ನಮ್ಮ ಪ್ರಧಾನಿಗಳನ್ನು ಕೇಳುವ ಧೈರ್ಯ ನಮಗಿದೆ; 15 ಲಕ್ಷ ರೂ.ಗೆ ದಾಖಲೆ ಕೊಡಿ: ಯತ್ನಾಳ್‌ ಸವಾಲು

Date:

  • ನಮ್ಮ ಪಕ್ಷದಲ್ಲಿ ಪ್ರಜಾಪ್ರಭುತ್ವ ಜೀವಂತವಾಗಿದೆ: ಯತ್ನಾಳ್‌
  • ಸಾಕ್ಷಿ ಕೇಳಿದ್ದಾರೆ, ನಿಮ್ಮ ಬಳಿ ಇದ್ದರೆ ಕೊಟ್ಟುಬಿಡಿ: ಖಾದರ್

ನಮ್ಮ ಪ್ರಧಾನ ಮಂತ್ರಿಗಳನ್ನು ಧೈರ್ಯವಾಗಿ ನಾವೇ ಕೇಳುತ್ತೇವೆ. ಆ ಧೈರ್ಯ ನಮಗಿದೆ. ಪ್ರತಿಯೊಬ್ಬರಿಗೂ 15 ಲಕ್ಷ ರೂ. ಹಾಕುತ್ತೇವೆ ಎಂದು ನರೇಂದ್ರ ಮೋದಿ ಅವರು ಎಲ್ಲಿ ಹೇಳಿದ್ದಾರೆ. ಅದಕ್ಕೆ ಸಂಬಂಧಿಸಿದ ದಾಖಲೆ ನೀಡಿ ಎಂದು ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್‌ ಯತ್ನಾಳ್‌ ಆಗ್ರಹಿಸಿದರು.

ಗುರುವಾರ ಸದನ ಆರಂಭವಾಗುತ್ತಿದ್ದಂತೆ ರಾಜ್ಯಪಾಲರ ಭಾಷಣದ ಮೇಲೆ ಸಭಾಧ್ಯಕ್ಷ ಯು ಟಿ ಖಾದ‌ರ್‌ ಅವರು ಎನ್‌ ಎಚ್‌ ಕೋನರೆಡ್ಡಿ ಅವರಿಗೆ ಮಾತನಾಡಲು ಅನುವು ಮಾಡಿಕೊಟ್ಟರು. ಸಚಿವ ಕೆ ಜೆ ಜಾರ್ಜ್‌ ಅವರು “ಮೋದಿ ಅವರು 15 ಲಕ್ಷ ಕೊಡುತ್ತಾರೆ ಎಂದಿದ್ದರು. ಕೊಟ್ರಾ?” ಎಂದು ಪ್ರತಿಪಕ್ಷದ ನಾಯಕರನ್ನು ಪ್ರಶ್ನಿಸಿದರು.

ಇದಕ್ಕೆ ಯತ್ನಾಳ್‌ ಎದ್ದುನಿಂತು, “ನಮ್ಮ ಪಕ್ಷದಲ್ಲಿ ಪ್ರಜಾಪ್ರಭುತ್ವ ಜೀವಂತವಾಗಿದೆ. ನಮ್ಮ ಪ್ರಧಾನಿಯವರು ಹೇಳಿರುವ ಸೂಕ್ತ ಸಾಕ್ಷಿ ನೀಡಿ, ನಾವೇ ಹೋಗಿ ಮೋದಿ ಅವರನ್ನು ಕೇಳುತ್ತೇವೆ. ಅವರು ಹೇಳಿದ್ದು ನಿಜವಿದ್ದರೆ 15 ಲಕ್ಷ ರೂ. ಪ್ರಧಾನಿಗಳಿಂದ ತರುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಭಯ್‌ ಪಾಟೀಲ್‌ ಮಧ್ಯ ಪ್ರವೇಶಿಸಿ, “ನಿಮ್ಮ ಧೈರ್ಯವನ್ನು ರಾಜ್ಯದ ಜನ ನೋಡಿದ್ದಾರೆ. ಮೊದಲು ಜಿಎಸ್‌ಟಿ ಪಾಲನ್ನು ಮೋದಿ ಅವರಿಂದ ಕೇಳಿ ಪಡೆಯಿರಿ” ಎಂದು ಲೇವಡಿ ಮಾಡಿದರು.

ಬಿ ವೈ ವಿಜಯೇಂದ್ರ ಮಧ್ಯ ಪ್ರವೇಶಿಸಿ, “ಸದನದಿಂದ 15 ಲಕ್ಷ ವಿಚಾರ ಕಡತದಿಂದ ತೆಗೆದುಹಾಕಿ. ಇಲ್ಲವಾದರೆ ಆ ಬಗ್ಗೆ ಮಾತನಾಡಿರುವ ಬಗ್ಗೆ ದಾಖಲೆ ನೀಡಿ” ಎಂದು ಆಡಳಿತ ಪಕ್ಷದ ಸದಸ್ಯರನ್ನು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜ್ಯದಲ್ಲಿ ಮತ್ತೆ ಶುರುವಾಯಿತು ಹೆಣ ರಾಜಕಾರಣ

ಸಭಾಧ್ಯಕ್ಷರು ಪ್ರತಿಕ್ರಿಯಿಸಿ, “ಇದೇ ವಿಚಾರದಲ್ಲಿ ಕಾಲಹರಣ ಮಾಡಬೇಡಿ. 15 ಲಕ್ಷ ವಿಚಾರದ ಬಗ್ಗೆ ಪ್ರಸ್ತಾಪಿಸಿದವರು ಸೂಕ್ತ ದಾಖಲೆ ನೀಡಿ. ಈ ವಿಷಯ ಎಳೆಯುತ್ತ ಸದನ ಹಾಳು ಮಾಡಬೇಡಿ. ಸಾಕ್ಷಿ ಕೇಳಿದ್ದಾರೆ, ನಿಮ್ಮ ಬಳಿ ಇದ್ದರೆ ಕೊಟ್ಟುಬಿಡಿ” ಎಂದು ಕಾಂಗ್ರೆಸ್‌ ಸದಸ್ಯರಿಗೆ ಸೂಚಿಸಿದರು.

ಕೆ ಎನ್‌ ರಾಜಣ್ಣ ಪ್ರತಿಕ್ರಿಯಿಸಿ, “15 ಲಕ್ಷ ಕೊಡುವ ಬಗ್ಗೆ ಇಡೀ ಜಗತ್ತೇ ಕೇಳಿದೆ. ಆ ವಿಡಿಯೋ ನಾವೆಲ್ಲರೂ ನೋಡಿದ್ದೇವೆ. ಇದಕ್ಕಿಂತ ಸಾಕ್ಷಿ ಬೇಕಾ?” ಎಂದರು.

“ಮೋದಿ ಅವರು ಮಾತನಾಡಿದ್ದು ಕೇವಲ ಕಪ್ಪು ಹಣದ ಬಗ್ಗೆ ಅಷ್ಟೇ. ಆದರೆ, ಅದನ್ನು 15 ಲಕ್ಷ ಕೊಡುತ್ತಾರೆ ಎಂದು ತಿರುಚಲಾಗಿದೆ” ಎಂದು ಬಿಜೆಪಿ ಸದಸ್ಯರು ಪ್ರತಿಕ್ರಿಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...