ಕೇಸರೀಕರಣಗೊಂಡ ಪಠ್ಯ ಬದಲಾಯಿಸುತ್ತಿದ್ದೇವೆ: ಸಚಿವ ಮಧು ಬಂಗಾರಪ್ಪ

Date:

  • ಇಡೀ ಪಠ್ಯಪುಸ್ತಕ ಪರಿಷ್ಕರಣೆ ಸದ್ಯ ಮಾಡುವುದಿಲ್ಲ
  • ‘ಒಂದು ತಿಂಗಳಲ್ಲೇ ಸಪ್ಲಿಮೆಂಟರಿ ಬುಕ್ ನೀಡುತ್ತೇವೆ’

ಕೇಸರೀಕರಣಗೊಂಡ ಪಠ್ಯದಲ್ಲಿ ಹಲವು ಬದಲಾವಣೆ ತರಲು ನಿರ್ಧರಿಸಲಾಗಿದೆ. ಹೆಡ್ಗೆವಾರ್ ಪಠ್ಯ ತೆಗೆದಿದ್ದೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ವಿಧಾನಸೌದದಲ್ಲಿ ಗುರುವಾರ ಮಾತನಾಡಿದ ಅವರು, “ಇಡೀ ಪಠ್ಯಪುಸ್ತಕ ಪರಿಷ್ಕರಣೆ ಸದ್ಯ ಮಾಡುವುದಿಲ್ಲ. ಹೀಗಾಗಿ ಮಕ್ಕಳಿಗೆ ಏನನ್ನು ಹೇಳಿಕೊಡಬೇಕು? ಏನನ್ನು ತೆಗೆಯಬೇಕು? ಅದನ್ನು ತಿಳಿಸುತ್ತೇವೆ” ಎಂದಿದ್ದಾರೆ.

“ಸಿಎಂ ಮಾರ್ಗದರ್ಶನದ ಮೇಲೆ ಈ ಬಗ್ಗೆ ಚರ್ಚೆ ಮಾಡಲಾಗಿದೆ. ಪ್ರಣಾಳಿಕೆಯಲ್ಲೂ ನಮ್ಮ‌ಕಮಿಟ್ ಮೆಂಟ್ ಇತ್ತು. ನಮ್ಮ ಸರ್ಕಾರ ಬರುವಾಗಲೇ ಪುಸ್ತಕ ಮಕ್ಕಳ‌ ಕೈ ಸೇರಿದೆ. ವಾಪಸ್ ತರಿಸೋಕೆ ಕಷ್ಟ. ಯಾವುದು ಬೇಕು, ಬೇಡ ಅಂತ ಸಪ್ಲಿಮೆಂಟರಿ ಬುಕ್ ಮಾಡುತ್ತೇವೆ. 12 ಲಕ್ಷ ಇದಕ್ಕೆ ಖರ್ಚು ಬರಬಹುದು. 75 ಸಾವಿರ ಶಾಲೆಗಳಿಗೆ ಇದನ್ನು ಕಳುಹಿಸಿಕೊಡಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಾವಿತ್ರಿ ಫುಲೆ ವಿಚಾರ ತೆಗೆದಿದ್ದರು. ಅದನ್ನು ಸೇರಿಸುತ್ತಿದ್ದೇವೆ. ‘ನೀ ಹೋದ ಮರುದಿನ ಅಂಬೇಡ್ಕರ್’ ಕವನ ಬಿಟ್ಟಿದ್ದರು ಅದನ್ನ ನಾವು ‌ಮರು ಸೇರಿಸಿದ್ದೇವೆ. ಸಾವರ್ಕರ್, ಸೂಲಿಬೆಲೆ ಪಾಠಗಳನ್ನ ತೆಗೆದಿದ್ದೇವೆ. ಒಂದು ತಿಂಗಳಲ್ಲೇ ಸಪ್ಲಿಮೆಂಟರಿ ಬುಕ್ ನೀಡುತ್ತೇವೆ. 15 ಪೇಜುಗಳ ಪುಸ್ತಕ ಇರಬಹುದು. ಅದು ಸದ್ಯದಲ್ಲೇ ವಿದ್ಯಾರ್ಥಿಗಳ ಕೈ ಸೇರಲಿದೆ” ಎಂದರು.

ಐವರು ತಜ್ಞರ ಸಮಿತಿ ರಚಿಸಲಾಗಿದೆ. ಅದರಲ್ಲಿ ರಾಜಪ್ಪ ದಳವಾಯಿ, ಅಶ್ವಥ ನಾರಾಯಣ, ರಾಜೇಶ್ ಸೇರಿ ಐವರಿದ್ದಾರೆ. ಪದಗಳ ಬದಲಾವಣೆ, ವಾಕ್ಯ ಬದಲಾವಣೆ ಮಾಡಲಿದ್ದಾರೆ. 6 ರಿಂದ 10ನೇ ತರಗತಿ ವರೆಗೆ ಪಠ್ಯ ಬದಲಾವಣೆ ಮಾಡುತ್ತೇವೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...