ರಾಮನಗರ | ಸಜ್ಜನಿಕೆಯ ರಾಜಕಾರಣ ಎಸ್.ಎಂ.ಕೃಷ್ಣ ಸಾವಿನೊಂದಿಗೆ ಕೊನೆಯಾಗಿದೆ: ಡಾ. ಎಂ.ಬೈರೇಗೌಡ

Date:

ಸಜ್ಜನಿಕೆಯ ರಾಜಕಾರಣ ಎಸ್.ಎಂ.ಕೃಷ್ಣ ಸಾವಿನೊಂದಿಗೆ ಕೊನೆಯಾಗಿದೆ. ಹಲವು ತೊಂದರೆ ತೊಡಕುಗಳನ್ನು ನಿವಾರಿಸಿಕೊಂಡು ದಿಟ್ಟತನದ ಆಡಳಿತ ನೀಡಿದ ಸಜ್ಜನ ರಾಜಕಾರಣಿಗಳಲ್ಲಿ ಇವರು ಅಗ್ರಗಣ್ಯರು. ಅಸ್ಖಲಿತ ಕನ್ನಡ, ಇಂಗ್ಲೀಷ್ ಭಾಷೆ, ನಗು ಮೊಗ, ಉತ್ತಮ ವಸ್ತ್ರಗಳನ್ನು ಧರಿಸುವುದು ಇವೆಲ್ಲವೂ ಅವರ ವ್ಯಕ್ತಿತ್ವದ ಭಾಗವಾಗಿದ್ದವು ಎಂದು ಸಾಹಿತಿ ಡಾ ಎಂ.ಬೈರೇಗೌಡ ನುಡಿದರು.

IMG 20241217 WA0034

ಅವರು ರಾಮನಗರ ಜಿಲ್ಲಾ ಕಸಾಪ ಕಛೇರಿಯಲ್ಲಿ ಮಂಗಳವಾರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ಇತ್ತೀಚೆಗೆ ನಿಧನರಾದ ಮಾಜಿ ಮುಖ್ಯಮಂತ್ರಿ ಮಾಜಿ ಕೇಂದ್ರ ಸಚಿವ ಹಾಗೂ ಮಾಜಿ ರಾಜ್ಯಪಾಲರುಗಳಾದ ಎಸ್.ಎಂ. ಕೃಷ್ಣ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗ್ರಾಮೀಣ ಕರ್ನಾಟಕವನ್ನು ಮರೆತ ಮುಖ್ಯಮಂತ್ರಿ ಎಂಬ ಆರೋಪ ಮಾಡುವವರಿಗೆ ಅರ್ಥ ಆಗಬೇಕು. ಕರ್ನಾಟಕದ ಹಳ್ಳಿಗಾಡಿನ ಮಕ್ಕಳು ಐಟಿ ಬಿಟಿ ಹೆಸರಿನಲ್ಲಿ ಪ್ರಪಂಚ ಪರ್ಯಟನೆ ಮಾಡಲು ಎಸ್.ಎಂ.ಕೃಷ್ಣ ಅನುವು ಮಾಡಿಕೊಟ್ಟರು. ಬರಗಾಲ, ವರನಟ ರಾಜಕುಮಾರ್ ಅಪಹರಣ ಇತ್ಯಾದಿ ಸವಾಲುಗಳನ್ನು ಎದುರಿಸಿದ ರೀತಿ ಗಮನಾರ್ಹ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿವೃತ್ತ ಪ್ರಾಂಶುಪಾಲರ ಸಂಘದ ಅಧ್ಯಕ್ಷ ವನರಾಜ್ ಮಾತನಾಡಿ, ಬಿಸಿಯೂಟದ ಯೋಜನೆ, ಸ್ತ್ರೀಶಕ್ತಿ ಸಂಘದ ಸ್ಥಾಪನೆಯಂಥ ಹತ್ತು ಹಲವು ಸಾಧನೆಯ ಮೈಲಿಗಲ್ಲು ಅವರ ಹೆಸರಿನಲ್ಲಿ ಇವೆ ಎಂಬ ವಿಚಾರಗಳನ್ನು ನುಡಿದರು.

ಇದನ್ನು ಓದಿದ್ದೀರಾ? ಮಂಡ್ಯ | ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ; ಸ್ಪಷ್ಟ ನಿಲುವು ತಿಳಿಸದ ಸಚಿವ

ತಾಲ್ಲೂಕು ಕ.ಸಾ.ಪ ಅಧ್ಯಕ್ಷ ಬಿ.ಟಿ.ದಿನೇಶ್ ಬಿಳಗುಂಬ ಮಾತನಾಡಿ, ಎಸ್.ಎಂ.ಕೃಷ್ಣ ಅವರ ಜನ್ಮದಿನವನ್ನು ಐಟಿ ಬಿಟಿ ದಿನವನ್ನಾಗಿ ಆಚರಿಸಲು ಕರ್ನಾಟಕ ಸರ್ಕಾರ ಅಧಿಕೃತವಾಗಿ ಘೋಷಣೆ ಮಾಡಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಟಿ. ನಾಗೇಶ್ ಸಮಗ್ರ ಅಭಿವೃದ್ಧಿಯ ಹರಿಕಾರ. ಇಡೀ ದೇಶವೇ ಮೆಚ್ಚುವ ರಾಜಕಾರಣಿ ಎಸ್.ಎಂ.ಕೃಷ್ಣ ಎಂದು ಶ್ಲಾಘಿಸಿದರು.

ಇದೆ ಸಂದರ್ಭದಲ್ಲಿ ನಮ್ಮನಗಲಿದ ನೀರಾವರಿ ತಜ್ಞ ವೆಂಕಟೇಗೌಡ, ನಾಡು ನುಡಿ ಹೋರಾಟಗಾರ ಲಿಂಗೇಗೌಡ, ವೃಕ್ಷ ಮಾತೆ ತುಳಸಿಗೌಡ ರವರುಗಳಿಗೂ ನುಡಿ ನಮನ ಸಲ್ಲಿಸಲಾಯಿತು.

ಇದನ್ನು ನೋಡಿದ್ದೀರಾ? ತುಮಕೂರು | ಹಾಸ್ಟೆಲ್ ಅವ್ಯವಸ್ಥೆ ವಿರುದ್ಧ ಸಿಡಿದೆದ್ದ ವಿದ್ಯಾರ್ಥಿನಿಯರು!

ಹಿರಿಯ ಸಮಾಜ ಸೇವಕ ವೆಂಕಟೇಶ್, ಕನ್ನಡ ಸಮದ್, ತಾಲೂಕು ಕಸಾಪ ಸಂಚಾಲಕ ಬಿ.ಟಿ ರಾಜೇಂದ್ರ, ಚಕ್ರಬಾವಿ ಸುರೇಶ್, ಕವಿ ಕಿರಣ್ ರಾಜ್ ತುಂಬೇನಹಳ್ಳಿ, ತಾಲೂಕು ಕಸಾಪ ಗೌರವ ಕಾರ್ಯದರ್ಶಿಗಳಾದ ಕಿರಣ್, ಗೌರವ ಕೋಶಾಧ್ಯಕ್ಷ ನಂಜುಂಡಿ ಬಾನಂದೂರು ಮಾತನಾಡಿದರು.

ನಿವೃತ್ತ ಪ್ರಾಧ್ಯಾಪಕ ಕರಿಯಪ್ಪ, ಅಬ್ದುಲ್ ಝಬಿ, ಕೂಟಗಲ್ಲು ಹೋಬಳಿ ಘಟಕದ ಅಧ್ಯಕ್ಷ ಕ್ಯಾಸಾಪುರ ದೇವರಾಜ್, ಡಾ.ಹೇಮಂತ್ ಗೌಡ, ಪ್ರಕಾಶ್, ಕುಮಾರ್ ಮುಂತಾದವರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...