ಮೈಸೂರು ದಸರಾ ಸಮಯದಲ್ಲಿ ಬಲೂನು ಮಾರಾಟ ಮಾಡಲು ಬಂದಿದ್ದ ಅಪ್ರಾಪ್ತ ಬಾಲಕಿಯ ದೇಹ ವಸ್ತು ಪ್ರದರ್ಶನದ ಮುಂಭಾಗದ ದೊಡ್ಡಕೆರೆ ಮೈದಾನದಲ್ಲಿ ಪತ್ತೆಯಾಗಿತ್ತು. ಕೃತ್ಯ ಆಧರಿಸಿ ತನಿಖೆ ಕೈಗೊಂಡಿದ್ದ ಪೊಲೀಸರು ಅತ್ಯಾಚಾರವೆಸಗಿ, ಕೊಲೆ ಮಾಡಿದ್ದ ಆರೋಪಿ ಕಾರ್ತಿಕ್ (31) ನನ್ನು ಬಂಧಿಸಿದ್ದಾರೆ.
ಮೃತ ಬಾಲಕಿ ಗುಲ್ಬರ್ಗ ಮೂಲದ ಅಲೆಮಾರಿ ಜನಾಂಗಕ್ಕೆ ಸೇರಿದ ರಾಧಿಕಾ (9). ತಂದೆ ದೇಸಿ, ತಾಯಿ ಅಂಬಿಕಾ ಎಂದು ತಿಳಿದುಬಂದಿದೆ. ದಸರಾ ಹಿನ್ನಲೆಯಲ್ಲಿ 50ಕ್ಕೂ ಹೆಚ್ಚು ಕುಟುಂಬಗಳು ಬಲೂನು ಮಾರಾಟ ಮಾಡಲು ಮೈಸೂರಿನ ಅರಮನೆ ಮುಂಭಾಗಕ್ಕೆ ಬಂದಿದ್ದು, ಅಲ್ಲಿರುವ ದೇವಸ್ಥಾನ, ಜೋಪಡಿಗಳಲ್ಲಿ ವಾಸವಾಗಿದ್ದರು.
ಬಾಲಕಿಯ ಶವ ಪತ್ತೆಯಾಗುತ್ತಿದ್ದಂತೆ ಆರೋಪಿ ಪತ್ತೆಗೆ ಬಲೆ ಬಿಸಿದ್ದ ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸಿದಾಗ ಪತ್ತೆಯಾಗಿದ್ದು ಸಿದ್ದಲಿಂಗಪುರದ ಕಾರ್ತಿಕ್. ಕೊಲೆ ಆರೋಪಿ ಇಂತಹದ್ದೇ ಪ್ರಕರಣವೊಂದರಲ್ಲಿ 2 ವರ್ಷ ಜೈಲು ಶಿಕ್ಷೆ ಅನುಭವಿಸಿ ನಾಲ್ಕು ತಿಂಗಳ ಹಿಂದೆಯಷ್ಟೇ ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದ.
ಈ ಸುದ್ದಿ ಓದಿದ್ದೀರಾ? ಮೈಸೂರು | ವಸ್ತು ಪ್ರದರ್ಶನ ಮೈದಾನದಲ್ಲಿ ಬಾಲಕಿ ಮೃತದೇಹ ಪತ್ತೆ ಪ್ರಕರಣ: ಆರೋಪಿ ಬಂಧನ
ಆರೋಪಿ ಊರಿಗೆ ತೆರಳದೆ ಮದ್ಯ ಸೇವಿಸಿ ಎಲ್ಲೆಂದರಲ್ಲಿ ಅಲಿಯುತಿದ್ದ ಎಂದು ಪೊಲೀಸರ ವಿಚಾರಣೆಯಲ್ಲಿ ತಿಳಿದುಬಂದಿದೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.





