ಕೊಡಗು | ಶಿಕ್ಷಣದಿಂದ ಜ್ಞಾನ; ಶ್ರಮದಿಂದ ಬದುಕು : ಸಾಹಿತಿ ಉಳುವಂಗಡ ಕಾವೇರಿ ಉದಯ

Date:

ಕೊಡಗು ಜಿಲ್ಲೆ, ಮಡಿಕೇರಿ ತಾಲ್ಲೂಕು ಬಿರುನಾಣಿಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು,ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು,ಹುದಿಕೇರಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸರಕಾರಿ ಪ್ರಾಥಮಿಕ ಶಾಲೆ ಸಂಯುಕ್ತಾಶ್ರಯದಲ್ಲಿ ‘ ಕೈಬುಲಿರ ಪಾರ್ವತಿ ಬೋಪಯ್ಯ ದತ್ತಿ ‘ ಕಾರ್ಯಕ್ರಮದಲ್ಲಿ ಸಾಹಿತಿ ಉಳುವಂಗಡ ಕಾವೇರಿ ಉದಯ ಮಾತನಾಡಿ ” ಶಿಕ್ಷಣದಿಂದ ಜ್ಞಾನ, ಶ್ರಮದಿಂದ ಬದುಕು ” ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಜ್ಞಾನವನ್ನು ಯಾರು ಕದಿಯಲು ಸಾಧ್ಯವಿಲ್ಲ, ಶಿಕ್ಷಣದಿಂದ ಬರುವಂತದ್ದು ಮಕ್ಕಳು ಪ್ರೌಢಶಾಲಾ ಹಂತದಲ್ಲಿ ಉತ್ತಮ ಶಿಕ್ಷಣ ಪಡೆದರೆ ಯಾವ ಸಾಧನೆ ಬೇಕಾದರೂ ಮಾಡಬಹುದು .ದತ್ತಿ ದಾನಿಗಳ ಆಶಯದಂತೆ 2023-24ನೇ ಸಾಲಿನಲ್ಲಿ 10ನೇ ತರಗತಿಯ ಕನ್ನಡ ಮಾಧ್ಯಮ ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಮಾದಾಪುರದ ಶ್ರೀಮತಿ ಚೆನ್ನಮ್ಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಅದವಿಯಾ ಯು ಮೂಡಬಿದರೆಯ ಕಾಲೇಜಿನಲ್ಲಿ ಮುಂದಿನ ಶಿಕ್ಷಣ ಪಡೆಯುತಿದ್ದು ಮಕ್ಕಳು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಸಾಕ್ಷಿ, ಈ ಸಮಯದಲ್ಲಿ ಗೌರವಿಸುತ್ತಿರುವುದು ಹೆಮ್ಮೆಯ ವಿಷಯ ಎಂದರು.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ ಪಿ ಕೇಶವ ಕಾಮತ್ ಮಾತನಾಡಿ ” ಕೊಡಗು ಜಿಲ್ಲೆಯಲ್ಲಿ ಈಗಾಗಲೇ 35 ದತ್ತಿನಿಧಿಗಳು ಸ್ಥಾಪಿತವಾಗಿದೆ. ವಿದ್ಯಾರ್ಥಿಗಳಿಗೆ ಸಾಹಿತ್ಯ,ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ವಿಚಾರಗಳ ಪರಿಚಯ ಮಾಡುವುದಾಗಿದೆ. ಜಾನಪದ ಕಲೆ, ಜಾನಪದ ಸಾಹಿತ್ಯ, ಕನ್ನಡ ಸಾಹಿತ್ಯದ ಬೆಳವಣಿಗೆ, ಕನ್ನಡ ಮತ್ತು ಕೊಡವ ಭಾಷಾ ಸಂಬಂಧ, ಕೊಡಗಿನ ಸ್ವಾತಂತ್ರ್ಯ ಹೋರಾಟಗಾರರಾದ ಫೀಲ್ಡ್ ಮಾರ್ಷಲ್ ಕಾರಿಯಪ್ಪ, ಜನರಲ್ ತಿಮ್ಮಯ್ಯ ಅವರ ಸಾಧನೆಗಳ ಕುರಿತು ಉಪನ್ಯಾಸಗಳಿವೆ “ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮಡಿಕೇರಿ | ಕೊಡಗು ವಿವಿ ಮುಚ್ಚಿದರೆ ಜಿಲ್ಲೆಗೆ ಅಪಮಾನ ; ಕೆಎಂಎ ಅಧ್ಯಕ್ಷ ಸೂಫಿ ಹಾಜಿ

ಬಿರುನಾಣಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಮ್ಮತ್ತಿರ ರಾಜೇಶ್, ಪೊನ್ನಂಪೇಟೆ ತಾಲ್ಲೂಕು ಅಕ್ರಮ ಸಕ್ರಮ ಸಮಿತಿಯ ಅಧ್ಯಕ್ಷ ಎ ಬಿ ಲಾಲ ಅಪ್ಪಣ್ಣ,ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೋಳೆರ ದಯಾ ಚಂಗಪ್ಪ, ಶಾಲಾ ಮುಖ್ಯೋಪಾಧ್ಯಾಯರಾದ ಬಿ ಬಿ ಸರಸ್ವತಿ.ಮಾಜಿ ಯೋಧ ಕಾಳಿಮಾಡ ಮುತ್ತಣ್ಣ, ತಾಲೂಕು ಪಂಚಾಯತಿ ಮಾಜಿ ಸದಸ್ಯ ಬೊಳ್ಳೆರ ಪೊನ್ನಪ್ಪ, ಹುದಿಕೇರಿ ಹೋಬಳಿ ಗೌರವ ಕಾರ್ಯದರ್ಶಿ ಕುಪ್ಪಣ್ಣಮಾಡ ನಂಜಮ್ಮ, ಹುದಿಕೇರಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಾನಂಗಡ ಅರುಣ್, ಪೊನ್ನಂಪೇಟೆ ತಾಲ್ಲೂಕು ಕಸಾಪ ನಿರ್ದೇಶಕ ಬುಟ್ಟಿಯಂಡ ಸುನಿತ ಗಣಪತಿ,ಹುದಿಕೇರಿ ಹೋಬಳಿ ಕಸಾಪ ಗೌರವ ಕೋಶಾಧಿಕಾರಿ ಅಣ್ಣಳಮಾಡ ಭವ್ಯ, ಸಂಘಟನಾ ಕಾರ್ಯದರ್ಶಿ ಕರ್ತಮಾಡ ಪಾರ್ವತಿ ವಿಜಯ, ಸದಸ್ಯರುಗಳಾದ ಬುಟ್ಟಿಯಂಡ ರೋಹಿಣಿ, ಧರಣಿ, ಸಬಿತಾ, ಸದಕುಮಾರ್, ಅರುವತ್ತೊಕ್ಲುವಿನ ಕೆ ಪಿ ಅಶ್ರಫ್, ಶಾಲಾ ಶಿಕ್ಷಕರು ಹಾಗೂ ಪೋಷಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...