ದಲಿತ ಸಿಎಂ ಚರ್ಚೆ ಮುನ್ನೆಲೆಗೆ | 30% ಜನಸಂಖ್ಯೆ ಇರುವ ದಲಿತರಿಗೆ ಸಿಎಂ ಸ್ಥಾನ ಕೊಡಿ; ಆಂದೋಲನ ಆರಂಭ

Date:

  • ‘ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಸಿಎಂ ಹುದ್ದೆ ನೀಡದೆ ಅನ್ಯಾಯ’
  • ‘ಬಿಎಸ್‌ಪಿ ರಾಜ್ಯ ಸಂಚಾಲಕ ಮಾರಸಂದ್ರ ಮುನಿಯಪ್ಪ ಗಂಭೀರ ಆರೋಪ’

ರಾಜ್ಯದಲ್ಲಿ ಕಾಂಗ್ರೆಸ್‌ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದು, ಮುಂದಿನ ಮುಖ್ಯಮಂತ್ರಿ ಯಾರು ಎಂಬ ಚರ್ಚೆ ತೀವ್ರವಾಗಿದೆ. ಇದರ ಬೆನ್ನಲ್ಲೆ ರಾಜ್ಯದಲ್ಲಿ ಶೇ.30ರಷ್ಟು ಜನಸಂಖ್ಯೆ ಹೊಂದಿರುವ ಎಸ್‌ಸಿ-ಎಸ್‌ಟಿ ಸಮುದಾಯದ ವ್ಯಕ್ತಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಬಿಎಸ್‌ಪಿ ರಾಜ್ಯ ಸಂಯೋಜಕ ಮಾರಸಂದ್ರ ಮುನಿಯಪ್ಪ ಆಗ್ರಹಿಸಿದ್ದಾರೆ.

ಈ ಕುರಿತು ವಿಡಿಯೋ ಬಿಡುಗಡೆ ಮಾಡಿರುವ ಅವರು, “ರಾಜ್ಯದಲ್ಲಿ ಶೇ.12ರಷ್ಟು ಜನಸಂಖ್ಯೆ ಹೊಂದಿರುವ ಲಿಂಗಾಯತ ಸಮುದಾಯದವರು 14 ರಿಂದ 15 ಬಾರಿ ಸಿಎಂ ಆಗಿದ್ದಾರೆ. ಹಾಗೆಯೇ 9 ರಿಂದ 10 ಪರ್ಸೆಂಟ್‌ ಜನಸಂಖ್ಯೆ ಇರುವ ಒಕ್ಕಲಿಗರು ಕೂಡ ಒಂದು ಬಾರಿ ಪ್ರಧಾನಿ, 9 ಬಾರಿ ಮುಖ್ಯಮಂತ್ರಿ ಆಗಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದಿವೆ. ಆದರೆ, ರಾಜ್ಯದ ಜನಸಂಖ್ಯೆಯ ಶೇ.30ರಷ್ಟು ಇರುವ ಪರಿಶಿಷ್ಟ ಜಾತಿ ಮತ್ತು ವರ್ಗದವರು, ಶೇ.15 ರಷ್ಟು ಅಲ್ಪ ಸಂಖ್ಯಾತ ಸಮುದಾಯದವರನ್ನು ಈವರೆಗೂ ಯಾರೂ ಮುಖ್ಯಮಂತ್ರಿ ಮಾಡಿಲ್ಲ” ಎಂದು ಆರೋಪಿಸಿದರು.

“ರಾಜ್ಯದಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್‌, ನಾವು ಬಹಳ ಹೆಚ್ಚು ಮತಗಳನ್ನು ಪಡೆದಿದ್ದೇವೆ ಎಂದು ಹೇಳುತ್ತಿದೆ. ಆದರೆ, ಅವರಿಗೆ ಹೆಚ್ಚು ಮತಗಳು ಬರಲು ಕಾರಣ, ಬಿಜೆಪಿಯ ದಬ್ಬಳಿಕೆ, ದೌರ್ಜನ್ಯ, ಭೂ ಸುಧಾರಣಾ ಕಾಯ್ದೆ, ಮುಸ್ಲೀಮರ ಮೇಲಾದ ದೌರ್ಜನ್ಯಗಳು, ದುರಾಡಳಿತ, ಬೆಲೆ ಏರಿಕೆ, ಭ್ರಷ್ಟಾಚಾರ ಈ ಎಲ್ಲದರಿಂದ ಬೇಸತ್ತಿದ್ದ ಜನ ತೀರ್ಮಾನಿಸಿ, ಈ ಬಾರಿ ಕಾಂಗ್ರೆಸ್‌ಗೆ ಬಹುಮತ ನೀಡಿದ್ದಾರೆ” ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಡಿ ಕೆ ಶಿವಕುಮಾರ್‌ ಅವರನ್ನೇ ಮುಖ್ಯಮಂತ್ರಿ ಮಾಡಬೇಕು ಎಂಬ ಲಾಬಿಯನ್ನು ಒಕ್ಕಲಿಗ ಮಠಾಧೀಶರು ಮತ್ತು ಒಕ್ಕಲಿಗ ಸಂಘದವರು ಮಾಡುತ್ತಿದ್ದಾರೆ. ಅದೇ ರೀತಿ ಲಿಂಗಾಯತ ಸಮುದಾಯದ ವ್ಯಕ್ತಿಯನ್ನು ಸಿಎಂ ಮಾಡಬೇಕು ಎಂದು ಲಿಂಗಾಯತ ಮಠಗಳಲ್ಲಿಯೂ ಚರ್ಚೆ ಆಗುತ್ತಿದೆ. ಆದರೆ, ಶೇ. 30ರಷ್ಟು ಜನಸಂಖ್ಯೆ ಹಿಂದಿರುವ ಎಸ್‌ಸಿ, ಎಸ್‌ಟಿಗಳು, ಶೇ.15ರಷ್ಟಿರುವ ಅಲ್ಪಸಂಖ್ಯಾತರು ಯಾರು ಇವರ ಕಣ್ಣಿಗೆ ಕಾಣುವುದೇ ಇಲ್ಲ. ಯಾಕಿಷ್ಟು ನಿರ್ಲಕ್ಷ್ಯ” ಎಂದು ಪ್ರಶ್ನಿಸಿದ್ದಾರೆ.

“ಅಹಿಂದ ಪರವಾಗಿ ಇದ್ದೇವೆ ಎಂದು ಹೇಳಿಕೊಳ್ಳುವ ಕಾಂಗ್ರೆಸ್‌, ಯಾಕೆ ದಲಿತರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ಮಾತನಾಡುತ್ತಿಲ್ಲ? ಈ ಬಾರಿಯ ಚುನಾವಣೆಯಲ್ಲಿ ಬಹುಸಂಖ್ಯಾತ ಎಸ್‌ಸಿ, ಎಸ್‌ಟಿ ಸಮುದಾಯದ 37 ಮಂದಿ ಶಾಸಕರು ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದಾರೆ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ಪರಿಶಿಷ್ಟರಿಗೆ ರಾಜಕೀಯ ಮೀಸಲಾತಿ ಕೊಡಿಸಿದ್ದು ಯಾಕೆ? ನಿಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡಿ ಎಂದು. ಆದರೆ, ಗೆದ್ದಿರುವ ದಲಿತ ಶಾಸಕರು ಏಕೆ ದ್ವನಿ ಎತ್ತುತ್ತಿಲ್ಲ? ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್ ಗೆಲುವಿನಲ್ಲಿದೆ ಮಲ್ಲಿಕಾರ್ಜುನ ಖರ್ಗೆ ಅಪ್ರತಿಮ ಪಾತ್ರ

“ಎಸ್‌ಸಿ, ಎಸ್‌ಟಿ ಸರ್ಕಾರಿ ನೌಕರರು, ಸಾಮಾಜಿಕ ಸಂಘಟನೆಗಳು, ದಲಿತ ಲೇಖಕರು ಸೇರಿದಂತೆ ಹಲವು ಮುಂದೆ ನಿಂತು ಈ ಬಾರಿ ಕಾಂಗ್ರೆಸ್‌ಗೆ ಮತ ನೀಡಬೇಕು ಎಂದು ಮತ ಹಾಕಿಸಿದ್ದಾರೆ. ಆದರೆ, ಇವರ್ಯಾರು ಈಗ ಮಾತನಾಡುತ್ತಿಲ್ಲ” ಎಂದು ಟೀಕಿಸಿದರು.

”ಅಲ್ಪಸಂಖ್ಯಾತರು ಮತ್ತು ದಲಿತರನ್ನು ಉದ್ದಾರ ಮಾಡಲು ಕಾಂಗ್ರೆಸ್‌ ಇರುವುದು ಎಂದು ಹೇಳಿಕೊಳ್ಳುವ ಇವರು. ಕಳೆದ 75 ವರ್ಷಗಳಿಂದ ಎಸ್‌ಸಿ, ಎಸ್‌ಟಿಗಳನ್ನು ಪರಿಗಣನೆಗೆ ತೆಗೆದುಕೊಳ್ಳದೆ, ಕೇವಲ ಮತ ಹಾಲು ಮಾತ್ರವೇ ಇವರನ್ನು ಬಳಸಿಕೊಂಡಿದೆ” ಎಂದು ಆರೋಪಿಸಿದರು.

“ಡಿ ಕೆ ಶಿವಕುಮಾರ್‌ ಅವರನ್ನು ಸಿಎಂ ಮಾಡುವುದರಿಂದ ಅಹಿಂದ ಸಮುದಾಯಗಳಿಗೆ ಯಾವುದೇ ಅನುಕೂಲ ಆಗುವುದಿಲ್ಲ. ಡಿ ಕೆ ಶಿವಕುಮಾರ್‌ ಹಿಂಬಾಲಕರು ಕನಕಪುರದಲ್ಲಿ ಈಗಾಗಲೇ ಜನರಲ್ಲಿ ಸಾಕಷ್ಟು ಭಯ ಹುಟ್ಟಿಸಿದ್ದಾರೆ. ಅಪರಾಧ ಹಿನ್ನೆಲೆ ಇರುವ ಒಬ್ಬ ವ್ಯಕ್ತಿ ಸಿಎಂ ಆದರೆ ರಾಜ್ಯದ ಅಹಿಂದ ವರ್ಗದವರು ಎಷ್ಟರ ಮಟ್ಟಿಗೆ ನಿರ್ಭೀತಿಯಿಂದ ಬದುಕಲು ಸಾಧ್ಯ? ಎಂಬುದನ್ನು ಅವರ ಹೈಕಮಾಂಡ್‌ ಗಮನಿಸಬೇಕು. ಒಬಿಸಿ, ದಲಿತ, ಅಲ್ಪಸಂಖ್ಯಾತರ ಮತಗಳು ಮಾತ್ರ ಬೇಕು. ಆದರೆ, ಅಧಿಕಾರ ಕೊಡುವಾಗ ಮಾತ್ರ ಈ ರೀತಿ ಅಪರಾಧ ಹಿನ್ನೆಲೆ ಇರುವವರಿಗೆ ಕೊಡಲು ಹೊರಟಿದ್ದಾರೆ” ಎಂದು ಗಂಭೀರ ಆರೋಪ ಮಾಡಿದರು.

“ಡಿ ಕೆ ಶಿವಕುಮಾರ್‌ ಒಬ್ಬರ ಪರಿಶ್ರಮದಿಂದಲೇ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ ಎನ್ನುವುದು ಸರಿಯಲ್ಲ. ಎಸ್‌ಸಿ, ಎಸ್‌ಟಿ ಸಮುದಾಯದವರೂ ಈ ದೇಶದ ಪ್ರಜೆಗಳು ಎಂಬುದನ್ನು ಪರಿಗಣಿಸಲಿ” ಎಂದು ಒತ್ತಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...