ಗದಗ | ಸಮೀರ, ನಬಿಸಾಬ ಕುಟುಂಬಕ್ಕೂ ಪರಿಹಾರ ನೀಡಿ: ಸಾಹಿತಿ ಬಸವರಾಜ್ ಸೂಳಿಬಾವಿ

Date:

  • ಮುಸ್ಲಿಂ ಎಂಬ ಕಾರಣಕ್ಕೆ ಬಿಜೆಪಿ ಸರ್ಕಾರವು ಆ ಕಡೆ ಗಮನಹರಿಸಲಿಲ್ಲ
  • ನಾಲ್ಕು ಮುಸ್ಲಿಂ ಕುಟುಂಬಗಳಿಗೆ ಪರಿಹಾರ ಘೋಷಿಸಿದ್ದು ಉತ್ತಮ ಕೆಲಸ

ಕೋಮು ದಳ್ಳುರಿಗೆ ಬಲಿಯಾದ ಸಮೀರ ಶಹಾಪುರ, ನಬಿಸಾಬ ಎಂ ಕಿಲ್ಲೇದಾರ ಕುಟುಂಬಗಳಿಗೂ ಸರ್ಕಾರ ಸೂಕ್ತ ಪರಿಹಾರ ಘೋಷಿಸಬೇಕು ಎಂದು ಸಾಹಿತಿ ಬಸವರಾಜ್ ಸೂಳಿಬಾವಿ ಒತ್ತಾಯಿಸಿದ್ದಾರೆ.

ಕೋಮು ದ್ವೇಷಕ್ಕೆ ಬಲಿಯಾದ ದಕ್ಷಿಣ ಕನ್ನಡ ಜಿಲ್ಲೆಯ ಮಸೂದ್, ಫಾಜಿಲ್, ಅಬ್ದುಲ್ ಖಲೀಲ್, ದೀಪಕರಾವ್ ಎಂಬ ನಾಲ್ಕು ಕುಟುಂಬಗಳಿಗೆ ಪರಿಹಾರದಲ್ಲಿ ಆದ ತಾರತಮ್ಯ ಸರಿ ಪಡಿಸಿ ಈ ನಾಲ್ಕು ಕುಟುಂಬಗಳಿಗೆ 25 ಲಕ್ಷ ರೂ. ಪರಿಹಾರ ಘೋಷಿಸಿದ್ದು, ತುಂಬ ಒಳ್ಳೆಯ ಕೆಲಸ ಎಂದು ಸಾಹಿತಿ ಬಸವರಾಜ ಸೂಳಿಬಾವಿ ಹೇಳಿದರು.

2022ರ ಜನವರಿ 14 ರಂದು ಕೋಮುದಳ್ಳುರಿಗೆ ಬಲಿಯಾದ ಗದಗ ಜಿಲ್ಲೆಯ ನರಗುಂದದ ಸಮೀರ್ ಶಹಾಪುರ ಕುಟುಂಬವನ್ನು ಸರ್ಕಾರ ಮರೆತು ಬಿಟ್ಟಿದೆ. ಸಮೀರ್ ಕುಟುಂಬಕ್ಕೆ ಪರಿಹಾರ ಘೋಷಿಸಿ ತಲುಪಿಸಬೇಕು. ಎಚ್ ಕೆ ಪಾಟೀಲ ಅವರು ಕೂಡ ಈ ಸಂಗತಿಯನ್ನು ಸರ್ಕಾರದ ಗಮನಕ್ಕೆ ತರಬೇಕಿತ್ತು. ಈಗಲಾದರೂ ಈ ಬಗ್ಗೆ ಅವರು ಗಮನ ಹರಿಸಬೇಕು. ಸಿಎಂ ಸಿದ್ಧರಾಮಯ್ಯ ಅವರು ಕೋಮುದಳ್ಳುರಿಗೆ ಬಲಿಯಾದ ನರಗುಂದದ ಸಮೀರ್ ಕುಟುಂಬಕ್ಕೆ ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆ ನಡೆದಾಗ ನರಗುಂದ ಶಹರಕ್ಕೆ ಸತ್ಯ ಶೋಧನಾ ಗೆಳೆಯರ ತಂಡ ಭೇಟಿ ಮಾಡಿತ್ತು. ಸಮೀರ ಶಹಾಪುರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಲ್ಲದೆ, ನಡೆದ ಘಟನೆಯ ಎಲ್ಲ ವಿವರವನ್ನು ಕಲೆ ಹಾಕಿತ್ತು. ಆ ವಿಷಯವಾಗಿ ನರಗುಂದದ ಡಿವೈಎಸ್ಪಿ ಅವರೊಡನೆ ಮಾತುಕತೆ ನಡೆಸಲಾಗಿತ್ತು. ಡಿವೈಎಸ್ಪಿ ಕೂಡ ನಮ್ಮೆದುರು ಕೋಮುಶಕ್ತಿ ದುಷ್ಕೃತ್ಯವನ್ನು ಒಪ್ಪಿಕೊಂಡು ತನಿಖೆಯ ವರದಿ ಸಲ್ಲಿಸುವದಾಗಿ ಹೇಳಿದ್ದರು ಎಂದು ತಿಳಿಸಿದ್ದಾರೆ.

ಸತ್ಯ ಶೋಧನಾ ವರದಿಯನ್ನು ಬಿಡುಗಡೆ ಮಾಡಲಾಗಿತ್ತು. ಸಮೀರ್ ಕುಟುಂಬಕ್ಕೆ ಸೂಕ್ತ ಪರಿಹಾರ ಸಿಗಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದೇವು. ಬಿಜೆಪಿ ಸರ್ಕಾರವು ಸತ್ತವನು ಮುಸ್ಲಿಂ ಎಂಬ ಕಾರಣಕ್ಕೆ ಆ ಕಡೆ ಗಮನವನ್ನೇ ಹರಿಸಿರಲಿಲ್ಲ. ಇದನ್ನು ಗಮನಕ್ಕೆ ತಂದುಕೊಂಡು ಸಿಎಂ ಸಿದ್ಧರಾಮಯ್ಯ ಅವರು ನರಗುಂದದ ಸಮೀರ ಶಹಾಪುರ ಕುಟುಂಬಕ್ಕೆ ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ.

ಗದಗ ಜಿಲ್ಲಾಧಿಕಾರಿಗಳು ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಸಮೀರ್ ಕುಟುಂಬಕ್ಕೆ ಪರಿಹಾರ ಸಿಗುವ ಹಾಗೆ ಕ್ರಮ ಕೈಗೊಳ್ಳಬೇಕು ಎಂದಯ ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಪೊಲೀಸರಿಂದ ಹಲ್ಲೆ ಆರೋಪ; ನೊಂದ ಯುವಕ ಆತ್ಮಹತ್ಯೆ

2022ರ ಎಪ್ರಿಲ್ 9 ರಂದು ಧಾರವಾಡದ ನುಗ್ಗಿಕೇರಿ ಹನುಮಂತನ ಗುಡಿಯ ಪೌಳಿಯಲ್ಲಿ ಹದಿನೈದು ವರ್ಷಗಳಿಂದ ಕಲ್ಲಂಗಡಿ ಹಣ್ಣು ಮತ್ತು ಇತರೆ ಹಣ್ಣುಗಳನ್ನು ಮಾರುತ್ತಿದ್ದ ಬಡ ವ್ಯಾಪಾರಿ ನಬಿಸಾಬ ಎಂ ಕಿಲ್ಲೇದಾರ ಅವರ ಅಂಗಡಿಯ ಮೇಲೆ ಶ್ರೀರಾಮ ಸೇನೆಯ ಪುಂಡರ ಗುಂಪು ದಾಳಿ ನಡೆಸಿ 5 ಕ್ವಿಂಟಲ್ ಹಣ್ಣು ನಾಶ ಮಾಡಿ ಅವರ ಬದುಕನ್ನು ಬೀದಿಪಾಲು ಮಾಡಿತು ಎಂದು ವಿವರಿಸಿದ್ದಾರೆ.

ಈ ದುಷ್ಕೃತ್ಯ ನಡೆದ ಮೇಲೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಆ ಕಡೆ ತಿರುಗಿಯೂ ನೋಡಲಿಲ್ಲ. ಅದು ರಾಷ್ಟ್ರೀಯ ಸುದ್ಧಿಯಾದರೂ ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಯಿ ಚಲನಚಿತ್ರ ನೋಡಿ ಅತ್ತರೆ ವಿನಃ ಬೀದಿಪಾಲಾದ ನಬೀಸಾಬರ ಅಳಲನ್ನು ಒಂದಿಷ್ಟೂ ಕೇಳಿಸಿಕೊಳ್ಳಲಿಲ್ಲ. ನಬೀಸಾಬ ಮುಸಲ್ಮಾನ ಅನ್ನುವ ಕಾರಣಕ್ಕಾಗಿ ಈ ಸಾಮಾನ್ಯ ಮನುಷ್ಯನ ಕಣ್ಣೀರು ಅಂದಿನ ರಾಜ್ಯ ಸರ್ಕಾರಕ್ಕೆ ಏನೂ ಅನ್ನಿಸಲಿಲ್ಲ ಎಂಬುದನ್ನು ಇಡೀ ರಾಜ್ಯವೇ ನೋಡಿದೆ. ಅಂದು ಬೀದಿಪಾಲಾದ ನಬೀಸಾಬರ ಬದುಕನ್ನು ಸರಿಪಡಿಸುವ ಅಗತ್ಯ ಈಗಿನ ರಾಜ್ಯ ಸರ್ಕಾರದ ಮೇಲಿದೆ. ನಬೀಸಾಬರಿಗೆ ಪರಿಹಾರ ನೀಡಿ ಬದುಕು ಕಟ್ಟಿಕೊಳ್ಳಲು ನೆರವಾಗಬೇಕು ಎಂಬುದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...