ರಾಯಚೂರು | ಬರ ಪರಿಹಾರ ವಿಚಾರದಲ್ಲಿ ರೈತರಿಗೆ ಮಲತಾಯಿ ಧೋರಣೆ: ಎಐಕೆಕೆಎಸ್

Date:

ರಾಜ್ಯ ಸರಕಾರ ಬರಗಾಲ ಘೋಷಿಸಿ ಹಣ ಬಿಡುಗಡೆ ಮಾಡಿದರೂ ರೈತರ ಖಾತೆಗೆ ಹಣ ಜಮೆಯಾಗದ ಪರಿಣಾಮ ರೈತರು ಕಂಗಾಲಾಗಿದ್ದಾರೆ. ರೈತರ ಬಗ್ಗೆ ಸರಕಾರ ಮಲತಾಯಿ ಧೋರಣೆ ತಾಳುತ್ತಿದೆ. ಶೀಘ್ರವೇ ಬರಗಾಲ ಪರಿಹಾರ ಧನ ನೀಡಬೇಕೆಂದು ಎಐಕೆಕೆಎಸ್ ಒತ್ತಾಯಿಸಿದೆ.

ರಾಯಚೂರು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಕಮರಿ ಹೋದ ಬೆಳೆಗಳನ್ನು ಪ್ರದರ್ಶಿಸಿದ ಕರ್ನಾಟಕ ರೈತ ಸಂಘದ ಕಾರ್ಯಕರ್ತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಜಿಲ್ಲಾಡಳಿತಕ್ಕೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ಜಿಲ್ಲೆಯ ದೇವದುರ್ಗ, ಮಾನ್ವಿ, ಸಿಂಧನೂರು, ಮಸ್ಕಿ, ಸಿರವಾರ, ಲಿಂಗಸುಗೂರು ಮತ್ತು ರಾಯಚೂರು ತಾಲೂಕುಗಳಲ್ಲಿ ಸಕಾಲಕ್ಕೆ ಮುಂಗಾರು ಮತ್ತು ಹಿಂಗಾರು ಮಳೆಯಾಗದ ಕಾರಣ ರೈತರು ತಮ್ಮ ಜಮೀನುಗಳಲ್ಲಿ ಬಿತ್ತನೆ ಮಾಡಿದ ಬೆಳೆಗಳು ಬಿಸಿಲಿಗೆ ಕಮರಿ ಹೋಗುತ್ತಿವೆ. ಇದರಿಂದ ಸರಕಾರಿ ಮತ್ತು ಸಹಕಾರಿ ಬ್ಯಾಂಕ್‍ಗಳಲ್ಲಿ ಸಾಲ ಮಾಡಿದ ರೈತರು ಸಾಲ ತೀರಿಸಲಾಗದೆ ಆತ್ಮಹತ್ಯೆಗೆ ಶರಣಾಗುವ ಪರಿಸ್ಥತಿ ಬಂದೊದಗಿದೆ ಎಂದು ಪ್ರತಿಭಟನಾಕಾರರು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಾಲ ವಸೂಲಿಗೆ ಬ್ಯಾಂಕ್ ಅಧಿಕಾರಿಗಳು ರೈತರ ಮನೆ ಮನೆಗೆ ಅಲೆಯುತ್ತಿದ್ದಾರೆ. ಮೊದಲೇ ಬರಗಾಲದಿಂದ ಕಂಗಾಲಾದ ರೈತ ಸಾಲ ತೀರಿಸಲು ಅಸಾಧ್ಯವಿದೆ. ಖಾಸಗಿ ಮತ್ತು ಬ್ಯಾಂಕಿನವರು ಸಾಲ ಮರು ಪಾವತಿಸದಿದ್ದರೆ ಮನಬಂದಂತೆ ಬಡ್ಡಿ ವಸೂಲಿ ಮಾಡುತ್ತಿದ್ದಾರೆ. ಮಳೆ ಕೊರತೆಯಿಂದ ಬೆಳೆಗಳು ಸಂಪೂರ್ಣ ನಷ್ಟವಾದರೂ ಕೇಂದ್ರ ಸರಕಾರ ಬರಗಾಲ ಘೋಷಿಸದೇ ಇರುವುದು ರೈತರಿಗೆ ಮಾಡಿರುವ ದ್ರೋಹವಾಗಿದೆ. ಕೂಡಲೇ ಕೇಂದ್ರ ಸರಕಾರ ಬರಗಾಲ ಘೋಷಿಸಿ ಪರಿಹಾರ ಒದಗಿಸಬೇಕೆಂದು” ಆಗ್ರಹಿಸಿದರು.

ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಅಡಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ತಕ್ಷಣ ಹಣ ಬಿಡುಗಡೆ ಮಾಡಬೇಕು. ಮಳೆ ಅಭಾವದಿಂದಾಗಿ ತೊಗರಿ, ಶೇಂಗಾ, ಕಬ್ಬು ಹಾಗೂ ಇನ್ನಿತರ ಬೆಳೆ ಬೆಳೆದ ರೈತರು ನೀರಿಲ್ಲದೆ ಪರದಾಡುವಂತಾಗಿದೆ. ನೀರಾವರಿ ಸೌಲಭ್ಯ ಹೊಂದಿರುವ ಕಷಿಕರಿಗೂ ಬೆಳೆಯನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ ಎಂದು ಹೇಳಿದರು.

“ಉದ್ಯೋಗ ಖಾತ್ರಿ ಯೋಜನೆಯನ್ನು ವರ್ಷಪೂರ್ತಿ ವಿಸ್ತರಿಸಬೇಕು. ರೈತರು ಗುಳೆ ಹೋಗುವುದು ತಪ್ಪಿಸಬೇಕು. ಬರಪೀಡಿತ ಗ್ರಾಮಗಳಲ್ಲಿ ಉಚಿತ ಶುದ್ಧ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ನೀರು ಮತ್ತು ಮೇವಿನ ವ್ಯವಸ್ಥೆ ಮಾಡಬೇಕು. ಶಾಲಾ-ಕಾಲೇಜು ಮಕ್ಕಳ ಶಾಲಾ ಶುಲ್ಕ ಮನ್ನಾ ಮಾಡಬೇಕು. ಎಲ್ಲ ಅರ್ಹ ಬಡ ಕುಟುಂಬಗಳಿಗೆ ವರ್ಷವಿಡೀ ಉಚಿತ ಪಡಿತರ ನೀಡಲು ಕ್ರಮ ಕೈಗೊಳ್ಳಬೇಕು. ಜಿಲ್ಲೆಯಾದ್ಯಂತ ಕೆರೆ ಜೋಡಣೆ ಯೋಜನೆ ಜಾರಿಗೊಳಿಸಿ ಶಾಶ್ವತವಾಗಿ ನೀರಿನ ಸಮಸ್ಯೆ ಮುಕ್ತಿಗೊಳಿಸಬೇಕು” ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಜನತೆ ಬರಗಾಲದಿಂದ ತತ್ತರಿಸಿದ್ದಾರೆ. ಗ್ರಾಮೀಣ ಭಾಗದ ಜನರು ಕೆಲಸ ಕಾರ್ಯಗಳಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇಂತಹ‌ ವೇಳೆ ರಾಜ್ಯದ ಸಚಿವರು ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ನಿರತರಾಗಿದ್ದಾರೆ. ಆದರೆ ತಮ್ಮ ರಾಜ್ಯದ ಜನರ ಬಗ್ಗೆ ರಾಜ್ಯ ಸರ್ಕಾರಕ್ಕೆ ಕಾಳಜಿ‌ ಇಲ್ಲದಂತಾಗಿದೆ ಎಂದು ಕಿಡಿಕಾರಿದರು. ಕೂಡಲೇ ನಮ್ಮ ಬೇಡಿಕೆಗಳಿಗೆ ಸ್ಪಂದನೆ ಮಾಡದಿದ್ದಲ್ಲಿ ರಾಜ್ಯವ್ಯಾಪಿ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.

ಬೇಡಿಕೆಗಳು:
1.ರಾಜ್ಯದಲ್ಲಿ ಕೂಡಲೇ ಕೇಂದ್ರ ಮತ್ತು ರಾಜ್ಯ ಸರಕಾರಗಳು ಬರ ಪರಿಹಾರ ಕೊಡಬೇಕು.
2.ಕೇಂದ್ರದಿಂದ ಬರ ಪರಿಹಾರ ಪ್ರತಿ ಎಕರೆಗೆ 50 ಸಾವಿರ ರೂ. ಗಳಂತೆ ನಿಗದಿಗೊಳಿಸಿ, ರಾಜ್ಯ ಸರಕಾರ 30 ಸಾವಿರ ಹಣ ಬಿಡುಗಡೆ ಮಾಡಬೇಕು.
3.ಸಹಕಾರಿ ಬ್ಯಾಂಕ್‍ಗಳು, ಸರಕಾರಿ ಬ್ಯಾಂಕ್‍ಗಳಲ್ಲಿನ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು.
4.ರೈತರು ಬೆಳೆದು, ಮಳೆಯಿಂದ ಅಥವಾ ಅತಿವೃಷ್ಟಿಯಿಂದ ಹಾನಿಯಾದ ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಬೇಕು.
5.ರಾಜ್ಯ ಸರಕಾರವು ರೈತರಿಗೆ ಗ್ಯಾರಂಟಿ ಕೊಡಬೇಕು.
6.ಮನರೇಗಾ ಯೋಜನೆಯ ಬಾಕಿ ಹಣ ಶೀಘ್ರ ಬಿಡುಗಡೆ ಮಾಡಬೇಕು.

ಈ ಸುದ್ದಿ ಓದಿದ್ದೀರಾ? ಜೀವಮಾನದಲ್ಲಿಯೇ ಮತ್ತೆ ಅಧಿಕಾರ ಕೈಗೆ ಬಾರದು ಎಂಬ ವಾಸ್ತವ ಕುಮಾರಸ್ವಾಮಿ ನಿದ್ದೆಗೆಡಿಸಿದೆ: ಸಿದ್ದರಾಮಯ್ಯ

ಈ ಸಂದರ್ಭದಲ್ಲಿ ಕರ್ನಾಟಕ ರೈತ ಸಂಘ ಜಿಲ್ಲಾಧ್ಯಕ್ಷ ಮಲ್ಲಯ್ಯ ಕಟ್ಟಿಮನಿ ಸೇರಿದಂತೆ ಪ್ರಮುಖರಾದ ಜಿ.ಅಂಬರೀಶ್, ಅಜೀಜ್ ಜಾಗೀರ್ದಾರ್, ಕೆ. ಗಿರಿಲಿಂಗ ಸ್ವಾಮಿ, ಶಿವರಾಂ, ಅಡಿವೆಪ್ಪ, ಶಫೀಕ್ ಪಾಷಾ, ಸಿದ್ದಲಿಂಗಪ್ಪ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...