ಉಡುಪಿ | ದಲಿತ ಮುಖಂಡ ಗೋಪಾಲಣ್ಣನವರಿಗೆ ನುಡಿ ನಮನ

Date:

ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದ ಜಿಲ್ಲಾ ಶಾಖೆ ಉಡುಪಿ ವತಿಯಿಂದ ಇತ್ತೀಚೆಗೆ ಕೊಡಂಕೂರಿನಲ್ಲಿ ದ.ಸಂ.ಸ.ಕೊಡಂಕೂರು ಶಾಖೆಯ ಸಂಚಾಲಕರಾದ ಗೋಪಾಲ ಕೊಡಂಕೂರು ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು.

ಇತ್ತೀಚೆಗೆ ತೀವ್ರ ಅನಾರೋಗ್ಯದಿಂದ ಕೊಡಂಕೂರು ಗೋಪಾಲ ಅವರು ತೀರಿಕೊಂಡಿದ್ದರು. ನುಡಿ ನಮನದಲ್ಲಿ ಗೋಪಾಲ ಕೊಡಂಕೂರು ಅವರಿಗೆ ಗೌರವ ಸಲ್ಲಿಸಿ ಮಾತನಾಡಿದ ದ.ಸಂ.ಸ.ರಾಜ್ಯ ಸಂಘಟನಾ ಸಂಚಾಲಕರಾದ ಸುಂದರ ಮಾಸ್ತರ್ ಗೋಪಾಲಣ್ಣಾ ದ.ಸಂ.ಸ.ದ ಆಸ್ತಿಯಾಗಿದ್ದರು. ಯಾವುದೇ ಕಾರ್ಯಕ್ರಮಕ್ಕೆ ತಿಳಿಸಿದ ತಕ್ಷಣ ಕಾರ್ಯಕರ್ತರನ್ನು ಕರೆದುಕೊಂಡು ಬರುತ್ತಿದ್ದರು. ಅದರಲ್ಲೂ ಪ್ರತಿಭಟನಾ ಕಾರ್ಯಕ್ರಮದಲ್ಲಿ ಅವರು ತೋರಿಸುತ್ತಿದ್ದ ಧೈರ್ಯ ಮತ್ತು ಬಧ್ಧತೆ ಉಳಿದ ಕಾರ್ಯಕರ್ತರಿಗೆ ಮಾದರಿಯಾಗಿತ್ತು. ನಮ್ಮ ದ.ಸಂ.ಸ.ಬಗ್ಗೆ ಅತೀವ ಪ್ರೀತಿ ಹೊಂದಿದ್ದ ಗೋಪಾಲಣ್ಣಾ ಕೊಡಂಕೂರಿನಲ್ಲಿ ಅಂಬೇಡ್ಕರ್ ಭವನಕ್ಕೆ ನಿವೇಶನ ಕಾದಿರುಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ತನ್ನ ಮೇಲೆ ಕೇಸ್ ಹಾಕಿಸಿಕೊಂಡು ದ.ಸಂ.ಸಕ್ಕಾಗಿ ದುಡಿದರು ಎಂದರು.

1006632315

ಗೋಪಾಲಣ್ಣನವರಿಗೆ ಗೌರವ ಸಲ್ಲಿಸಿ ಮಾತನಾಡಿದ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾದ ಶ್ಯಾಮರಾಜ್ ಬಿರ್ತಿಯವರು ಸ್ವಭಾವತಃ ಮಿತಭಾಷಿಯಾಗಿದ್ದ ಗೋಪಾಲಣ್ಣಾನವರು ನಮ್ಮವರ ಬಗ್ಗೆ ಅತೀವ ಕಾಳಜಿ ಹೊಂದಿದ್ದರು. ಹೊರ ನೋಟಕ್ಕೆ ತುಂಬಾ ಮೃದುವಾಗಿದ್ದು ಅವರು ದಲಿತರ ಮೇಲೆ ದೌರ್ಜನ್ಯಗೊಳಗಾದಗ ಸಿಟ್ಟಿನಿಂದ ಕುದಿಯುತ್ತಿದ್ದರು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕರಾದ ಮಂಜುನಾಥ ಗಿಳಿಯಾರು ಮಾತಾನಾಡಿ ಗೋಪಾಲಣ್ಣಾ ನವರ ನಿಸ್ವಾರ್ಥ ಸೇವೆ ಸದಾಕಾಲ ನೆನಪಿಟ್ಟುಕೊಳ್ಳುವಂತದ್ದು, ನಾವು ಒಬ್ಬ ಪ್ರಾಮಾಣಿಕ, ಬದ್ದತೆಯ ನಾಯಕರನ್ನು ಕಳೆದುಕೊಂಡಿದ್ದೇವೆ. ಕೊಡಂಕೂರು ಶಾಖೆಯವರು ಗೋಪಾಲಣ್ಣಾ ಮಾಡಿದ ಕಾರ್ಯಗಳನ್ನು ಮುಂದುವರಿಸಿಕೊಂಡು ಹೋಗಬೇಕಾಗಿದೆ. ತಮ್ಮ ಸ್ವಂತ ಕೆಲಸಗಳೆಷ್ಟೇ ಇದ್ದರೂ ಬೆಂಗಳೂರಿನ ಎಲ್ಲಾ ಕಾರ್ಯಕ್ರಮಗಳಿಗೂ ಕಾರ್ಯಕರ್ತರನ್ನು ಕರೆದುಕೊಂಡು ಬಂದು ನಮ್ಮ ಕಾರ್ಯಕ್ರಮವನ್ನು ಯಶಸ್ಸುಗೊಳಿಸುತ್ತಿದ್ದರು ಎಂದರು.

ನುಡಿನಮನ ಕಾರ್ಯಕ್ರಮದಲ್ಲಿ ಜಿಲ್ಲಾ ಸಂಘಟನಾ ಸಂಚಾಲಕರಾದ ಶ್ಯಾಮಸುಂದರ ತೆಕ್ಕಟ್ಟೆ, ಭಾಸ್ಕರ್ ಮಾಸ್ಟರ್ ಕುಂಜಿಬೆಟ್ಟು, ಶಂಕರ್ ದಾಸ್ ಚೆಂಡ್ಕಳ, ವಿಠಲ ಕೊಡಂಕೂರು, ಶೇಖರ ಕೊಡಂಕೂರು, ಕೃಷ್ಣ ಬೆಳ್ಳೆ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...