ಕೊಡಗು | ಸಂಸತ್ ದಾಳಿಗೆ ನೇರ ಹೊಣೆಗಾರರಾದ ಪ್ರತಾಪ್ ಸಿಂಹ ರಾಜೀನಾಮೆ ನೀಡಲಿ; ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಒತ್ತಾಯ

Date:

ದೇಶದ ಸಂಸತ್ತಿನೊಳಗೆ ದಾಳಿ ನಡೆಸಿದ ಯುವಕರಿಗೆ ಮೈಸೂರು-ಕೊಡಗು ಕ್ಷೇತ್ರದ ಸಂಸದರಾದ ಪ್ರತಾಪ್ ಸಿಂಹ ಪಾಸ್ ನೀಡಿರುವುದು ಅತ್ಯಂತ ಕಳವಳಕಾರಿ ವಿಚಾರವಾಗಿದೆ. ಅದರಿಂದ ಈ ಘಟನೆಯ ನೈತಿಕ ಹೊಣೆ ಹೊತ್ತು ಪ್ರತಾಪ್ ಸಿಂಹ ಅವರು ಇನ್ನಾದರೂ ರಾಜೀನಾಮೆ ನೀಡಬೇಕು ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಪಿ.ಎ. ಹನೀಫ್ ಒತ್ತಾಯಿಸಿದ್ದಾರೆ.

ಈ ಕುರಿತು ಗೋಣಿಕೊಪ್ಪಲುನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಕಿಡಿಗೇಡಿಗಳು ನಡೆಸಿದ ಹೊಗೆ ಬಾಂಬ್ ದಾಳಿ ಇಡೀ ದೇಶವನ್ನೇ  ಆತಂಕಕ್ಕೀಡುಮಾಡಿದ್ದು, ಈ ಭದ್ರತಾ ಲೋಪ ಹೆಚ್ಚು ಆಘಾತಕಾರಿ ಘಟನೆಯಾಗಿದೆ. ಪ್ರತಾಪ್ ಸಿಂಹ ಒಬ್ಬ ಸಂಸದರಾಗಿ ಅಪರಿಚಿತರಿಗೆ ಪಾಸುಗಳನ್ನು ನೀಡಲು ಹೇಗೆ ಸಾಧ್ಯ? ಜವಾಬ್ದಾರಿಯುತ ವ್ಯಕ್ತಿಗಳು ಬೇಜವಾಬ್ದಾರಿಯಿಂದ ನಡೆಸುವ ಅನಾಹುತ ಮತ್ತು ಅದಕ್ಕೆ ಕಾರಣವಾಗುವುದು ಕೂಡಾ ಕಾನೂನಿನಲ್ಲಿ ಶಿಕ್ಷಾರ್ಹ ಅಪರಾಧವಾಗಿರುತ್ತದೆ.

ಈ ಹಿನ್ನೆಲೆಯಲ್ಲಿ ಘಟನೆ ನಡೆದ ದಿನದಂದೇ ಪ್ರತಾಪ್ ಸಿಂಹರನ್ನು ಸಂಸತ್ ಸದಸ್ಯ ಸ್ಥಾನದಿಂದ ಉಚ್ಚಾಟನೆ ಮಾಡಬೇಕಿತ್ತು ಎಂದು ಹೇಳಿರುವ ಹನೀಫ್, ಸಂಸತ್ತಿಗೆ 22 ವರ್ಷಗಳ ಹಿಂದಿನ ಭಯೋತ್ಪಾದಕರ ದಾಳಿ ದಿನವನ್ನೇ ಆರಿಸಿಕೊಂಡು ಈ ಕೃತ್ಯ ನಡೆದಿರುವುದನ್ನು ಗಮನಿಸಿದರೆ, ಇದರ ಹಿಂದೆ ಬೇರೆ ಬಹುದೊಡ್ಡ  ಹುನ್ನಾರವಿರುವ ಶಂಕೆ ಇದೆ. ಇದು ದೇಶದ ಸುರಕ್ಷತೆಯ ದೃಷ್ಟಿಯಿಂದ ಹಲವು ಪ್ರಶ್ನೆಗಳನ್ನು ಎತ್ತಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೈಸೂರು ಮೂಲದ ಮನೋರಂಜನ್ ಅವರಿಗೆ ಈ ಮೊದಲು ಪ್ರತಾಪ್ ಸಿಂಹ ಅವರೇ ಎರಡು ಬಾರಿ ಪಾಸ್ ನೀಡಿದ್ದರು ಎನ್ನಲಾಗುತ್ತಿದೆ. ಸಂಸತ್ ಸಭಾಂಗಣ ಪ್ರವೇಶಿಸಲು ಪಾಸ್ ಸ್ವೀಕರಿಸಿದ ವ್ಯಕ್ತಿ ನಡೆಸುವ ಎಲ್ಲ ಕೃತ್ಯಗಳಿಗೆ ಪಾಸ್ ಕೊಟ್ಟ ಸಂಸದರೇ ಜವಾಬ್ದಾರರಾಗಿರುತ್ತಾರೆ. ಪರಿಚಿತರಿಗಷ್ಟೇ ಪಾಸ್ ನೀಡಬೇಕು ಎಂಬ ನಿಯಮವಿದೆ. ಎಲ್ಲ ನಿಯಮಗಳನ್ನು ಪ್ರತಾಪ್ ಸಿಂಹ ಉಲ್ಲಂಘಿಸಿದ್ದಾರೆ. ಹಾಗಾಗಿ ಪ್ರತಾಪ್ ಸಿಂಹ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ಕೂಡಲೇ ಅಮಾನತುಪಡಿಸಿ ಎಂದು ಒತ್ತಾಯಿಸಿದರು.

ಈ ಕುರಿತು ಅವರನ್ನು ಸಮಗ್ರ ವಿಚಾರಣೆಗೆ ಒಳಪಡಿಸಬೇಕು ಎಂದು ಆಗ್ರಹಿಸಿರುವ ಹನೀಫ್, ಸಂಸತ್ತಿಗೆ ರಕ್ಷಣೆ ನೀಡಲಾಗದವರು, ಬಿಜೆಪಿಯ ನಡೆಯನ್ನು ಪ್ರಶ್ನಿಸಿದ ಸಂಸದರನ್ನು ಅಮಾನತುಗೊಳಿಸಿ ಪ್ರಜಾಪ್ರಭುತ್ವ ವಿರೋಧಿ ಧೋರಣೆ ಮೂಲಕ ಪೌರುಷ ಮೆರೆಯುತ್ತಿದ್ದಾರೆ. ಕರ್ತವ್ಯ ಲೋಪದ ನೆಪದಲ್ಲಿ ಭದ್ರತಾ ಸಿಬ್ಬಂದಿ ಅಮಾನತು ಮಾಡುತ್ತಿದ್ದಾರೆ. ಆದರೆ, ಈ ಭದ್ರತಾ ವೈಫಲ್ಯಕ್ಕೆ ಮೂಲ ಕಾರಣರಾಗಿರುವ ಸಂಸದ ಪ್ರತಾಪ್ ಸಿಂಹ ವಿರುದ್ಧ ಇದುವರೆಗೂ ಏಕೆ ಕ್ರಮ ಜರುಗಿಸಿಲ್ಲ. ಪಾಸ್ ನೀಡಿದ್ದರಿಂದಲೇ ಈ ಎಲ್ಲ ಅನಾಹುತಗಳಿಗೆ ಅವರೇ ಕಾರಣವಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಆರೋಪಿಗಳಾಗಿ ಗುರುತಿಸಿಕೊಂಡಿರುವ ಮೈಸೂರು ಮೂಲದ ಮನೋರಂಜನ್, ಉತ್ತರ ಪ್ರದೇಶದ ಲಖನೌದ ಸಾಗರ್ ಶರ್ಮಾ, ಹರ್ಯಾಣದ ನೀಲಂ ಹಾಗೂ ಐಕ್ಕಿ ಶರ್ಮಾ, ಗುರುಗ್ರಾಮದ ಲಲಿತ್ ಝಾ ಮಹಾರಾಷ್ಟ್ರದ ಅಮೋಲ್ ಶಿಂಧೆ ಎಲ್ಲರೂ ಒಗ್ಗೂಡಿದ್ದು ಹೇಗೆ?  ಒಂದೂವರೆ ವರ್ಷದಿಂದ ಸಂಚು ಹೂಡಿದ್ದರೂ ಕೇಂದ್ರ ಗುಪ್ತಚರ ಇಲಾಖೆಗೆ ಗೊತ್ತಾಗಲಿಲ್ಲವೇ? ಎಂದು ಕೇಳಿರುವ ಹನೀಫ್ ಅವರು, ಈ ಕೃತ್ಯದ ಹಿಂದೆ  ದೇಶದ್ರೋಹದ ದೊಡ್ಡ ಷಡ್ಯಂತ್ರವಿದೆ. ಆದ್ದರಿಂದ ಕೃತ್ಯದ ಹಿಂದಿರುವ ಸತ್ಯಾಂಶವನ್ನು ಬಯಲಿಗೆಳೆಯಲು ಉನ್ನತ ಮಟ್ಟದ ತನಿಖೆಯಾಗಬೇಕು. ಅದಕ್ಕೂ ಮೊದಲು ಪ್ರತಾಪ್ ಸಿಂಹ ಅವರನ್ನು ಸಮಗ್ರ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಗೋಷ್ಠಿಯಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಕಾರ್ಯದರ್ಶಿ ಜೋಕಿಂ ರಾಡ್ರಿಗಸ್, ಅಲ್ಪಸಂಖ್ಯಾತ ಘಟಕದ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೋಳುಮಂಡ ರಫೀಕ್ ಮತ್ತು ವಿರಾಜಪೇಟೆ  ನಗರ ಅಧ್ಯಕ್ಷರಾದ ಆಶೀಫ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...