ಭಾರತ ಬಂದ್‌ಗೆ ಬಾಗೇಪಲ್ಲಿ ತಾಲೂಕಿನಲ್ಲಿ ಉತ್ತಮ ಪ್ರತಿಕ್ರಿಯೆ

Date:

ಬಾಗೇಪಲ್ಲಿ:ಕೇಂದ್ರ ಸರಕಾರದ 4 ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕು ಮನರೇಗಾ ಯೋಜನೆಯನ್ನು ಪುನರ್‌ ಸ್ಥಾಪಿಸಬೇಕು ವಿಬಿ- ಜಿ ರಾಮ್‌ ಜಿ ಕಾಯಿದೆ ರದ್ದುಗೊಳಿಸುವುದು ಹಾಗೂ ವಿದ್ಯುಚ್ಛಕ್ತಿ ಖಾಸಗೀಕರಣ ವಿರೋಧಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಸಂಯುಕ್ತ ಹೋರಾಟ ಸಮಿತಿ ವಿವಿಧ ಕಾರ್ಮಿಕ ಒಕ್ಕೂಟ ಅಂಗನವಾಡಿ ಕಾರ್ಯಕರ್ತೆಯರ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಕರೆ ನೀಡಿದ ಭಾರತ ಬಂದ್‌ಗೆ ಬಾಗೇಪಲ್ಲಿ ತಾಲ್ಲೂಕು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕೇಂದ್ರ ಸರಕಾರದ ವಿವಿಧ ನೀತಿಗಳನ್ನು ಖಂಡಿಸಿ ಹಮ್ಮಿಕೊಂಡಿದ್ದ ಭಾರತ್‌ ಬಂದ್‌ನ ಭಾಗವಾಗಿ ವಿವಿಧ ಕೈಗಾರಿಕೆಗಳ ಕಾರ್ಮಿಕ ಯೂನಿಯನ್‌ಗಳ ಮುಖಂಡರು ಸಿಪಿಐಎಂ ರೆಡ್ ಪ್ಲಾಗ್ ಮಹಿಳಾ ಸಂಘಟನೆಗಳ ಹೊರ ಗುತ್ತಿಗೆ ನೌಕರರ ಸಂಘ ಕೆ.ಆರ್.ಪಿ.ಎಸ್ ರೈತ ಸಂಘ ಸಿಐಟಿಯು ಪದಾಧಿಕಾರಿಗಳನ್ನು ಒಳಗೊಂಡ ಪ್ರತಿಭಟನಾ ನಿರತರು ಗೂಳೂರು ವೃತ್ತದಿಂದ ಪಟ್ಟಣದ ಬಸ್‌ ನಿಲ್ದಾಣದ ವರೆಗೆ ಬೃಹತ್ ಪ್ರತಿಭಟನಾ ಜಾಥಾ ಆರಂಭಿಸಿದರು.

ತಾಲೂಕಿನಲ್ಲಿ ಭಾರತ್‌ ಬಂದ್‌ನ್ನು ಯಶಸ್ವಿ ಮಾಡುವ ನಿಟ್ಟಿನಲ್ಲಿ ಕಾರ್ಮಿಕ ಒಕ್ಕೂಟಗಳು ಪ್ರತಿಭಟನೆ ನಡೆಸಿದವು. ಬಸ್ ನಿಲ್ದಾಣದ ಮುಂಭಾಗದಲ್ಲಿ ಬೆಳಗ್ಗೆಯಿಂದಲೇ ಆರಂಭವಾದ ಪ್ರತಿಭಟನೆ ಸುಮಾರು 5 ಗಂಟೆಗಳ ಕಾಲ ನಿರಂತರವಾಗಿ ನಡೆಯಿತು ಕೇಂದ್ರ ಮತ್ತು ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಗೇಪಲ್ಲಿ ತಾಲ್ಲೂಕು ಅಂಗನವಾಡಿ ನೌಕರರು ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಅಂಗನವಾಡಿ ನೌಕರರ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಹೋರಾಟ ನಡೆಸಿದರು. ಬಾಗೇಪಲ್ಲಿ ತಾಲ್ಲೂಕು ವಿಶೇಷವಾಗಿ ಅಂಗನವಾಡಿ ನೌಕರರು ಜಾಥಾ ನಡೆಸಿ ಗಮನ ಸೆಳೆದರು. ನೌಕರರು ಪ್ರತಿಭಟನೆಯಲ್ಲಿ ಭಾಗಿಯಾದ ಹಿನ್ನೆಲೆ ಅಂಗನವಾಡಿಗಳಿಗೆ ರಜೆ ನೀಡಲಾಗಿತ್ತು ಎಂದು ಸಿಐಟಿಯು ಮುಖಂಡ ಮುಸ್ತಫಾ ತಿಳಿಸಿದರು.

ಕೇಂದ್ರ ಹಾಗೂ ರಾಜ್ಯ ಸರಕಾರಗಳ ಜನವಿರೋಧಿ ಕಾರ್ಮಿಕ ರೈತ ವಿರೋಧಿ ನೀತಿಗಳ ವಿರುದ್ಧ ಗುರುವಾರ ಕರೆ ನೀಡಿದ್ದ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಚೇಳೂರಿನಲ್ಲಿ ಹೋರಾಟಕ್ಕೆ ಮಾತ್ರ ಸೀಮಿತವಾಯಿತು ಕಾರ್ಮಿಕರು ರೈತರು ಯುವಜನರು ಮಹಿಳೆಯರು ಸೇರಿ ಕಾರ್ಮಿಕ ವರ್ಗಗಳ ನೂರಾರು ಮಂದಿ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಸಿದರು. ಬಳಿಕ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಿಪಿಐಎಂ ಪಕ್ಷದ ಮುಖಂಡ ಎಂ.ಪಿ.ಮುನಿ ವೆಂಕಟಪ್ಪ ಮಾತನಾಡಿ ಕೇಂದ್ರ ಸರಕಾರ ಜಾರಿಗೊಳಿಸಿರುವ ಹಾಗೂ ಜಾರಿಗೊಳಿಸಲು ಮುಂದಾಗಿರುವ ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳು ದುಡಿಯುವ ವರ್ಗದ ಹಕ್ಕುಗಳನ್ನು ಸಂಪೂರ್ಣವಾಗಿ ಕಿತ್ತುಕೊಳ್ಳುವಂತಿವೆ. ದಿನಕ್ಕೆ 12 ಗಂಟೆ ದುಡಿಮೆ ಗುತ್ತಿಗೆ ಹಾಗೂ ನಿಗದಿತ ಅವಧಿಯ ಉದ್ಯೋಗಗಳ ವಿಸ್ತರಣೆ, ಮಹಿಳೆಯರನ್ನು ರಾತ್ರಿ ಪಾಳೆಯಲ್ಲಿ ದುಡಿಸಿಕೊಳ್ಳುವ ನೀತಿಗಳು ಕಾರ್ಮಿಕರ ಬದುಕನ್ನು ಅನಿಶ್ಚಿತತೆಗೆ ತಳ್ಳಿವೆ. ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳ ಖಾಸಗೀಕರಣದಿಂದ ಜನಸಾಮಾನ್ಯರಿಗೆ ಮೂಲಭೂತ ಸೇವೆ ಸಿಗದಂತಾಗಿದೆ. ನರೇಗಾ ಯೋಜನೆ ದುರ್ಬಲಗೊಳಿಸುವ ಪ್ರಯತ್ನಗಳು ಗ್ರಾಮೀಣ ಜನರ ಜೀವನಾಧಾರಕ್ಕೆ ಹೊಡೆತ ನೀಡುತ್ತಿವೆ ವಿದ್ಯುತ್‌ ಕ್ಷೇತ್ರ ಖಾಸಗೀಕರಣಗೊಂಡರೆ ಜನರ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳಲಿದೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ..? ಕಾರ್ಮಿಕರ ವಿರೋಧಿ ನೀತಿಗಳ ವಿರುದ್ಧ ಬೃಹತ್ ಪ್ರತಿಭಟನೆ

ಈ ಸಂದರ್ಭದಲ್ಲಿ ವಿವಿಧ ಸಂಘಟನೆಗಳ ಮುಖಂಡರಾದ ರಘುರಾಮ ರೆಡ್ಡಿ, ಚನ್ನರಾಯಪ್ಪ,ಜಿ.ಕೃಷ್ಣಪ್ಪ,ವಾಲ್ಮೀಕಿ ಅಶ್ವತ್ಥಪ್ಪ,ಡಿ.ಟಿ.ಮುನಿಸ್ವಾಮಿ ,ಮುನಿಯಪ್ಪ,ರಾಮಾಂಜಿ,ಓಬಳರಾಜು,ಎಸ್.ಎಫ್.ಐ.ಸೋಮಶೇಖರ ಹಾಗೂ ಇತರೆ ಸಂಘಟನೆಗಳ ಮುಖಂಡರು ಹಾಜರಿದ್ದರು

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...