ಬೀದರ್‌ | ಸಮಪಾಲು-ಸಮಬಾಳು ಆಶಯದಂತೆ ʼಬದುಕಿಗಾಗಿ ಭೂಮಿʼ ಕೊಡಿ

Date:

ಹಲವು ದಶಕಗಳಿಂದ ಅನ್ಯಾಯವನ್ನೇ ಸಹಿಸಿಕೊಂಡು ಬಂಜೆ ಭೂಮಿ ಉಳುಮೆ ಮಾಡಿ ಜೀವನ ಸಾಗಿಸುತ್ತಿರುವ ಬಡ ರೈತರಿಗೆ ಸಂವಿಧಾನಬದ್ಧ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಆಶಯದಂತೆ ಸರ್ಕಾರ ರೈತರಿಗೆ ಜಮೀನಿನ ಹಕ್ಕು ಪತ್ರ ನೀಡಿ, ಬದುಕಲು ದಾರಿ ಮಾಡಿಕೊಡಬೇಕೆಂದು ಭಾರತೀಯ ಬೌದ್ಧ ಮಹಾಸಭಾ ರಾಜ್ಯ ಸಮಿತಿ ಅಗ್ರಹಿಸಿದೆ.

ಭಾರತೀಯ ಬೌದ್ಧ ಮಹಾಸಭಾ ಮತ್ತು ಬೀದರ ಜಿಲ್ಲೆಯ ಹಲವಾರು ಜನಪರ ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳ ಸಂಯುಕ್ತಾಶ್ರಯದಲ್ಲಿ ಅನ್ಯಾಯಕ್ಕೊಳಗಾದ ರೈತರಿಗೆ ʼಬದುಕಿಗಾಗಿ ಭೂಮಿ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು, ಬದುಕಿಗಾಗಿ ಭೂಮಿ, ನ್ಯಾಯಕ್ಕಾಗಿ ಹೋರಾಟ ರೂಪಿಸಲಾಗಿದ್ದು ಸೆ.17 ರಂದು ಕಲಬುರಗಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಲಾಗುವುದು ಎಂದು ನಗರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ʼಸೆ.17ರಂದು ಕಲಬುರಗಿಯಲ್ಲಿ ನಡೆಯುವ ವಿಶೇಷ ಸಚಿವ ಸಂಪುಟದಲ್ಲಿ ಅರಣ್ಯ ಜಮೀನು ಒತ್ತುವರಿ ವಿಷಯ ಚರ್ಚೆ ಮಾಡಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾ ಶಾಸಕರಿಗೆ ಮನವಿ ಮಾಡಿಕೊಳ್ಳುತ್ತೇವೆ. ಜಿಲ್ಲಾವಾರು ರೈತರು ಮತ್ತು ಜನಪರ ಹೋರಾಟ ಸಮಿತಿಗಳು ಒಗ್ಗೂಡಿ, ಈ ಸಚಿವ ಸಂಪುಟಕ್ಕೆ ಒತ್ತಾಯಿಸಲು ಬೀದರನಿಂದ ಹೊರಡಲಿದ್ದೇವೆ. ಸರ್ಕಾರಿ ಗೈರಾಣದಲ್ಲಿ ಉಳುಮೆ ಮಾಡುತ್ತಿರುವ ರೈತರಿಗೆ ಅನ್ಯಾಯ ಎಸಗಲು ಇವರೇನು ಪರಕಿಯವರಾ? ವಿದೇಶಿಗರಾ? ಸಂವಿಧಾನದ ಮೂಲಭೂತ ಹಕ್ಕು ಇವರಿಗೇಕೆ ಅನ್ವಯಿಸುವುದಿಲ್ಲʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಬೀದರ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಉಳುಮೆ ಮಾಡುವ ರೈತರಿಗೆ ಅರಣ್ಯ ಪ್ರದೇಶದಿಂದ ಒತ್ತುವರಿ ಸೂಚಿಸಿದ್ದಾರೆ. ಬಸವಕಲ್ಯಾಣ, ಭಾಲ್ಕಿಯಲ್ಲಿ ರೈತರಿಗೆ ಸೂಚನೆ ನೀಡದೆ ಸಿ-ಫಾರಂ ಹೊಂದಿರುವ ಜಮೀನಿನಲ್ಲಿ ಅರಣ್ಯ ಇಲಾಖೆಯಿಂದ ಸಸಿ ನೆಡಲಾಗಿದೆ. ತಾಲೂಕುವಾರು ಅಂದಾಜು 2-3 ಸಾವಿರ ಎಕರೆ ರೈತರು ಜಮೀನು ಒತ್ತುವರಿಯಾಗಿದೆ. ಅಂದರೆ ಜಿಲ್ಲಾವಾರು 10-15 ಸಾವಿರ ಎಕರೆ ಜಮೀನು ಅರಣ್ಯ ಇಲಾಖೆ ವಶಕ್ಕೆ ಪಡೆದು ಬಡ ರೈತರಿಗೆ ಅನ್ಯಾಯ ಎಸಗಿದೆʼ ಎಂದು ದೂರಿದರು.

ʼಕಳೆದ 40 ವರ್ಷಗಳಿಂದ ಸರ್ಕಾರಿ ಗೈರಾಣ ಜಮೀನಿನಲ್ಲಿ ಉಳುಮೆ ಮಾಡಿ ಜೀವನ ಸಾಗಿಸುತ್ತಿರುವ ರೈತರಿಗೆ ಜಮೀನಿನ ಹಕ್ಕು ಪತ್ರ ನೀಡಬೇಕು. ಕುಟುಂಬದಲ್ಲಿ ಹೆಚ್ಚಿನ ಸದಸ್ಯರು ಇರುವ ಕುಟುಂಬಗಳಿಗೆ ಉಳುಮೆ ಮಾಡುವ ಭೂಮಿಯ ಸಿ-ಫಾರಂ ನೀಡಬೇಕು. ಸಣ್ಣ ರೈತರ ಮೇಲೆ ದಬ್ಬಾಳಿಕೆ ನಡೆಸಿ ಕಡಿಮೆ ಬೆಲೆಗೆ ಜಮೀನು ಖರೀದಿಸಿ ಮೋಸ ಮಾಡುತ್ತಿರುವು ಮೇಲ್ವರ್ಗದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅರಣ್ಯ ಇಲಾಖೆ ಮತ್ತು ಜಿಲ್ಲಾಡಳಿತ ರೈತಾಪಿ ವರ್ಗಕ್ಕೆ ಒಕ್ಕಲೆಬ್ಬಿಸುವ ನಿರ್ಧಾರ ಹಿಂಪಡೆಯಬೇಕುʼ ಎಂದು ಆಗ್ರಹಿಸಿದರು.

ʼಸುಮಾರು 10 ಜಿಲ್ಲೆಗಳ ಪ್ರಗತಿಪರ ಮತ್ತು ನೊಂದ ರೈತರ ನಿಯೋಗವನ್ನು ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಲು ಬೀದರನಿಂದ ಕಲಬುರಗಿಗೆ ಹೊರಡಲಿದ್ದೇವೆ. ಒಂದು ವೇಳೆ ಮುಖ್ಯಮಂತ್ರಿಗಳು ನಮ್ಮ ಬೇಡಿಕೆಗಳು ಪರಿಶೀಲಿಸಿ, ಶೀಘ್ರ ಪರಿಹಾರ ಒದಗಿಸದಿದ್ದರೆ ರಾಜ್ಯಾದ್ಯಂತ ʼಬದುಕಿಗಾಗಿ ಭೂಮಿʼ ಎನ್ನುವ ಶೀರ್ಷಿಕೆಯಡಿ ಸರ್ಕಾರದ ವಿರುದ್ಧ ಬೃಹತ್ ಮಟ್ಟದ ಜನಾಂದೋಲನ ರೂಪಿಸಲಾಗುವುದುʼ ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಆಂಧ್ರಕ್ಕೆ ಪರಾರಿಯಾಗುತ್ತಿದ್ದ ಬಿಜೆಪಿ ಶಾಸಕ ಮುನಿರತ್ನ ಬಂಧನ

    ಈ ಸಂದರ್ಭದಲ್ಲಿ ಭಾರತೀಯ ಬೌದ್ಧ ಮಹಾಸಭೆಯ ರಾಜ್ಯಾಧ್ಯಕ್ಷ ಸೂರ್ಯಕಾಂತ ನಿಂಬಾಲ್ಕರ್, ರಾಜ್ಯ ಸಂಸ್ಕಾರ ವಿಭಾಗ ಕಾರ್ಯದರ್ಶಿ ವಿಷ್ಣುಕಾಂತ ಹುಡಗಿಕರ್, ಹಿರಿಯ ದಲಿತ ಮುಖಂಡರಾದ ರಾಜಕುಮಾರ ಮೂಲಭಾರತಿ, ಬಿಎಸ್‌ಪಿ ಜಿಲ್ಲಾ ಮುಖಂಡ ಸಚೀನ ಗಿರಿ, ಶಕ್ತಿಕಾಂತ ಭಾವಿದೊಡ್ಡಿ, ದಸಂಸ ಔರಾದ ಸಂಚಾಲಕ ಸುಭಾಷ ಲಾಧಾ, ದಲಿತ ಯುನಿಟಿ ಮೂವ್‌ಮೆಂಟ್ ಮುಖಂಡ ಪ್ರಕಾಶ ರಾವಣ, ದಲಿತ ಮುಖಂಡ ಗಣಪತಿ ವಾಸುದೇವ ಸೇರಿದಂತೆ ಅನೇಕರಿದ್ದರು.

    eedina
    ಈ ದಿನ ಡೆಸ್ಕ್‌
    Website |  + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

    ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

    ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

    ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

    ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

    ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

    ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...