ಗಂಗಾವತಿ | ಅನೈತಿಕ ಚಟುವಟಿಕೆಗಳ ತಾಣವಾದ ನೆಹರೂ ಉದ್ಯಾನವನ; ಸ್ವಚ್ಛತೆಗೆ ಮುಂದಾದ ಸಮಾನ ಮನಸ್ಕರು

Date:

ಗಂಗಾವತಿ ನಗರದಲ್ಲಿರುವ ಹಲವು ದಶಕಗಳ ಇತಿಹಾಸ ಹೊಂದಿರುವ ನೆಹರೂ ಉದ್ಯಾನವನ ಪ್ರಸ್ತುತ ನಗರ ಸಭೆಯ ದಿವ್ಯ ನಿರ್ಲಕ್ಷದಿಂದಾಗಿ ಮದ್ಯ ವ್ಯಸನಿಗಳ ಗೂಡಾಗಿದೆ. ರಾತ್ರಿ ಸಮಯದಲ್ಲಿ ಅನೈತಿಕ ಚಟುವಟಿಕೆಗಳಿಗೆ ಹೇಳಿ ಮಾಡಿಸಿದ ತಾಣವಾಗಿದೆ. ಆದರೆ ನಗರಸಭೆ ಮಾಡಬೇಕಿದ್ದ ಉದ್ಯಾನವನದ ಸ್ವಚ್ಛತೆ ಕೆಲಸವನ್ನು ಪರಿಸರವಾದಿಗಳು, ವಿವಿಧ ಸಂಘಟನೆಗಳು ಹಾಗೂ ಸಮಾನ ಮನಸ್ಕರು ಮಾಡಲು ಮುಂದಾದರು.

ಗಂಗಾವತಿಯ ಚಾರಣ ಬಳಗ, ರೋಟರಿ ಕ್ಲಬ್, ಕಟ್ಟಡ ನಿರ್ಮಾಣ ಸಂಘ, ಪರಿಸರ ಸೇವಾ ಟ್ರಸ್ಟ್ ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ ಹಲವು ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರುಗಳು ಒಟ್ಟಾಗಿ ಸ್ವಚ್ಛತೆಗೆ ಅಗತ್ಯ ಇರುವ ಪರಿಕರಗಳನ್ನೂ ತಂದು ಉದ್ಯಾನವನದ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛಗೊಳಿಸಿದರು.

ಡಾ. ಶಿವಕುಮಾರ್ ಮಾಲಿಪಾಟೀಲ್ ಮಾತನಾಡಿ, “ನಗರಕ್ಕೆ ಇರುವುದು ಒಂದೇ ಇದೊಂದೇ ಉದ್ಯಾನವನ. ನಗರಸಭೆಯ ನಿರ್ಲಕ್ಷ್ಯತೆ ಹಾಗೂ ಸಮರ್ಪಕವಾದ ನಿರ್ವಹಣೆಯ ಕೊರತೆಯಿಂದಾಗಿ ಉದ್ಯಾನವನ ಸಂಪೂರ್ಣ ಹದಗೆಟ್ಟಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟಿ ಆಂಜನೇಯ ಮಾತನಾಡಿ, “ಒಂದು ಕಾಲದಲ್ಲಿ ಸದಾ ಹಚ್ಚ ಹಸಿರಿನಿಂದ ಕೂಡಿದ, ಕಾರಂಜಿಯಿಂದ ಕಂಗೊಳಿಸುತ್ತಿದ್ದ ಹಾಗೂ ಉದ್ಯಾನವನಕ್ಕೆ ಆಗಮಿಸುವ ಜನರಿಗೆ ಟಿವಿ ಸಹಿತ ವೀಕ್ಷಣೆಗೆ ಅವಕಾಶ ನೀಡುತ್ತಿದ್ದ ನೆಹರು ಉದ್ಯಾನವನ ಈಗ ಕಸದ ಕೊಂಪೆಯಾಗಿದೆ. ಆಳವಾದ ತಗ್ಗು ಗುಂಡಿಗಳಿಂದ ನೀರು ಸಂಗ್ರಹಗೊಂಡು ಸಾಂಕ್ರಾಮಿಕ ರೋಗಗಳ ಮೂಲ ಕೇಂದ್ರವಾಗಿದೆ. ಈ ಹಿನ್ನೆಲೆ ನಗರಸಭೆಯ ಪೌರಾಯುಕ್ತರು ಸೇರಿದಂತೆ ಆಡಳಿತ ಮಂಡಳಿಯ ಸದಸ್ಯರುಗಳು ಉದ್ಯಾನವನದ ಸ್ವಚ್ಛತೆಗೆ ಮುಂದಾಗಬೇಕು. ಬೆಳಗ್ಗೆ ಸೇರಿದಂತೆ ಸಂಜೆ ಸಮಯ ನಿಗದಿಪಡಿಸಿ ಅಚ್ಚುಕಟ್ಟಿನ ನಿರ್ವಹಣೆಗಾಗಿ ಸಿಬ್ಬಂದಿಯನ್ನು ನೇಮಿಸಬೇಕು. ಬೇಸಿಗೆ ಹಾಗೂ ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಸೌಂದರ್ಯೀರಣಕ್ಕೆ ವಿಶೇಷ ಅನುದಾನ ಕಲ್ಪಿಸಬೇಕೆಂದು ಮನವಿ ಮಾಡಿದರು.

ಒಟ್ಟಾರೆ, ಸಮಾನ ಮನಸ್ಕರಿಂದ ನಡೆದ ಪರಿಸರ ಸ್ವಚ್ಛತಾ ಕಾರ್ಯಕ್ರಮ ವಿಶೇಷ ಗಮನ ಸೆಳೆಯುವುದರ ಜೊತೆಗೆ ಅಧಿಕಾರಿ ವರ್ಗಕ್ಕೆ ಬಿಸಿ ಮುಟ್ಟಿಸುವಂತಿತ್ತು.

ಇದನ್ನೂ ಓದಿ: ಗಂಗಾವತಿ | ನೆಹರೂ ಉದ್ಯಾನದ ಸ್ವಚ್ಛತೆ ಕುರಿತು ಶಾಸಕರ ಮಾತಿಗೂ ಕಿಮ್ಮತ್ತು ನೀಡದ ಪೌರಾಯುಕ್ತ: ಐಲಿ ನಾಗರಾಜ

ಈ ವೇಳೆ ಡಾ. ಶಿವಕುಮಾರ್ ಮಾಲಿ ಪಾಟೀಲ್, ಆಂಜನೇಯ, ತಾಲೂಕ ಪಂಚಾಯತಿ ಮಾಜಿ ಅಧ್ಯಕ್ಷ ರಫೀಕ್, ಮಂಜುನಾಥ್ ಗುಡ್ಲಾನೂರು, ಪಂಪಾಪತಿ ಇಂಗಳಗಿ, ಸೌಮ್ಯ ಸೇರಿದಂತೆ ಚಿಕ್ಕ ಮಕ್ಕಳು ಸಹ ಸ್ವಚ್ಛತೆಯಲ್ಲಿ ಪಾಲ್ಗೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...