ರಾಯಚೂರು | ಸರ್ಕಾರಿ ಉದ್ಯೋಗಸ್ಥ ಮಹಿಳೆ ಕೊಲೆ ಪ್ರಕರಣ; ಸೂಕ್ತ ತನಿಖೆಗೆ ಒತ್ತಾಯ

Date:

ಲಿಂಗಸೂಗೂರ ತಾಲೂಕಿನ ಹಟ್ಟಿ ಸರಕಾರಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿದ್ದ ಮಂಜುಳಾ ಅವರಿಗೆ ದುಷ್ಕರ್ಮಿ ಗಳು ಭೀಕರವಾಗಿ ಕೊಲೆಗೈದು ಬೆಂಕಿ ಹಚ್ಚಿದ ಪೈಶಾಚಿಕ ಘಟನೆ ನಡೆದು 15 ದಿನ ಕಳೆದರೂ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಹಟ್ಟಿ ಪ್ರಗತಿಪರ ಸಂಘಟನೆಗಳ ಜಂಟಿ ವೇದಿಕೆ ಆಕ್ರೋಶ ವ್ಯಕ್ತಪಡಿಸಿದೆ.

ತಾಲ್ಲೂಕಿನ ಹಟ್ಟಿ ಪಟ್ಟಣದಲ್ಲಿ ನಡೆದ ಮಂಜುಳಾ ಜೇಮ್ಸ್ ಪಾಲ್ ಕೊಲೆ ಖಂಡಿಸಿ ಹಟ್ಟಿ ಪಟ್ಟಣದ ಪಾಮನ ಕಲ್ಲುರ್ ಕ್ರಾಸ್ ನಿಂದ, ವಿಲೇಜ್ ಬಸ್ ಸ್ಟ್ಯಾಂಡ್, ಕೋಠಾ ಕ್ರಾಸ್, ಪೊಲೀಸ್ ಠಾಣೆವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಸಂಘಟಕರು ತಾಲೂಕಾಡಳಿತ ಹಾಗೂ ಪೊಲೀಸ್ ಠಾಣೆಯ ಸಿಪಿಐ ಅವರಿಗೆ ಹಕ್ಕೊತ್ತಾಯ ಪತ್ರವನ್ನು ಸಲ್ಲಿಸಿದರು .

ಎಸ್ಎಫ್ಐ ಜಿಲ್ಲಾಧ್ಯಕ್ಷ ರಮೇಶ್ ವೀರಾಪುರ ಮಾತನಾಡಿ, “ಹಟ್ಟಿ ಪಟ್ಟಣದ ಅಂಗಡಿ ಮುಂಗಟ್ಟುಗಳ ಸಿಸಿ ಕ್ಯಾಮೆರಾ ಅಳವಡಿಸಿದರೂ ಅವುಗಳನ್ನು ಸರಿಯಾಗಿ ನಿರ್ವಹಿಸದಿರುವ ಕಾರಣ ಅಪರಾಧಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಮಂಜುಳಾ ವರ ಮೃತದೇಹವನ್ನು ನೋಡಿದರೆ ಕೊಲೆ ಎನ್ನುವ ಪೊಲೀಸರು ಅನುಮಾನಾಸ್ಪದ ಸಾವು ಎಂದು ದಾಖಲಿಸದೆ ಪೊಲೀಸರ ಕೈವಾಡದಿಂದ ಹಾದಿ ತಪ್ಪಿಸುತ್ತಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಾವಿರಾರು ಕಾರ್ಮಿಕರು ವಾಸಿಸುವ ಪಟ್ಟಣದಲ್ಲಿ ಜೂಜು, ಮಟ್ಕಾ ಸೇರಿದಂತೆ ಅನೈತಿಕ ಚಟುವಟಿಕೆಗಳು ರಾಜಾರೋಷವಾಗಿ ನಡೆಯುತ್ತಿವೆ. ಹಣದಾಸೆಗೆ ಇಂತಹ ಕೊಲೆ-ಸುಲಿಗೆಗಳು ಸಾಮಾನ್ಯ ಎನ್ನುವಂತಾಗಿವೆ. ಕೂಡಲೇ ಈ ಪ್ರಕರಣ ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕು, ಇಲ್ಲದಿದ್ದರೆ ಬೃಹತ್ ಹೋರಾಟ ಮಾಡಲಾಗುವುದು” ಎಂದು ಎಚ್ಚರಿಸಿದರು.

ಮುಖಂಡ ಅಮೀರ ಅಲಿ ಮಾತನಾಡಿ, “ರಾತ್ರಿ 12ರ ನಂತರ ಏಕಾಂಗಿಯಾಗಿ ಮಹಿಳೆ ಓಡಾಡಿದರೆ ನಮಗೆ ನಿಜವಾದ ಸ್ವಾತಂತ್ರ್ಯ ದೊರೆದಂತೆ ಎಂದು ಮಹಾತ್ಮ ಗಾಂಧಿ ಹೇಳಿದ ಮಾತು ಎಲ್ಲರೂ ನೆನೆಸಕೊಳ್ಳುತ್ತೇವೆ. ಆದರೆ ಮಂಜುಳ ಎಂಬ ಮಹಿಳೆಯ ಮನೆಗೆ ಹೋಗಿ ನಿಮ್ಮ ತಾಯಿಯ ಮೊಬೈಲ್ ಪಾಸ್‌ವರ್ಡ್ ಕೊಡುವಂತೆ ಕೇಳಿದ ವ್ಯಕ್ತಿಯೇ ಕೊಲೆ ನಡೆಸಿರುವ ಬಗ್ಗೆ ಶಂಕೆ ಮೂಡಿದರೂ ಪೊಲೀಸರು ಪ್ರಭಾವಿಗಳ ಒತ್ತಡಕ್ಕೆ ಮಣಿದು ಪ್ರಕರಣ ಇತ್ಯರ್ಥಗೊಳಿಸುವ ಪ್ರಯತ್ನದಲ್ಲಿದ್ದಾರೆ” ಎಂದು ಕಿಡಿಕಾರಿದರು.

ಕೊಲೆ ಪ್ರಕರಣವನ್ನು ಇಲಾಖೆಯ ಮೇಲಾಧಿಕಾರಿಗಳು ತನಿಖೆ ನಡೆಸಿ ನಿರ್ಲಕ್ಷ್ಯ ವಹಿಸಿದ ಪೊಲೀಸ್ ಸಿಬ್ಬಂದಿಗಳಿಗೆ ಅಮಾನತು ಮಾಡಬೇಕು. ಸಾವನಪ್ಪಿದ ಮಂಜುಳ ಅವರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ಇಂತಹ ಅಹಿತಕರ ಘಟನೆ ಮರುಕಳಿಸದಂತೆ ಪೊಲೀಸ್‌ ಇಲಾಖೆ ನಿಯಮಗಳು ಕಟ್ಟುನಿಟ್ಟಾಗಿ ಪಾಲಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ವಿಶ್ವೇಶ್ವರ ಭಟ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಈ ಸಂದರ್ಭದಲ್ಲಿ ರೈತ ಹೋರಾಟಗಾರ್ತಿ ಅನಿತಾ ಬಸವರಾಜ್ ಸೇರಿದಂತೆ ಪ್ರಮುಖರಾದ ಶೇಖರ್ , ವಿಜಯಕುಮಾರ್, ಲಾಲು  ಸೇರಿದಂತೆ ಅನೇಕರಿದ್ದರು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...