ಯಾದಗಿರಿ | ಐತಿಹಾಸಿಕ ಬೌದ್ಧ ತಾಣ ಅಭಿವೃದ್ಧಿಗೆ ಸರ್ಕಾರ ನಿರ್ಲಕ್ಷ : ದೇವೇಂದ್ರ ಹೆಗ್ಗಡೆ

Date:

ಕರ್ನಾಟಕದ ವೈಶಿಷ್ಟ್ಯ ಪೂರ್ಣ ವಿಶ್ವ ವಿಖ್ಯಾತ ಪ್ರವಾಸೋದ್ಯಮ ತಾಣವಾದ ಯಾದಗಿರಿ ಜಿಲ್ಲೆಯ ಶಹಾಪುರ ನಗರದ ಮಲಗಿದ ಬುದ್ಧನ ಬೆಟ್ಟದ ಯೋಜನೆಯನ್ನು ಸರ್ಕಾರ ತೀವ್ರ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಸಾಹಿತಿ ಬುದ್ಧಘೋಷ್ ದೇವೇಂದ್ರ ಹೆಗ್ಗಡೆ ಅಸಮಧಾನ ವ್ಯಕ್ತಪಡಿಸಿದ್ದಾರೆ.

“ಈ ಕುರಿತು ಪ್ರಕಟಣಾ ಹೇಳಿಕೆ ನೀಡಿರುವ ಅವರು ಶಹಾಪುರದ ಬೇರೆ ಸ್ಥಳಗಳಿಗೆ ಆದ್ಯತೆ ನೀಡುವ ಪ್ರವಾಸೋದ್ಯಮ ಸಚಿವ ಎಚ್. ಕೆ. ಪಾಟೀಲ್ ಅವರು ಬೌದ್ದ ಪ್ರವಾಸಿ ತಾಣಗಳನ್ನು ಯಾಕೆ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ದಲಿತರು ಹೆಚ್ಚು ಹೆಚ್ಚು ಬೌದ್ಧ ಧರ್ಮದ ಕಡೆ ವಾಲುತ್ತಿದ್ದಾರೆ ಎಂಬ ಕಾರಣಕ್ಕೆ ಬೌದ್ಧ ತಾಣಗಳು ಸಚಿವರಿಗೆ ಅಸ್ಪೃಶ್ಯವಾಗಿ ಕಾಣುತ್ತಿವೆಯೆ” ಎಂದು ಪ್ರಶ್ನಿಸಿದ್ದಾರೆ.

“ಕೆಲ ದಿನಗಳ ಹಿಂದೆ ಸಚಿವರು ಶಹಾಪುರ ನಗರದ ಮಲಗಿದ ಬುದ್ಧನ ಬೆಟ್ಟದ ವೀಕ್ಷಣೆಗೆ ಬಂದಾಗ ಎಲ್ಲಾ ದಲಿತ ಸಂಘಟನೆಗಳ ಮುಖಂಡರು, ಭಾರತೀಯ ಬೌದ್ಧ ಮಹಾಸಭಾದ ನಾಯಕರು ಸಚಿವರನ್ನು ಭೇಟಿ ನೀಡಿ ಬೌದ್ಧ ತಾಣದ ಅಭಿವೃದ್ಧಿ ಕುರಿತು ಮನವಿ ಸಲ್ಲಿಸಲಾಗಿತ್ತು. ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಸೌಜನ್ಯಕ್ಕಾದರೂ ಯೋಜನೆಯ ಪ್ರದೇಶದಲ್ಲಿ ಸುತ್ತಾಡಿ ನೋಡಲಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾನೂನುಬಾಹಿರವಾಗಿ ಅಕ್ರಮ ಗ್ರಾನೈಟ್ ಅಂಗಡಿ ಸ್ಥಾಪಿಸಿದ್ದರಿಂದ ಪ್ರವಾಸಿಗರಿಗೆ, ಜನರಿಗೆ ಬುದ್ಧ ಮಲಗಿದ ದೃಶ್ಯ ಕಾಣಲು ಅಡ್ಡಿಯಾಗುತ್ತದೆ. ಈ ಬಗ್ಗೆ ದೂರು ನೀಡಿದರೂ ಸ್ಥಳ ಪರಿಶೀಲನೆ ನಡೆಸಲಿಲ್ಲ. ಇದೊಂದು ಕಾಟಾಚಾರದ ಭೇಟಿ ಎಂಬಂತೆ ಇತ್ತು. ಶಹಾಪುರದ ಬೇರೆ ಬೇರೆ ಸ್ಥಳಗಳಿಗೆ ಆಸಕ್ತಿವಹಿಸಿ ಅಭಿವೃದ್ಧಿಗಾಗಿ ಅನುದಾನ ಒದಗಿಸುವ ಇಚ್ಚಾಶಕ್ತಿ ಬೌದ್ಧ ತಾಣಕ್ಕೆ ದೊರಕಲಿಲ್ಲ” ಎಂದು ವಿಷಾದ ವ್ಯಕ್ತಪಡಿದ್ದಾರೆ.

ರಾಜ್ಯದಲ್ಲಿ ಅಪರೂಪಕ್ಕೆ ಇರುವ ಬೌದ್ಧ ಸ್ಥಳಗಳ ಕಡೆಗಣನೆ ಅದೆಷ್ಟು ಸರಿ. ಶಿರಿವಾಳಕ್ಕೆ ಭೇಟಿ ನೀಡಿದ ಪ್ರವಾಸ್ಯೋದ್ಯಮ ಸಚಿವರು ಶಿರಿವಾಳ ಪಕ್ಕದಲ್ಲಿರುವ ಬೌದ್ಧ ಕ್ಷೇತ್ರ ಸನ್ನತ್ತಿಗೆ ಭೇಟಿ ನೀಡಲಿಲ್ಲ. ಸಚಿವರು ಬೌದ್ಧ ತಾಣಕ್ಕೆ ಯಾಕೆ ನಿರಾಸಕ್ತಿ ತೋರುತ್ತಿದ್ದಾರೆ. ಬೌದ್ಧ ಸ್ಥಳದ ಅಭಿವೃದ್ದಿಯಲ್ಲಿ ಆಗಿರುವ ಭ್ರಷ್ಟಾಚಾರಕ್ಕೆ ಯಾಕೆ ಮೌನ. ಯಾದಗಿರಿ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಯಾಕೆ ಶಹಾಪುರ ಬೌದ್ಧ ತಾಣದಲ್ಲಿ ಥೀಮ್ ಪಾರ್ಕ್ ನಿರ್ಮಾಣಕ್ಕೆ ಆಸಕ್ತಿ ತೋರುತ್ತಿಲ್ಲ” ಎಂದು ಪ್ರಶ್ನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಈ ಪರಿ ನರಮೇಧದ ನಂತರವೂ ಮೇಲೇಳದೇಕೆ ನೆತ್ತರದಾಹಿಗಳ ತಕ್ಕಡಿ?

ಶಹಾಪುರ ತಾಲೂಕಿನ ಅಸ್ಮಿತೆಯನ್ನು ವಿಶ್ವ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ ಬೌದ್ಧ ತಾಣವನ್ನು ಉಳಿಸುವ ಮತ್ತು ಬೆಳೆಸುವ ನಿಟ್ಟಿನಲ್ಲಿ ಶಹಾಪುರ ತಾಲೂಕು ಮತ್ತು ರಾಜ್ಯದ ಎಲ್ಲಾ ಪ್ರಗತಿಪರ ನಾಗರಿಕರು ಮತ್ತು ಸಂಘ-ಸಂಸ್ಥೆಗಳು ಸರ್ಕಾರದ ತಾರತಮ್ಯದ ನಡೆಯನ್ನು ಖಂಡಿಸಬೇಕು ಮತ್ತು ಬೌದ್ಧ ತಾಣಗಳ ಉಳಿವಿಗೆ ಹಾಗೂ ಅಭಿವೃದ್ಧಿಗಾಗಿ ಸರ್ಕಾರಕ್ಕೆ ಒತ್ತಾಯಿಸಬೇಕು” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...