ಯಾದಗಿರಿ | ಸರ್ಕಾರದ ಗೈರಾಣ ಜಮೀನು ಒತ್ತುವರಿ; ಅಧಿಕಾರಿಗಳ ವಿರುದ್ಧ ಉಮೇಶ ಕೆ. ಮುದ್ನಾಳ ಕಿಡಿ

Date:

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗೋಡಿಹಾಳ ಗ್ರಾಮದಲ್ಲಿನ ಸರ್ವೇ ನಂ.39ರಲ್ಲಿ 10.37 ಎಕರೆ, ಸರ್ವೇ ನಂ.34ರಲ್ಲಿ 14.32 ಎಕರೆ ಗೈರಾಣ ಜಮೀನು ಮತ್ತು ಸರ್ವೇ ನಂ.43ರಲ್ಲಿ 23.9 ಎಕರೆ ಅರಣ್ಯ ಇಲಾಖೆಯ ಜಮೀನು ಸೇರಿ ಒಟ್ಟು 48 ಎಕರೆ ಭೂಮಿ ಇದೆ. ಇದರ ಪೈಕಿ ಬಹುತೇಕ ಜಮೀನು ಒತ್ತುವರಿಯಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಆರೋಪಿಸಿದ್ದಾರೆ.

“ಈ ಜಮೀನಿನ ಮೇಲೆ ಕೆಲವರು ಕಣ್ಣು ಹಾಕಿ ಒತ್ತುವರಿ ಮಾಡಿಕೊಂಡಿರುವುದು ಕಂಡುಬಂದಿದೆ. ಸರ್ಕಾರಿ ಕೆಲಸ ದೇವರ ಕೆಲಸ ಎನ್ನುತ್ತಾರೆ. ಆದರೆ, ಸರ್ಕಾರಿ ಭೂಮಿ ಒತ್ತುವರಿಯಾಗಿದ್ದರೂ, ಅಧಿಕಾರಿಗಳು ಕಾಲಹರಣ ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ಒತ್ತುವರಿಯನ್ನು ತೆರುವಗೊಳಿಸುವಂತೆ ಸುಮಾರು ವರ್ಷಗಳಿಂದ ರೈತರು, ಕುರಿಗಾಹಿಗಳು, ದನಕಾಯಿವವರು ಅಧಿಕಾರಿಗಳಿಗೆ ಮನವಿ ಮಾಡುತ್ತಿದ್ದರೂ, ಅಧಿಕಾರಿಗಳು ಕ್ಯಾರೇ ಎನ್ನುತ್ತಿಲ್ಲ. ವಡಗೇರಾ ತಹಸೀಲ್ದಾರರು, ಜಿಲ್ಲಾಧಿಕಾರಿಗಳು, ಸರ್ವೇ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಜಂಟಿಯಾಗಿ ತೆರಳಿ ಪರಿಶೀಲನೆ ನಡೆಸಬೇಕು. ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸರ್ಕಾರಿ ಜಾಗಾದಲ್ಲಿ ಪಶುಗಳಿಗೆ ದನಕರುಗಳಿಗೆ, ಕುರಿಗಳಿಗೆ, ಮೇಯಲು ಗಡಿ ನಿರ್ಮಿಸಿ ಅನುಕೂಲ ಮಾಡಿಕೊಡಬೇಕು” ಎಂದು ಆಗ್ರಹಿಸಿದರು.

ಈ ವೇಳೆ ಆಂಜಿನೇಯ ನಾಯ್ಕೋಡಿ ಬೆಳಗೇರಿ. ನಿಂಗಪ್ಪ, ದೇವಪ್ಪ, ಹೊನ್ನಪ್ಪ, ಭೀಮಣ್ಣ, ನಿಂಗ ಸೇರಿದಂತೆ ಅನೇಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...