ಮೇಕೆದಾಟು ಯೋಜನೆ ಶೀಘ್ರದಲ್ಲೇ ಅನುಷ್ಠಾನಗೊಳಿಸಿ: ಮೋಹನ್‌ ದಾಸರಿ

Date:

ಬೆಂಗಳೂರಿಗೆ ಶಾಶ್ವತ ಕುಡಿಯುವ ನೀರಿಗಾಗಿ ಮೇಕೆದಾಟು ಯೋಜನೆ ಜಾರಿ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಬೇಕು. ಬೆಂಗಳೂರಿನ ಜಲಮೂಲಗಳನ್ನು ಸಂರಕ್ಷಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ಮೋಹನ್‌ ದಾಸರಿ ಒತ್ತಾಯಿಸಿದರು.

ಸೋಮವಾರ ಶಾಂತಿನಗರ ವಿಧಾನಸಭಾ ಕ್ಷೇತ್ರದ ಎಂಜಿ ರಸ್ತೆಯಲ್ಲಿ ಎಎಪಿ ಪತ್ರ ಚಳವಳಿ ಅಭಿಯಾನ ನಡೆಸಿತು. ಇದೇ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಮೋಹನ್‌ ದಸಾರಿ ಅವರು, “ತಮಿಳುನಾಡು ಸರ್ಕಾರವು ಕಾವೇರಿ ನೀರನ್ನು ಹರಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರುವ ನಿರ್ಣಯವನ್ನು ಅಧಿವೇಶನದಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಂಡಿದೆ. ಆದರೆ, ನಮ್ಮ ರಾಜ್ಯದಲ್ಲಿ ಸಂಕಷ್ಟ ಕಾಲದಲ್ಲಿ ನೀರು ಹರಿಸಲು ಸಾಧ್ಯವಿಲ್ಲ ಎಂಬ ನಿರ್ಣಯವನ್ನು ಕೈಗೊಳ್ಳಲು ಹಿಂದೇಟು ಹಾಕುತ್ತಿದೆ. ತಕ್ಷಣ ಸದನವನ್ನು ಕರೆದು ಬರ ಸಂಕಷ್ಟದಲ್ಲಿ ನೀರು ಹರಿಸಲು ಸಾಧ್ಯವಿಲ್ಲ ಎಂಬ ನಿರ್ಣಯವನ್ನು ಕೈಗೊಳ್ಳಬೇಕು” ಎಂದರು.

ಎಂಜಿ ರಸ್ತೆಯ ಚರ್ಚ್‌ ಸ್ಟ್ರೀಟ್‌ ಮತ್ತು ಮ್ಯೂಸಿಯಂ ಅಡ್ಡ ರಸ್ತೆಯಲ್ಲಿ ಪಕ್ಷದ ಮುಖಂಡರು ಖುದ್ದಾಗಿ ಕಾರ್ಮಿಕರು, ಆಟೋ ಚಾಲಕರು, ಕಚೇರಿ ಸಿಬ್ಬಂದಿ, ಬಿಬಿಎಂಪಿ ಸಿಬ್ಬಂದಿ ಸೇರಿದಂತೆ ಬೆಂಗಳೂರಿನ ಎಲ್ಲ ವರ್ಗದ ಜನರನ್ನು ಭೇಟಿಯಾಗಿ ಪತ್ರ ಚಳವಳಿ ನಡೆಸಿದರು. ನಾಗರಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಈ ಸಂದರ್ಭ ಪಕ್ಷದ ಮುಖಂಡರಾದ ಜಗದೀಶ್‌ ಚಂದ್ರ, ಅನಿಲ್‌ ನಾಚಪ್ಪ, ವೀಣಾ ಸರಾವ್‌, ಸುಷ್ಮಾ ವೀರ್‌, ಮಹಾಲಕ್ಷ್ಮಿ, ಫ್ರಾನ್ಸಿಸ್‌, ಶಿವಕುಮಾರ್‌, ಜ್ಯೋತಿ, ಇರ್ಷಾದ್‌ ಸೇರಿದಂತೆ ಹಲವರು ಜೊತೆಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸ್ನೇಹಿತರೊಂದಿಗೆ ದೈಹಿಕ ಸಂಬಂಧ ಹೊಂದುವಂತೆ ಪೀಡಿಸಿದ ವಿಕೃತ ಪತಿ; ದೂರು ದಾಖಲು

ಅಕ್ಟೋಬರ್‌ 7ರಿಂದ ಮೇಕೆದಾಟು ಅಣೆಕಟ್ಟು ಯೋಜನೆಯ ಅನುಷ್ಠಾನಕ್ಕೆ ಆಗ್ರಹಿಸಿ ಪ್ರಧಾನಿ ಹಾಗೂ ಮುಖ್ಯಮಂತ್ರಿ ಅವರಿಗೆ ಬೆಂಗಳೂರು ನಾಗರಿಕರಿಂದ ಲಕ್ಷಾಂತರ ಸಂಖ್ಯೆಯಲ್ಲಿ ಪತ್ರ ಚಳವಳಿ ಹಾಗೂ ಜನಜಾಗೃತಿಯನ್ನು ಎಎಪಿ ನಡೆಸುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...