ಕೊಡಗು | ಗ್ಲಾಸ್ ಬ್ರಿಡ್ಜ್ ಯೋಜನೆ ಕೈಬಿಟ್ಟ ಸರ್ಕಾರ

Date:

ಕೊಡಗು ಜಿಲ್ಲೆ ಮಡಿಕೇರಿಯ ರಾಜಾಸೀಟು ನಲ್ಲಿ ನಿರ್ಮಾಣವಾಗಬೇಕಿದ್ದ ಸರಿಸುಮಾರು ₹15 ಕೋಟಿ ರೂಪಾಯಿ ವೆಚ್ಚದ ಗ್ಲಾಸ್ ಬ್ರಿಡ್ಜ್ ಹಾಗೂ ಫುಡ್ ಕೋರ್ಟ್ ನಿರ್ಮಾಣ ಯೋಜನೆಯನ್ನು ಜನರ ವ್ಯಾಪಕ ಆಕ್ರೋಶದಿಂದಾಗಿ ಸರ್ಕಾರ ಕೈಬಿಟ್ಟಿದೆ ಎಂದು ಶಾಸಕ ಡಾ ಮಂತರ್ ಗೌಡ ಮಾಹಿತಿ ನೀಡಿದ್ದಾರೆ.

ಕೊಡಗಿನ ಪ್ರವಾಸೋಧ್ಯಮಕ್ಕೆ ಮೆರಗು ನೀಡುವ ಉದ್ದೇಶದಿಂದ ಸರ್ಕಾರ ಭೂ ಕುಸಿತ ಪ್ರದೇಶದಲ್ಲಿಯೇ ಯೋಜನೆಯನ್ನು ಕೈಗೊಳ್ಳಲು ಮುಂದಾಗಿತ್ತು. ಬೆಟ್ಟದಂಚಿನಲ್ಲಿ ಆಳವಾಗಿ ಕೊರೆದು ಬ್ರಿಡ್ಜ್ ನಿರ್ಮಾಣ ಮಾಡುವುದು ಮುಂಬರುವ ದಿನಗಳಲ್ಲಿ ಗುಡ್ಡ ಕುಸಿದರೆ ಅಪಾಯ ಎಂದು ಜನಾಕ್ರೋಶ ಕೇಳಿಬಂದಿತ್ತು.

ಮಡಿಕೇರಿಯ ರಾಜಾಸಿಟ್ ಕೊಡಗಿನಲ್ಲಿ ಅತಿ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ತಾಣ. ಇಂತಹ ಸ್ಥಳದಲ್ಲಿ ಸ್ಕೈವಾಕ್ ಗ್ಲಾಸ್ ಬ್ರಿಡ್ಜ್ ಮಾಡಲು ಬೆಟ್ಟದಲ್ಲಿ ಆಳವಾಗಿ ಕೊರೆದು ಪಿಲ್ಲರ್ ಅಳವಡಿಕೆ ಮಾಡಬೇಕಿತ್ತು. ಇದರ ಸುತ್ತ ಪರ ವಿರೋಧ ಚರ್ಚೆ ನಡೆದು ಸಾರ್ವಜನಿಕರು ವಿರೋಧ ಮಾಡಿದ್ದರು. ತೋಟಗಾರಿಕೆ ಇಲಾಖೆ ಟೆಂಡರ್ ಕರೆದು ಯೋಜನೆ ಆರಂಬಿಸಲು ಒಂದು ಹಂತದ ಸಿದ್ಧತೆ ಕೂಡ ಮಾಡಿಕೊಂಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯೋಜನೆಯನ್ನು ಕೈಗೆಟ್ಟಿಕೊಳ್ಳುವ ಮೊದಲು ಸ್ಥಳಕ್ಕೆ ಸಂಬಂಧಪಟ್ಟ ಭೂ ವಿಜ್ಞಾನಿಗಳು, ಪರಿಸರ ಇಲಾಖೆ ತಜ್ಞರು ಪರೀಕ್ಷಿಸಿ ವರದಿ ಸಂಗ್ರಹಿಸಿ, ಜಾಗದ ಸುರಕ್ಷತೆ ಬಗ್ಗೆ ಮಾಹಿತಿ ನೀಡಬೇಕಿತ್ತು. ಆದರೇ, ಇದ್ಯಾವುದು ನಡೆದಿರಲಿಲ್ಲ. ಸರ್ಕಾರ ಗಂಭೀರವಾಗಿ ಪರಿಗಣಿಸಿ ಗ್ಲಾಸ್ ಬ್ರಿಡ್ಜ್ ನಿರ್ಮಿಸಿದರೆ ಅಪಾಯ ಸಂಭವಿಸುವ ಸಾಧ್ಯತೆಯಿದೆ ಎಂದು ಮನಗಂಡು ಈ ಯೀಜನೆಯನ್ನು ಕೈಬಿಟ್ಟಿದೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಓರ್ವನ ರಕ್ತದಾನದಿಂದ ಮೂವರ ಪ್ರಾಣ ಉಳಿಸಬಹುದು : ಸುರೇಶ್

ಗ್ಲಾಸ್ ಬ್ರಿಡ್ಜ್ ಹಾಗೂ ಫುಡ್ ಕೋರ್ಟ್ ಆದರೇ ಪ್ರವಾಸಿಗರ ಸಂಖ್ಯೆ ಗಣನಿಯವಾಗಿ ಹೆಚ್ಚಬಹುದು, ವಾಹನಗಳ ಓಡಾಟ, ಒತ್ತಡದಿಂದ ಅನಾಹುತಕ್ಕೆ ಎಡೆಮಾಡಿಕೊಟ್ಟಂತಾಗಬಹುದು ಎಂದು ವಿಶ್ಲೇಷಸಲಾಗಿತ್ತು. ಈ ಕುರಿತಾಗಿಯೂ ಹಲವಾರು
ಹೋರಾಟಗಳು ಸ್ಥಳೀಯವಾಗಿ ನಡೆದಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...