ಸೌಜನ್ಯ ಹತ್ಯೆ ಪ್ರಕರಣದ ಮರು ತನಿಖೆ ಯೋಚನೆ ಸರ್ಕಾರದ ಮುಂದಿಲ್ಲ: ಗೃಹ ಸಚಿವ ಪರಮೇಶ್ವರ್‌

Date:

  • ವರ್ಗಾವಣೆ ವಿಚಾರ ಬೀದಿಯಲ್ಲಿ ಚರ್ಚೆ ಮಾಡಲು ಆಗುತ್ತಾ?’
  • ‘ಸಿಎಂ ಸಿದ್ದರಾಮಯ್ಯ ಜೊತೆ ರಹಸ್ಯವಾಗಿ ಮಾತನಾಡಿದ್ದೇನೆ’

ವರ್ಗಾವಣೆ ವಿಚಾರಗಳನ್ನು ಬೀದಿಯಲ್ಲಿ ಕುಳಿತು ಮಾತನಾಡಲು ಆಗುತ್ತಾ? ರಹಸ್ಯವಾಗಿ ಮಾತನಾಡುವ ವಿಚಾರಗಳನ್ನು ಹಾಗೇ ಮಾತನಾಡಬೇಕು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, “ವರ್ಗಾವಣೆ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ರಹಸ್ಯವಾಗಿ ಮಾತನಾಡಿದ್ದೇನೆ. ಹಿಂದೆಯೂ ಮಾತನಾಡಿದ್ದೇವೆ. ಮುಂದೆಯೂ ರಹಸ್ಯವಾಗಿಯೇ ಮಾತನಾಡುತ್ತೇವೆ” ಎಂದರು.

ಹೈಕಮಾಂಡ್‌ ಬುಲಾವ್‌ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿ, “ಬುಧವಾರ (ಆಗಸ್ಟ್ 2) ದೆಹಲಿಯಲ್ಲಿ ನಡೆಯಲಿರುವ ಸಭೆಯ ಕಾರ್ಯಸೂಚಿಯಲ್ಲಿ ಏನಿದೆ ಗೊತ್ತಿಲ್ಲ. ಈ ಹಿಂದೆ ಪಕ್ಷದ ನಾಯಕರು ಕೆಲವೊಮ್ಮೆ ನಮ್ಮನ್ನು ದೆಹಲಿಗೆ ಕರೆಸಿಕೊಳ್ಳುತ್ತಿದ್ದರು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಗುಲಾಂ ನಬಿ ಆಜಾದ್ ಅವರು ಈ ಹಿಂದೆ ಸಚಿವರ ಜೊತೆಗೆ ಪ್ರತ್ಯೇಕವಾಗಿ ಮಾಹಿತಿ ಪಡೆಯುತ್ತಿದ್ದರು. ದೆಹಲಿ ಸಭೆಯಲ್ಲಿ ಲೋಕಸಭೆ ಚುನಾವಣೆಗೆ ಸಿದ್ಧತೆ ಬಗ್ಗೆ ಚರ್ಚೆ ಆಗಬಹುದು. ಸಚಿವರ ಕಾರ್ಯ ಪರಿಶೀಲನೆ ಬಗ್ಗೆ ನನಗೆ ಮಾಹಿತಿ ಇಲ್ಲ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಸೌಜನ್ಯಳಿಗೆ ನ್ಯಾಯ ಸಿಗುವವರೆಗೆ ಮಂಜುನಾಥನ ದರ್ಶನ ಮಾಡಲ್ಲ : ದುನಿಯಾ ವಿಜಯ್‌

ಸೌಜನ್ಯ ಹತ್ಯೆ ಪ್ರಕರಣದ ಮರು ತನಿಖೆ ನಮ್ಮ ಮುಂದಿಲ್ಲ

ಧರ್ಮಸ್ಥಳದ ಸೌಜನ್ಯ ಹತ್ಯೆ ಪ್ರಕರಣದ ಮರು ತನಿಖೆಯನ್ನು ಸರ್ಕಾರ ನಡೆಸುತ್ತಾ ಎಂದು ಪ್ರಶ್ನಿಸಿದಾಗ, “ಈ ಪ್ರಕರಣದ ಮರು ತನಿಖೆ ಬಗ್ಗೆ ಯಾವುದೇ ಯೋಚನೆ ಮಾಡಿಲ್ಲ. ಅಂತಹ ಯೋಚನೆ ಸದ್ಯಕ್ಕೆ ಸರ್ಕಾರದ ಮುಂದಿಲ್ಲ. ಮುಖ್ಯಮಂತ್ರಿಯಿಂದಲೂ ಯಾವುದೇ ಸೂಚನೆ ಬಂದಿಲ್ಲ” ಎಂದು ಹೇಳಿದರು.

ಮತೀಯ ಗೂಂಡಾಗಿರಿ ನಿಯಂತ್ರಣ

ಮತೀಯ ಗೂಂಡಾಗಿರಿ ಪ್ರಕರಣ ರಾಜ್ಯದಲ್ಲಿ ನಡೆಯಬಾರದೆಂದು ಪೊಲೀಸ್‌ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇವೆ. ಮತೀಯ ಗೂಂಡಾಗಿರಿ ನಿಯಂತ್ರಣಕ್ಕೆ ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ. ಇದಕ್ಕಾಗಿ ಪ್ರತ್ಯೇಕ ಘಟಕ ಸ್ಥಾಪಿಸಿದ್ದೇವೆ. ಯಾವುದೇ ಧರ್ಮದವರು ಇಂಥ ಪ್ರಕರಣಗಳಲ್ಲಿ ಭಾಗಿಯಾದರೂ ಅವರ ಮೇಲೆ ಕ್ರಮ ಆಗಲಿದೆ” ಎಂದರು.

ಖುಷ್ಬೂ ಹೇಳಿಕೆಯನ್ನೇ ಬಿಜೆಪಿಯವರು ನಂಬುತ್ತಿಲ್ಲ

ಉಡುಪಿ ಕಾಲೇಜು ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಬಿಜೆಪಿ ಆಗ್ರಹಿಸಿರುವ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ, “ಬಿಜೆಪಿಯವರು ವಿರೋಧ ಪಕ್ಷದಲ್ಲಿದ್ದಾರೆ. ಅವರು ಒತ್ತಾಯಿಸಲೇಬೇಕು. ಅವರು ಹೇಳಿದರು ಎಂದು ನಾವು ಅದನ್ನು ಕೇಳಬೇಕು ಎನ್ನುವ ರೂಲ್‌ ಇಲ್ಲ” ಎಂದು ಹೇಳಿದರು.

ಬಿಜೆಪಿಯವರು ಬೇಕಾದರೆ ರಚನಾತ್ಮಕವಾಗಿ ಸಲಹೆ ಕೊಟ್ಟರೆ ಪರವಾಗಿಲ್ಲ. ಅದು ಬಿಟ್ಟು ಪ್ರತಿಭಟನೆ ಮಾಡುತ್ತಾರೆ ಎಂದರೆ ಮಾಡಲಿ. ಉಡುಪಿ ಪ್ರಕರಣ ಬಗ್ಗೆ ಅವರ ಪಕ್ಷದ ಖುಷ್ಬೂ ಅವರೇ ಹೇಳಿಕೆ ನೀಡಿದ್ದಾರೆ. ಇದರ ಮೇಲೂ ಅವರು ನಂಬಲಿಲ್ಲವೆಂದರೆ ಹೇಗೆ ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...