ಸರ್ಕಾರಿ ವಕೀಲರಿಗೆ ಸರ್ಕಾರದ ಕೇಸು ಎಂದರೆ ಅಸಡ್ಡೆ ಇರಕೂಡದು: ಸಿಎಂ ಸಿದ್ದರಾಮಯ್ಯ ಸೂಚನೆ

Date:

  • ಜನರ ಹಿತ ಕಾಪಾಡುವುದು ಎಂದರೆ ಅದು ಸರ್ಕಾರದ ಹಿತ ಕಾಪಾಡಿದಂತೆ: ಸಿಎಂ
  • ‘ವ್ಯಾಜ್ಯ ಸಣ್ಣದಿರಲಿ, ದೊಡ್ಡದಿರಲಿ, ಗಂಭೀರವಾಗಿ ಪರಿಗಣಿಸಿ ಹೋಂ ವರ್ಕ್ ಮಾಡಿ’

ಸರ್ಕಾರಿ ವಕೀಲರಿಗೆ ಸರ್ಕಾರದ ಕೇಸು ಎಂದರೆ ಅಸಡ್ಡೆ ಇರಬಾರದು. ಸರ್ಕಾರದ ಕೇಸುಗಳು ಎಂದರೆ ಜನರ ಕೇಸುಗಳು. ಜನರಿಗೆ ನ್ಯಾಯ ಸಿಗುವ ಪ್ರಮಾಣ ಇನ್ನೂ ಹೆಚ್ಚಾಗಬೇಕು. ಬಡವರಿಗೆ ಮೇಲಿನ ನ್ಯಾಯಾಲಯಗಳಿಗೆ ಹೋಗುವ ಶಕ್ತಿ ಇರುವುದಿಲ್ಲ. ಬಡವರಿಗೆ ನ್ಯಾಯ ಸಿಗದಿದ್ದರೆ ಸರ್ಕಾರಿ ವಕೀಲರನ್ನು ನೇಮಿಸಿಕೊಂಡಿದ್ದು ಸಾರ್ಥಕ ಆಗುವುದಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಹಾಗೂ ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ ಸಹಯೋಗದಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ನಡೆದ ಕರ್ನಾಟಕ ಸರ್ಕಾರಿ ವ್ಯಾಜ್ಯ ನಿರ್ವಹಣಾ ಅಧಿನಿಯಮ-2023ರ ಸಭೆಯಲ್ಲಿ ಅವರು ಮಾತನಾಡಿದರು.

“ಪ್ಲೀಡಿಂಗ್ಸ್ ಸರಿಯಾಗಿ, ಪರಿಣಾಮಕಾರಿಯಾಗಿ ಬರೆಯುವುದು ಬಹಳ ಮುಖ್ಯ. ಈ ಹಂತದಲ್ಲೇ ಅಸಡ್ಡೆ, ಉಡಾಫೆತನ ಪ್ರದರ್ಶಿಸಿದರೆ ನ್ಯಾಯ ಪ್ರಕ್ರಿಯೆಯ ಮುಂದಿನ ಎಲ್ಲ ಹಂತಗಳಲ್ಲಿ ವೈಫಲ್ಯ ಆಗುತ್ತದೆ. ಆದ್ದರಿಂದ ಬಹಳ ಜವಾಬ್ದಾರಿಯುತವಾಗಿ ಸರ್ಕಾರಿ ವಕೀಲರು ವರ್ತಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸರ್ಕಾರಿ ವಕೀಲರು ಮತ್ತು ಅಧಿಕಾರಿಗಳ ವೈಫಲ್ಯಕ್ಕೆ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ. ವ್ಯಾಜ್ಯ ಸಣ್ಣದಿರಲಿ, ದೊಡ್ಡದಿರಲಿ ಅದನ್ನು ಗಂಭೀರವಾಗಿ ಪರಿಗಣಿಸಿ ಹೋಂ ವರ್ಕ್ ಮಾಡಿ. ನಮಗೆ ಹಣ ಕೊಡುವುದು ಜನರು. ಜನರ ಹಣದಲ್ಲಿ ನಮಗೆ ಸವಲತ್ತುಗಳು ಸಿಗುತ್ತಿವೆ. ಈ ಬಗ್ಗೆ ನಮಗೆ ಪ್ರಜ್ಞೆ ಮತ್ತು ಕರ್ತವ್ಯ ಪ್ರಜ್ಞೆ ಹಾಗೂ ಧನ್ಯತೆ ಇರಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬ್ಯಾರಿಕೇಡ್ ಬಂಧಿ | ಬಿಜೆಪಿ ನಾಯಕರ ಕಾಲೆಳೆದ ಪ್ರಿಯಾಂಕ್ ಖರ್ಗೆ, ದಿನೇಶ್‌ ಗುಂಡೂರಾವ್

“ಕೆಲವು ನ್ಯಾಯಾಧೀಶರು ಮುಖ ನೋಡಿ ಮಣೆ ಹಾಕುತ್ತಾರೆ ಎನ್ನುವ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿದೆ. ಇದನ್ನು ಎಲ್ಲರೂ ಒಟ್ಟಾಗಿ ಅಳಿಸಬೇಕು. ಪ್ರಕರಣಗಳಲ್ಲಿ ಅನಗತ್ಯವಾಗಿ ದಿನಾಂಕ ಪಡೆಯಬಾರದು. ಕೇಸು ನಡೆಸಬೇಕು. ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಗಳಿಗೆ ಜಾಮೀನು ನೀಡುವುದನ್ನು ಪರಿಣಾಮಕಾರಿಯಾಗಿ ವಿರೋಧಿಸಬೇಕು. ಅಲ್ಲೇ ನಿಮ್ಮಗಳ ಅರ್ಹತೆ ಗೊತ್ತಾಗುತ್ತದೆ” ಎಂದರು.

“ನ್ಯಾಯಾಂಗ ನಿಂದನೆ ಆಗದಂತೆ ವೃತ್ತಿಪರತೆ ಪ್ರದರ್ಶಿಸುವ ಹೊಣೆಗಾರಿಕೆ ನಿಮ್ಮ ಮೇಲಿದೆ. ಸರ್ಕಾರವೇ ನಿಮ್ಮ ಕಕ್ಷಿದಾರ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು. ಕರ್ತವ್ಯ ಪ್ರಜ್ಞೆ ಮೆರೆಯಬೇಕು. ಸರ್ಕಾರ ಮತ್ತು ಜನರ ಹಿತ ಕಾಪಾಡುವ ಮತ್ತು ಸರ್ಕಾರದ ಆಸ್ತಿ ಉಳಿಸುವ ಜವಾಬ್ದಾರಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಿ” ಎಂದು ಸರ್ಕಾರಿ ವಕೀಲರಿಗೆ ಕಿವಿಮಾತು ಹೇಳಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾನೂನು ಸಚಿವ ಎಚ್.ಕೆ.ಪಾಟೀಲ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಸಭೆಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...