ಜನರಿಗೆ ಮೊದಲು 15 ಲಕ್ಷ ಕೊ‌ಡಲಿ, ನಂತರ ನಮ್ಮ ಗ್ಯಾರಂಟಿ ಬಗ್ಗೆ ಬಿಜೆಪಿಯವರು ಮಾತನಾಡಲಿ: ಡಿ ಕೆ ಶಿವಕುಮಾರ್

Date:

  • ರಾಮಲಿಂಗಾರೆಡ್ಡಿ ಅವರಲ್ಲಿ ಯಾವುದೇ ಅಸಮಾಧಾವಿಲ್ಲ, ಸುಳ್ಳು ಸುದ್ದಿ ಬೇಡ
  • ‘ಒಂದು ಅಕೌಂಟ್‌ ಮಾಡಿಸಿ ಎಲ್ಲ ತಾಯಂದಿರಿಗೂ 2000 ಹಣ ಹಾಕುತ್ತೇವೆ’

ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆ ಮಾಡಿದ್ರೆ ತಾನೇ ಆ ಯೋಜನೆಗಳು ಪ್ರಚಾರ ಆಗೋದು. ಟೀಕಿಸುವವರ ದುಃಖ, ದುಮ್ಮಾನ ಅರ್ಥವಾಗುತ್ತದೆ. ನಾನು ಬಿಜೆಪಿ ಗೆಳೆಯರಿಗೆ ಕೇಳಲು ಇಷ್ಟಪಡುವೆ; ಮೊದಲು ನಮಗೆ 15 ಲಕ್ಷ ಕೊಡಿ ಸಾಕು ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಆಗ್ರಹಿಸಿದರು.

ರಾಮಲಿಂಗಾರೆಡ್ಡಿ ಅವರನ್ನು ಭೇಟಿಯಾದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, “15 ಲಕ್ಷ ಪ್ರತಿಯೊಬ್ಬರ ಅಕೌಂಟ್‌ಗೆ ಮೋದಿ ಹಾಕು‌ತ್ತೇನೆ ಎಂದು ಹೇಳಿದ್ದರಲ್ಲ, ಆ ಮಾತು ಎಲ್ಲಿ ಹೋಯಿತು? ಮೊದಲು ಆ ಬಗ್ಗೆ ಬಿಜೆಪಿಯವರು ಮಾತನಾಡಲಿ. ಮಿಕ್ಕ ಮಾತು ಬೇಡ. ಬರುವ ಪಾರ್ಲಿಮೆಂಟ್‌ ಚುನಾವಣೆಯೊಳಗೆ ಪ್ರತಿಯೊಬ್ಬರಿಗೆ 15 ಲಕ್ಷ ಹಾಕಲಿ” ಎಂದು ಒತ್ತಾಯಿಸಿದರು.

“ಬಿಜೆಪಿ ಅವರೇ ಹೇಳಿದ್ದರು, ಸಾಲ ಮನ್ನಾ ವಿಚಾರ ಏನಾಯ್ತು? ರೈತರಿಗೆ ಉಚಿತ ವಿದ್ಯುತ ಕೊಡ್ತೀವಿ ಎಂದಿದ್ದರು ಅದೇನಾಯ್ತು? ಮೊದಲು ತಮ್ಮ ಭರವಸೆ ಬಗ್ಗೆ ಮಾತನಾಡಲಿ ಬಿಜೆಪಿ ನಾಯಕರು. ಆಮೇಲೆ ಪ್ರತಿಭಟನೆ, ಆವೇಶದ ಮಾತುಗಳು ಇರಲಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚುನಾವಣೆಯಲ್ಲಿ ಗೆದ್ದು ಮಂತ್ರಿಗಳಾಗಬೇಕಿದ್ದವರು ಸೋಲಿನ ಗಾಯ ಕೆರೆಯುತ್ತಾ ಕೂತಾಗ..

“ಮನೆಯ ಯಜಮಾನತಿಗೆ 2000 ಕೊಡ್ತೀವಿ ಎಂದಿದ್ದೇವೆ. ನಾವು ಇದರಿಂದ ಹಿಂದೆ ಸರಿಯಲ್ಲ. ಒಂದು ಮನೆಯಲ್ಲಿ ಸೊಸೆ ಇದ್ದು, ಅತ್ತೆ ಇದ್ದರೆ ಯಾರು ಯಜಮಾನತಿ? ಒಂದು ವೇಳೆ ನಾವು ಕೊಡುವ ದುಡ್ಡಿಗೆ ಯಾವುದೇ ಗಂಡಸರು ಕೈ ಹಾಕಿದರೆ ಹೇಗೆ? ಅವಿದ್ಯಾವಂತ ಮಹಿಳೆಯರನ್ನು ಯಾಮಾರಿಸುವ ಗಂಡಂದಿರು ಇದ್ದಾರೆ. ಅದಕ್ಕೆ ನೀತಿ ನಿಯಮ ರೂಪಿಸುತ್ತಿದ್ದೇವೆ. ಒಂದು ಅಕೌಂಟ್‌ ಮಾಡಿಸಿ ಎಲ್ಲ ತಾಯಂದಿರಿಗೂ ಹಣ ಹಾಕುತ್ತೇವೆ” ಎಂದು ತಿಳಿಸಿದರು.

“ಒಂದನೇ ತಾರೀಕೆಗೆ ಕ್ಯಾಬಿನೆಟ್‌ ಇದೆ. ಎಲ್ಲ ರೀತಿಯಲ್ಲೂ ಸಲಹೆ ಸೂಚನೆ ತರಲು ಹೇಳಿದ್ದೇವೆ. ಯಾರು ಪ್ರತಿಭಟನೆ ಮಾಡ್ತಾರೋ ಮಾಡಲಿ. ಇದು ಪ್ರಜಾಪ್ರಭುತ್ವ” ಎಂದರು.

ರಾಮಲಿಂಗಾರೆಡ್ಡಿ ಅವರ ಮುನಿಸಿಕೊಂಡಿದ್ದು ನಿಜವೇ ಎಂದು ಪ್ರಶ್ನಿಸಿದಾಗ, “ನಾವು ಬೇರೆ ಪಾರ್ಟಿಗೆ ಹೋಗಿದ್ದರೆ ನಾವು ಏನೇನೋ ಆಗ್ತಿದ್ವಿ. ಸ್ವಾಭಾವಿಕವಾಗಿ ಅಸಮಾಧಾನ ಇರುತ್ತದೆ. ಈಗ ಯಾವ ಗೊಂದಲವು ಇಲ್ಲ. ರಾಮಲಿಗಾರೆಡ್ಡಿ ಈಗ ಎಲ್ಲವನ್ನು ಒಪ್ಪಿಕೊಂಡಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...