ರೈತರ ಜೀವನ ಸುಧಾರಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ: ಪ್ರೊ ರವಿವರ್ಮ ಕುಮಾರ್

Date:

ಸಾಮೂಹಿಕ ನಾಯಕತ್ವದಲ್ಲಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಮತ್ತು ಶ್ರೀಕ್ಷೇತ್ರ ಪುಷ್ಪಗಿರಿ ಸಹಯೋಗದೊಂದಿಗೆ ಹಾಸನ ಜಿಲ್ಲೆ, ಬೇಲೂರು ತಾಲ್ಲೂಕು, ಹಳೇಬೀಡಿನಲ್ಲಿ ಶನಿವಾರ ಆರಂಭಗೊಂಡ ನಾಲ್ಕು ದಿನಗಳ ‘ಸುಭಾಷ್ ಪಾಳೇಕರ್ ಕೃಷಿ ಪದ್ಧತಿ’ ಕಾರ್ಯಾಗಾರದಲ್ಲಿ ಮಾತನಾಡಿದ ಹಿರಿಯ ನ್ಯಾಯವಾದಿ ಪ್ರೊ ರವಿವರ್ಮ ಕುಮಾರ್, ‘ರೈತರ ಜೀವನ ಸುಧಾರಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ’ ಎಂದು ಕಳವಳ ವ್ಯಕ್ತಪಡಿಸಿದರು.

ಆಳುವ ಸರ್ಕಾರಗಳು ರೈತ ಸಮುದಾಯವನ್ನು ಮರೆತಿವೆ. ದೇಶಕ್ಕೆ ಅನ್ನ ನೀಡುವ ರೈತರ ವಿರೋಧಿಯಾಗಿ ನಡೆದುಕೊಳ್ಳುತ್ತಿವೆ. ದೇಶದ ಜನಸಂಖ್ಯೆಯಲ್ಲಿ ಶೇ.65% ಜನ ಕೃಷಿಯಲ್ಲಿ ತೊಡಗಿಕೊಂಡಿದ್ದಾರೆ. ವಿಪರ್ಯಾಸ ಎಂದರೆ, ರೈತರು ಎಲ್ಲದಕ್ಕೂ ಬೀದಿಗೆ ಇಳಿದು ಪ್ರತಿಭಟಿಸುವ ಸಂದರ್ಭ ಎದುರಾಗಿದೆ. ರೈತ ವಿರೋಧಿ ಕಾಯ್ದೆಗಳನ್ನು ಹೇರುವ ಮೂಲಕ ರೈತ ಸಮುದಾಯಕ್ಕೆ ಮುಳುವಾಗಲು ಹೊರಟರು.

ದಿಟ್ಟವಾಗಿ ಹೋರಾಟ ಕಟ್ಟಿ ಸರ್ಕಾರಗಳ ವಿರುದ್ಧ ಪ್ರತಿಭಟಿಸಿ ಹಿಂತೆಗೆದುಕೊಳ್ಳುವಂತೆ ಮಾಡುವಲ್ಲಿ ಸಫಲರಾದರು. ರಾಜ್ಯ ಸರ್ಕಾರ ಇನ್ನೂ ಅಂತಹ ಪ್ರಯತ್ನಕ್ಕೆ ಮುಂದಾಗಿಲ್ಲ. ಕೇಂದ್ರ ಸರ್ಕಾರ ಪರ್ಯಾಯ ರೂಪದಲ್ಲಿ ಹೊಸ ಹೊಸ ಕಾಯ್ದೆ ತರುವಲ್ಲಿಯೂ ಮುಂದಾಗುತ್ತಿದೆ. ಇದೆಲ್ಲಾ ನೋಡಿದಾಗ ಕಾಪೋರೇಟ್ ಕುಳಗಳ ಮೇಲಿನ ಮೋಹ, ರೈತ ವಿರೋಧಿ ನಿಲುವಿಗೆ ಸ್ಪಷ್ಟ ಕಾರಣವಾಗುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೈತನಿಗೆ ಸರ್ಕಾರಗಳು ತೊಡಕಾಗಿದ್ದಾರೆ, ಇನ್ನೊಂದೆಡೆ ಹವಾಮಾನ ವೈಪರೀತ್ಯದಿಂದ ಅತಿವೃಷ್ಟಿ ಅನಾವೃಷ್ಟಿಗೆ ರೈತ ನಲುಗುತ್ತಿದ್ದಾನೆ. ವರ್ಷಪೂರ ಮಳೆ, ಇನ್ನೊಂದೆಡೆ ಮಳೆಯೇ ಇಲ್ಲ. ಹೀಗಾದಾಗ, ರೈತ ಬೆಳೆ ಬೆಳೆಯುವುದಾ? ಬೆಳೆದ ಬೆಳೆ ರಕ್ಷಿಸಿಕೊಳ್ಳುವುದಾ? ಯಾವುದು ಮಾಡಬೇಕು ಎನ್ನುವ ಜಿಜ್ಞಾಸೆಗೆ ಸಿಲುಕಿದ್ದಾನೆ. ರೈತನ ಮೇಲೆ ಪ್ರಕೃತಿಯಿಂದ ಹಿಡಿದು, ಆಳುವ ವರ್ಗಗಳು ಸಹ ದಾಳಿ ಮಾಡುತ್ತಿವೆ.

ಇಂತಹ ಸಂದರ್ಭದಲ್ಲಿ ರೈತ ಸಾಲಬಾಧೆಗೆ ಸಿಲುಕಿ ಆತ್ಮಹತ್ಯೆ ಕಡೆಗೆ ಮುಖ ಮಾಡಿದ್ದಾನೆ. ಇದು ನಿಜಕ್ಕೂ ದುರಂತ. ಅನ್ನ ಕೊಟ್ಟ ಕೈ ಉರುಳಿಗೆ ಕೊರಳೊಡ್ದುವುದು ಸರಿಯಾದುದಲ್ಲ. ಸರ್ಕಾರಗಳು ಸಹ ಪ್ರಜ್ಞಾವಂತಿಕೆಯಿಂದ ನಡೆದುಕೊಳ್ಳಬೇಕು. ಬೆಳೆದ ಬೆಳೆಗೆ ಬೆಂಬಲ ಬೆಲೆ ಇಲ್ಲದಿರುವುದು, ದಲ್ಲಾಳಿಗಳ ಹಾವಳಿ, ಮಾರುಕಟ್ಟೆ ಇಲ್ಲದಿರುವುದು, ಖರೀದಿ ಕೇಂದ್ರ ಸಮರ್ಪಕ ನಿರ್ವಹಣೆ ಇಲ್ಲದಿರುವುದು ರೈತರನ್ನು ಸಂಕಷ್ಟಕ್ಕೆ ದೂಡಿವೆ.

ಈ ವಿಶೇಷ ಸುದ್ದಿ ಓದಿದ್ದೀರಾ? ಘನತೆಯ ಬದುಕಿಗಾಗಿ, ಸ್ವಾವಲಂಬಿ ಬೇಸಾಯದತ್ತ ಮುಖ ಮಾಡೋಣ

ಇದರ ಜೊತೆಗೆ ರೈತ ವಿರೋಧಿ ಕಾಯ್ದೆಗಳು. ರೈತನ ಬದುಕಿನ ಮೇಲೆ ಚೆಲ್ಲಾಟವಾಡುವ ಇಂತಹ ನಿರ್ಧಾರಗಳು ಸದ್ದಿಲ್ಲದೆ ರೈತರ ಕುತ್ತಿಗೆ ಹಿಂಡುವಂತ ನಡೆಗಳಾಗಿವೆ. ಈ ಎಲ್ಲದರ ಕಾರಣಗಳು ರೈತ ಸಾಯುವಂತೆ ಪ್ರೇರೇಪಿಸುತ್ತಿವೆ. ಹಾವೇರಿಯಲ್ಲಿ ಅತಿ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡರೆ, ಬೆಳಗಾವಿ ತದನಂತರದ ಸ್ಥಾನದಲ್ಲಿದೆ. ಈ ಅಂಕಿ ಅಂಶಗಳನ್ನು ಚಳಿಗಾಲದ ಅಧಿವೇಶನದಲ್ಲಿ ವರದಿ ಮಂಡಿಸಿದ್ದಾರೆ.

ಕಾರ್ಯಾಗಾರದ ಲೈವ್ ವೀಕ್ಷಿಸಿ:https://www.youtube.com/live/RKr1vmmzxD8?si=9sjQdjuO_rgU5KPb

ರೈತನಿಗೆ ಕೃಷಿ ನಷ್ಟವು ಹೊರೆ, ಬೆಳೆದ ಬೆಳೆಗೆ ತಕ್ಕ ಬೆಲೆ ಇಲ್ಲದಿದ್ದರೂ ಹೊರೆ, ಸರಿಯಾದ ಸಮಯಕ್ಕೆ ಕೊಂಡುಕೊಳ್ಳದೆ ಇದ್ದರು ಹೊರೆ, ಸೂಕ್ತ ಮಾರುಕಟ್ಟೆ ಇಲ್ಲದಿದ್ದರೂ ಹೊರೆ. ಇಂತಹ ಸಾಂಧರ್ಭಿಕ ತಿಕ್ಕಾಟಕ್ಕೆ ಸಿಲುಕಿ, ಸಾಲ ತಿರುವಳಿ ಸಾಧ್ಯವಾಗುತ್ತಿಲ್ಲ. ಸಾಲಸೋಲದ ಹೊರೆ ಜಿಗುಪ್ಸೆ ತರಿಸುವಂತಾಗಿದೆ. ಆಳುವ ಸರ್ಕಾರಗಳು ರೈತರ ಹಿತ ಕಾಯಬೇಕು. ರೈತ ಪರ ನಿಲುವು ತಾಳಬೇಕು. ರೈತ ಸಮುದಾಯ ಆರ್ಥಿಕ ಸದೃಢತೆ ಕಂಡುಕೊಳ್ಳಲು ಅಗತ್ಯ ನಿಯಮ ರೂಪಿಸಬೇಕು ಎಂದು ಸಲಹೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...