುರಕ್ಷೆಯ ಹಿತಕ್ಕಾಗಿ ಕೇಂದ್ರ ಸರ್ಕಾರ ಸುರಕ್ಷಾ ವಿಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆ ಪರಿಚಯಿಸಿದೆ. ಅಟಲ್ ಪಿಂಚಣಿ ಯೋಜನೆಯಡಿ ವೃದ್ಧರು ಆರ್ಥಿಕ ಭದ್ರತೆ ಪಡೆಯಬಹುದಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಕೇಂದ್ರ ಯೋಜನೆ

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ರುದ್ರೇಶ್ ಮಾತನಾಡಿ, “ಮಹಿಳೆಯರು ಮತ್ತು ಮಕ್ಕಳ ಹಿತಕ್ಕಾಗಿ ಕೇಂದ್ರ ಸರ್ಕಾರ ಅನುಷ್ಠಾನಕ್ಕೆ ತಂದಿರುವ ಯೋಜನೆಗಳ ಮಾಹಿತಿಯನ್ನು ಛಾಯಾಚಿತ್ರ ಪ್ರದರ್ಶನದಲ್ಲಿ ನೀಡಲಾಗಿದ್ದು, ಗ್ರಾಮೀಣ ಹಾಗೂ ನಗರ ಭಾಗಗಳ ಮಹಿಳೆಯರು ಇದರ ಪ್ರಯೋಜನ ಪಡೆಯಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಜಿಬಿಜಿಬಿ ಮಸೂದೆ 2024 ಕುರಿತು ಶಾಸಕ ಅರ್ಷದ್ ರಿಜ್ವಾನ್‌ ಜತೆಗೆ ಬಿಎನ್‌ಪಿ ಮಾತುಕತೆ

ಆಯುಷ್ಮಾನ್ ಭಾರತ ಹಾಗೂ ಕ್ಷಯ ಮುಕ್ತ ಭಾರತ ಕುರಿತು ಆರೋಗ್ಯ ಇಲಾಖೆಯ ಆಶಾ ಬೇಗಂ ಮಾತನಾಡಿದರು. ಉಪ ತಹಶೀಲ್ದಾರ್ ರವಿ ಕುಮಾರ್, ಶಿಕ್ಷಣ ಇಲಾಖೆಯ ಉಮಾದೇವಿ ಪಾಟೀಲ್, ಡಿ ಆಂಜನೇಯ ಸ್ವಾಮಿ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಸನ್ನ, ಕೇಂದ್ರ ಸಂವಹನ ಇಲಾಖೆಯ ಕ್ಷೇತ್ರ ಪ್ರಚಾರ ಅಧಿಕಾರಿ ಅಕ್ಷತಾ ಸಿ ಹೆಚ್, ಇಲಾಖೆಯ ಸಿಬ್ಬಂದಿ ರಾಮಕೃಷ್ಣಪ್ಪ ಹಾಗೂ ಲಕ್ಷ್ಮೀಕಾಂತ ಇದ್ದರು.

ಜಾಗೃತಿ ಕಾರ್ಯಕ್ರಮದ ಛಾಯಾಚಿತ್ರ ಪ್ರದರ್ಶನ ಫೆಬ್ರವರಿ 20ರಂದೂ ಕೂಡಾ ಮುಂದುವರೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...