ಗಂಗಾವತಿ | ನೆಹರೂ ಉದ್ಯಾನದ ಸ್ವಚ್ಛತೆ ಕುರಿತು ಶಾಸಕರ ಮಾತಿಗೂ ಕಿಮ್ಮತ್ತು ನೀಡದ ಪೌರಾಯುಕ್ತ: ಐಲಿ ನಾಗರಾಜ

Date:

ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ನೆಹರೂ ಉದ್ಯಾನದ ಸುರಕ್ಷತೆ ಮತ್ತು ಸ್ವಚ್ಚತೆಯ ಬಗ್ಗೆ ನಗರಸಭೆ ಕಡೆಗಣಿಸಿದ್ದು, ಈ ಬಗ್ಗೆ ಸೂಕ್ತ ಕ್ರಮವಹಿಸಲು ಶಾಸಕರು ಸೂಚಿಸಿದ್ದರೂ ಕೂಡಾ, ಪೌರಾಯುಕ್ತರು ಶಾಸಕರ ಮಾತಿಗೆ ಕಿಮ್ಮತ್ತು ಕೊಡದೇ ನಿರ್ಲಕ್ಷ್ಯ ವಹಿಸಿರುತ್ತಾರೆ ಎಂದು ಕರವೇ ಗಂಗಾವತಿ ನಗರ ಘಟಕ ಅಧ್ಯಕ್ಷ ಐಲಿ ನಾಗರಾಜ ಆಕ್ರೋಶ ವ್ಯಕ್ತಪಡಿಸಿದರು.

“ಉದ್ಯಾನವನದ ಸ್ವಚ್ಛತೆ ಕಾಪಾಡಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲು ಕರವೇ ಸಂಘಟನೆ, ಶಾಸಕರು ಹಾಗೂ ಪೌರಾಯುಕ್ತರ ಉಭಯ ಸಮ್ಮುಖದಲ್ಲಿ ಕಳೆದ ತಿಂಗಳು ನಡೆದ ಸಭೆಯಲ್ಲಿ ಮನವಿ ಮಾಡಿಕೊಂಡಿದ್ದು, ಶಾಸಕರು ಈ ಬಗ್ಗೆ ಸೂಕ್ತ ಕ್ರಮವಹಿಸಲು ಪೌರಾಯುಕ್ತರಿಗೆ ಸೂಚಿಸಿದಾಗ್ಯೂ ಪೌರಾಯುಕ್ತರು ಶಾಸಕರ ಮಾತಿಗೆ ಕಿಮ್ಮತ್ತು ಕೊಡದೇ ನಿರ್ಲಕ್ಷ್ಯ ವಹಿಸಿರುತ್ತಾರೆ” ಎಂದರು.

“ಸದರಿ ಉದ್ಯಾನವನದಲ್ಲಿ ಬರುವ ಸಾರ್ವಜನಿರು ಮತ್ತು ಬೇರೆ ಬೇರೆ ಊರಿಗೆ ಹೋಗುವ ಪ್ರಯಾಣಿಕರು ವಿಶ್ರಾಂತಿಯ ಸಲುವಾಗಿ ಈ ಉದ್ಯಾನಕ್ಕೆ ಬರುತ್ತಾರೆ. ವಯಸ್ಸಾದ ವೃದ್ದರು, ಹಿರಿಯ ನಾಗಕರಿಕರು ಉದ್ಯಾನವನದಲ್ಲಿ ವಾಯು ವಿಹಾರಕ್ಕೆ, ವ್ಯಾಯಾಮಕ್ಕೆ ಬರುತ್ತಾರೆ. ಆದರೆ, ಉದ್ಯಾನವನ ಸ್ವಚ್ಛತೆ ಇಲ್ಲದೆ ಮತ್ತು ವ್ಯಾಯಾಮ ಸಲುವಾಗಿ ಹಾಕಿರುವ ಎಲ್ಲ ಸಾಮಾಗ್ರಿಗಳು ಸಂಪೂರ್ಣವಾಗಿ ಹಾಳಾಗಿವೆ. ಇದರಿಂದಾಗಿ ವೃದ್ಧರಿಗೆ, ಹಿರಿಯ ನಾಗರಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಹಗಲು ರಾತ್ರಿ ಈ ಉದ್ಯಾನವನದಲ್ಲಿ ಕುಡುಕರ ಹಾವಳಿ ಹೆಚ್ಚಾಗಿದ್ದು, ಅನೈತಿಕ ಚಟುವಟಿಕೆಗಳು ಹೆಚ್ಚಾಗಿ ನಡೆಯುತ್ತಿವೆ. ಇದರ ಬಗ್ಗೆ ಯಾವುದೇ ಇಲ್ಲಾಖೆಯ ಅಧಿಕಾರಿಗಳೂ ಕೂಡಾ ಕ್ರಮವಹಿಸುತ್ತಿಲ್ಲ. ಅಲ್ಲದೆ ಸ್ವಚ್ಚತೆ ಇಲ್ಲದೆ ಕಲುಷಿತ ವಾತಾವರಣ ಉಂಟಾಗಿದೆ” ಎಂದು ಆರೋಪಿಸಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಅವೈಜ್ಞಾನಿಕ ಟೋಲ್ ಗೇಟ್; ಕೂಡಲೇ ಕಾಮಗಾರಿ ನಿಲ್ಲಿಸುವಂತೆ ರೈತ ಸಂಘ ಒತ್ತಾಯ

“ಉದ್ಯಾನವನಕ್ಕೆ ಬರುವ ಸಾರ್ವಜನಿಕರು, ಪ್ರಯಾಣಿಕರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಈ ಉದ್ಯಾನದಲ್ಲಿ ಮದ್ಯಪಾನದ ಬಾಟೆಲ್‌ಗಳು, ಇತರೆ ಅನೈತಿಕ ಚಟುವಟಿಕೆಗೆ ಉಪಯೋಗಿಸುವ ವಸ್ತುಗಳು ಕಾಣುತ್ತಿವೆ. ಉದ್ಯಾನವನದ ಸುತ್ತಲು ಸರಿಯಾದ ಬೇಲಿ ವ್ಯವಸ್ಥೆ ಇರುವದಿಲ್ಲ. ಈಗಲಾದರೂ ಶಾಸಕರು ಹಾಗೂ ಪೌರಾಯುಕ್ತರು ಈ ಉದ್ಯಾನದತ್ತ ಗಮನಹರಿಸಿ ಸ್ಥಳಪರಿಶೀಲನೆ ಮಾಡಿ, ಇಲ್ಲಿ ನಡೆಯುತ್ತಿರುವ ಅನೈತಿಕ ಚಟುವಟಿಕೆಗಳನ್ನು ತಡೆಗಟ್ಟಬೇಕು. ಸ್ವಚ್ಛತೆ ಕಾಪಾಡಬೇಕು ಮತ್ತು ವ್ಯಾಯಾಮಕ್ಕೆ ಉಪಯೋಗಿಸುವ ಸಾಮಾಗ್ರಿಗಳು ಸರಿಪಡಿಸಬೇಕು. ಸಂಜೆ 6 ಗಂಟೆಯ ನಂತರ ಉದ್ಯಾನವನದ ಭದ್ರತೆಯ ಗೇಟಿಗೆ ಬೀಗಹಾಕಬೇಕು. ಜತೆಗೆ ಕಾವಲುಗಾರರನ್ನು ನೇಮಿಸಬೇಕು” ಎಂದು ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...