ಕುದುರೆಮುಖ ರಾಷ್ಟ್ರೀಯ ಉದ್ಯಾನದಲ್ಲಿರುವ ಬಡ ಕುಟುಂಬಗಳಿಗೆ ಸರ್ಕಾರ ಪುನರ್ವಸತಿ ನೀಡಿಲಿ: ನವೀನ್ ಸಾಲಿಯನ್

Date:

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ವಾಸಮಾಡಲು ಸಾಧ್ಯವಾಗದೆ ಪುನರ್ವಸತಿ ಬಯಸಿರುವ ಬಡ ಕುಟುಂಬಗಳಿಗೆ ಸರ್ಕಾರ ಸಹಾಯ ಹಸ್ತ ನೀಡಿಲಿ ಎಂದು ಕಾಂಗ್ರೆಸ್ ಮುಖಂಡ ನವೀನ್ ಸಾಲಿಯನ್ ಮನವಿ ಮಾಡಿದ್ದಾರೆ.

ಕುದುರೆಮುಖ ಅರಣ್ಯ ಪ್ರದೇಶಗಳಲ್ಲಿ ದಶಕಗಳಿನಿಂದ ವಾಸಿಸುತ್ತಿರುವ ಕುಟುಂಬಗಳು ಆ ಭಾಗದಲ್ಲಿ ವಾಸ ಮಾಡಲು ಅನುಮತಿಯಿಲ್ಲದೆ, ಜೀವನೋಪಾಯಕ್ಕೆ ತೀವ್ರ ಸಂಕಷ್ಟ ಎದುರಿಸುತ್ತಿವೆ. ಈ ಕುಟುಂಬಗಳಿಗೆ ಪುನರ್ವಸತಿ ಹಾಗೂ ನ್ಯಾಯಯುತ ಪರಿಹಾರದ ಅಗತ್ಯ ಬಹಳ ದಿನಗಳಿಂದಲೂ ಪ್ರಸ್ತಾಪವಾಗುತ್ತಿದ್ದ ಮಹತ್ವದ ವಿಚಾರ.

“ಕುದುರೆಮುಖ ಕಬ್ಬಿಣದ ಅದಿರು ಗಣಿಗಾರಿಕೆ ಕಂಪೆನಿ ಕೆಲಸಕ್ಕಾಗಿ ವಿವಿಧ ಕಡೆಗಳಿಂದ ಹಲವು ಕುಟುಂಬಗಳು ಕುದುರೆಮುಖ ಪ್ರದೇಶಕ್ಕೆ ಬಂದು ಕೆಐಒಸಿಎಲ್ ಕಂಪೆನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದವು. ಆನಂತರದ ದಿನಗಳಲ್ಲಿ ಕಂಪೆನಿ ಮುಚ್ಚಿಹೋಗಿದ್ದು, ಇಲ್ಲಿ ದುಡಿಯುತ್ತಿದ್ದ ಹಲವು ಕುಟುಂಬಗಳು ನಿರೋದ್ಯೋಗಿಗಳಾಗಿ ಹೋಗಿದ್ದಾರೆ. ಸದ್ಯ ಕಳಸ ಶೃಂಗೇರಿ ಕಡೆ ಕಾಫಿ ತೋಟಗಳಲ್ಲಿ ಹಾಗೂ ಉಡುಪಿ ಭಾಗಕ್ಕೆ ಕೃಷಿ ಕಾಮಗಾರಿಗೆ ವಲಸೆ ಕೂಲಿ ಕೆಲಸ ಮಾಡಿಕೊಂಡು ಸ್ವಂತಕ್ಕೆ ಸೂರು ಇಲ್ಲದೆ ಜೀವನ ಸಾಗಿಸುವ ಪರಿಸ್ಥಿತಿ ಎದುರಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಕಾಂಗ್ರೆಸ್‌ ಮುಖಂಡ ನವೀನ್ ಸಾಲಿಯನ್

ಈ ಸುದ್ದಿ ಓದಿದ್ದೀರಾ? ವಿಜಯಪುರ | ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಪ್ರತಿಕೃತಿ ದಹಿಸಿ ಪ್ರತಿಭಟನೆ

ಪುನರ್ವಸತಿ ಕೇವಲ ಸ್ಥಳಾಂತರವಲ್ಲ — ಬದುಕು ಪುನರ್ನಿರ್ಮಿಸುವ ಪ್ರಕ್ರಿಯೆ.

“ಕುದುರೆಮುಖ ಪರಿಸರ ಅಭಯಾರಣ್ಯ ವ್ಯಾಪ್ತಿಯಲ್ಲಿ ಬರುವುದರಿಂದ ಹಾಗೂ ಕಸ್ತೂರಿ ರಂಗನ್ ವರದಿ ವಿಚಾರ ಕೂಡ ಇರುವುದು ಆ ಭಾಗದ ಜನರಿಗೆ ಕುದುರೆಮುಖ ಭಾಗದಲ್ಲಿ ವಸತಿಗಾಗಿ ಜಾಗ ನೀಡುವಲ್ಲಿ ಕಾನೂನು ತೊಡಕಾಗಿದೆ. ಈ ಎಲ್ಲ ನಿಟ್ಟಿನಲ್ಲಿ ಆ ಭಾಗದಲ್ಲಿರುವ ನಿರಾಶ್ರಿತರಿಗೆ ಸರ್ಕಾರವೇ ಪುನರ್ವಸತಿ ನೀಡಬೇಕು ಹಾಗೂ ಮೂಲಭೂತ ಸೌಕರ್ಯಗಳಿಲ್ಲದೆ ಜನರು ಎದುರಿಸುತ್ತಿರುವ ದೀರ್ಘಕಾಲದ ನೋವಿಗೆ ಸಕಾರಾತ್ಮಕ ಪರಿಹಾರ ದೊರಕಿಸಬೇಕು” ಎಂದು ಕಾಂಗ್ರೆಸ್ ಮುಖಂಡ ನವೀನ್ ಸಾಲಿಯನ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...