ಗದಗ | ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿಗೆ ಬೇಕಿದೆ ಬೃಹತ್ ಕಟ್ಟಡದ ಜೊತೆಗೆ ಆಟದ ಮೈದಾನ

Date:

ಕರ್ನಾಕದಲ್ಲಿ ಕೆಲವೇ ಕೆಲವು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಿವೆ. ರಾಜ್ಯದಲ್ಲಿರುವ 17 ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಗದಗ ಜಿಲ್ಲೆಯ ನರಗುಂದ ಪಟ್ಟಣದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಕೂಡ ಒಂದು. ಆದರೆ, ಕಾಲೇಜು ಸುಸಜ್ಜಿತ ಕಟ್ಟಡ, ಮೂಲಭೂತ ಸೌಕರ್ಯಗಳು ಹಾಗೂ ಆಟದ ಮೈದಾನಗಳಿಲ್ಲದೆ ಆರಂಭದಲ್ಲೇ ಸೊರಗುತ್ತಿದೆ.

ನರಗುಂದ ಪಟ್ಟಣದಿಂದ 3 ಕಿ.ಮೀ ದೂರದಲ್ಲಿರುವ ಇಂಜಿನಿಯರಿಂಗ್ ಕಾಲೇಜು 2022ರಲ್ಲಿ ಉದ್ಘಾಟನೆಗೊಂಡಿತ್ತು. 2023ರ ಶೈಕ್ಷಣಿಕ ವರ್ಷದಿಂದ ತರಗತಿಗಳು ಆರಂಭವಾಗಿದ್ದವು. ಮೊದಲ ಶೈಕ್ಷಣಿಕ ವರ್ಷದಲ್ಲಿ ಎರಡು ಕೋರ್ಸ್ ಆರಂಭವಾಗಿದ್ದು, 2024ರ ಶೈಕ್ಷಣಿಕ ವರ್ಷದಿಂದ ಮತ್ತೆರಡು ಕೋರ್ಸುಗಳು ಆರಂಭವಾಗಿವೆ. ಈ ನಾಲ್ಕು ಕೋರ್ಸುಗಳಲ್ಲಿ ಒಟ್ಟು 230 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.

ಆರಂಭದಲ್ಲಿ, ದೆಹಲಿಯ ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಶನ್ ಸಂಸ್ಥೆಯ (ಎಐಸಿಟಿಇ)  ಅನುಮತಿಯೊಂದಿಗೆ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ಹಾಗೂ ಆರ್ಟಿಫಿಷಿಯಲ್ ಇಂಟಲಿಜನ್ಸ್ ಆಂಡ್ ಡಾಟಾ ಸೈನ್ಸ್ ಎರಡು ಕೋರ್ಸುಗಳು ಆರಂಭಗೊಂಡಿದ್ದವು. ತಲಾ ಕೋರ್ಸುಗಳಲ್ಲಿ 60 ವಿದ್ಯಾರ್ಥಿಗಳು ಪ್ರವೇಶಕ್ಕೆ ಅವಕಾಶ ಪಡೆದಿದ್ದರು. 2024ನೇ ಶೈಕ್ಷಣಿಕ ವರ್ಷದಲ್ಲಿ ಕಾಲೇಜಿನಲ್ಲಿ ಒಟ್ಟು 230 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಇಷ್ಟು ಸಂಖ್ಯೆಯ ವಿದ್ಯಾರ್ಥಿಗಳಿದ್ದರೂ, ಕೇವಲ ಒಬ್ಬರು ಮಾತ್ರವೇ ಖಾಯಂ ಪ್ರಾಧ್ಯಾಪಕರಿದ್ದಾರೆ. ಅವರೇ ಪ್ರಾಂಶುಪಾಲರೂ ಆಗಿದ್ದಾರೆ. ಉಳಿದ ಎಲ್ಲ ಉಪನ್ಯಾಸಕರು ಅತಿಥಿ ಪ್ರಾಧ್ಯಾಪಕರಾಗಿದ್ದಾರೆ. ಈ 2024ನೇ ಶೈಕ್ಷಣಿಕ ವರ್ಷದಿಂದ ಎಐಸಿಟಿಇ ಸಂಸ್ಥೆಯಿಂದ ಇನ್ನೂ ಎರಡು ಕೋರ್ಸ್‌ಗಳು ಅನುಮತಿಯೊಂದಿಗೆ ಆರಂಭವಾಗಿವೆ. ಎಲೆಕ್ಟ್ರಾನಿಕ್ ಆಂಡ್ ಕಮಿನಿಕೇಶನ್ ಇಂಜಿನಿಯರಿಂಗ್ ಕೋರ್ಸಿನಲ್ಲಿ 60 ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶವಿದೆ. ಇನ್ನೊಂದು, ಸಿವಿಲ್ ಇಂಜನೀಯರಿಂಗ್ ಕೋರ್ಸ್‌ ಆರಂಭವಾಗಿದ್ದು, 30 ವಿದ್ಯಾರ್ಥಿಗಳಿಗೆ ಪ್ರವೇಶಕ್ಕೆ ಅವಕಾಶವಿದೆ.

ಪಟ್ಟಣದಿಂದ ಕಾಲೇಜಿಗೆ ಹೋಗುವ ರಸ್ತೆ ದುಸ್ಥಿತಿಯಲ್ಲಿತ್ತು. ವಿದ್ಯಾರ್ಥಿಗಳಿಗೆ ನಡೆದುಕೊಂಡು ಹೋಗಲು ಕಷ್ಟವಾಗುತ್ತಿತ್ತು. ಈಗಿನ ನರಗುಂದ ಶಾಸಕ ಸಿ.ಸಿ ಪಾಟೀಲ್ ಅವರು ಹಿಂದೆ ಸಚಿವರಾಗಿದ್ದಾಗ ಕಾಲೇಜಿಗೆ ಹೋಗುವ ರಸ್ತೆಯನ್ನು ಕಾಂಕ್ರೀಟ್ ರಸ್ತೆ ಮಾಡಿಸಿದ್ದು, ಈಗ ವಿದ್ಯಾರ್ಥಿಗಳಿಗೆ ನಡೆದುಕೊಂಡು ಹೋಗಲು ಅನುಕೂಲವಾಗಿದೆ.

ಕಾಲೇಜಿನ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳ ಅಗತ್ಯವಿದ್ದು, ಸದ್ಯ ಎರಡು ವಸತಿ ನಿಲಯದ ಕಟ್ಟಡಗಳಿವೆ. ತಲಾ ವಸತಿ ನಿಲಯದಲ್ಲಿ ಎಪ್ಪತ್ತೆರಡು ವಿದ್ಯಾರ್ಥಿಗಳಿಗೆ ಪ್ರವೇಶಕ್ಕೆ ಮಾತ್ರ ಅವಕಾಶವಿದೆ. ಹೀಗಾಗಿ, ಇನ್ನೂ ಎರಡು ಹಾಸ್ಟೆಲ್‌ ಕಟ್ಟಡಗಳ ಅಗತ್ಯವಿದೆ.

ಗ್ರಂಥಾಲಯಕ್ಕೆ ಹೆಚ್ಚಿನ ಪುಸ್ತಕಗಳು ಬೇಕಿದೆ: ಕಾಲೇಜಿನಲ್ಲಿ ಒಟ್ಟು ನಾಲ್ಕು ಕೋರ್ಸುಗಳು ಆರಂಭವಾಗಿದ್ದು, ಗ್ರಂಥಾಲಯದಲ್ಲಿ ಕೋರ್ಸುಗಳಿಗೆ ಅನುಗುಣವಾಗಿ ವಿಷಯಗಳಿಗೆ ಸಂಬಂಧಿಸಿದ ಪುಸ್ತಕಗಳ ಕೊರತೆ ಇದೆ. ಇನ್ನೂ ಹೆಚ್ಚು ಪುಸ್ತಕಗಳ ಅಗತ್ಯವಿದೆ.

ಸುಸಜ್ಜಿತ ಆಟದ ಮೈದಾನ ಬೇಕಿದೆ: 24 ಎಕರೆ ಭೂಮಿ ಬೃಹತ್ ಕಟ್ಟಡ ಹೊದಿರುವ ಈ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸುಸಜ್ಜಿತ ಆಟದ ಮೈದಾನವಿಲ್ಲ. ಸಮತಟ್ಟಿರದ, ಹುಲ್ಲು ಬೆಳೆದ ಆವರಣದಲ್ಲಿಯೇ ವಿದ್ಯಾರ್ಥಿಗಳು ಕ್ರೀಡೆಗಳನ್ನು ಆಡುತ್ತಿರುವುದು ಬೇಸರದ ಸಂಗತಿ. ಆದ್ದರಿಂದ ಸುಸಜ್ಜಿತ ವಿಶಾಲವಾದ ಕ್ರೀಡಾ ಮೈದಾನದ ಅಗತ್ಯವಿದೆ.

ಕಾಲೇಜಿನ ಸಮಸ್ಯೆಗಳ ಬಗ್ಗೆ ಈದಿನ.ಕಾಮ್ ಜೊತೆ ಮಾತನಾಡಿದ ಪ್ರಾಂಶುಪಾಲ ಪ್ರೊ. ಸಿದ್ದನಗೌಡ ಪಾಟೀಲ, “ನಮ್ಮ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಜಾಸ್ತಿ ಆಗುತ್ತಿದೆ. ಹೊಸದಾಗಿ ಎರಡು ಕೋರ್ಸುಗಳು ಆರಂಭವಾಗಿವೆ. ಇನ್ನೂ ಎರಡು ವಸತಿ ನಿಲಯಗಳ ಅವಶ್ಯಕತೆ ಇದೆ. ಗ್ರಂಥಾಲಯಕ್ಕೆ ಇನ್ನೂ ಹೆಚ್ಚು ಹೆಚ್ಚು ಪುಸ್ತಕಗಳು ಸೇರ್ಪಡೆ ಆಗಬೇಕಿದೆ. ಜೊತೆಗೆ ವಿದ್ಯಾರ್ಥಿಗಳಿಗೆ ಉತ್ತಮ ಆಟದ ಮೈದಾನ ಆಗಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರ ನಮಗೆ ಸಹಕಾರ ನೀಡಿದರೆ, ಕಾಲೇಜನ್ನು ಇನ್ನೂ ಉತ್ತಮ ಮಟ್ಟಕ್ಕೆ ತೆಗೆದುಕೊಂಡು ಹೋಗಲು ಅನುಕೂಲವಾಗುತ್ತದೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಶರಣಪ್ಪ ಎಚ್ ಸಂಗನಾಳ
ಶರಣಪ್ಪ ಎಚ್ ಸಂಗನಾಳ
ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...