ಉಡುಪಿ | 96 ವರ್ಷ ಹಳೆ ಶಾಲೆಗೆ ಹೊಸ ಕಳೆ ನೀಡಲು ಒಂದಾದ ಊರಿನ ಜನ

Date:

ಸರಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಾತಿಗೊಳಿಸಲು ಪೋಷಕರು ಹಿಂದೇಟು ಹಾಕುತ್ತಿರುವ ಹೊತ್ತಲ್ಲೇ, ಉಡುಪಿ ಜಿಲ್ಲೆಯ ತೀರಾ ಗ್ರಾಮೀಣ ಪ್ರದೇಶ ಕುಂದಬಾರಂದಾಡಿ ಸರಕಾರಿ ಶಾಲೆ ಉಳಿಸಿ, ಬೆಳೆಸಲು ದಾನಿಗಳ ಸಹಾಯ ಹಸ್ತ ದೊರೆತಿದೆ.

ಸ್ಥಳೀಯ ಪ್ರಮುಖರಾದ ಹೊಳಗೆ ಸಿಂಗಾರಿ ಶಿವರಾಮ್ ಶೆಟ್ಟಿ ಕುಟುಂಬಸ್ಥರನ್ನು ಸಂಪರ್ಕಿಸಿ ಶಾಲೆಯನ್ನು ಉಳಿಸುವ ನಮ್ಮ ಕನಸುಗಳಿಗೆ ಜತೆಯಾಗುವಂತೆ ಒಕ್ಕೊರಲ ಮನವಿ ಮಾಡಿದ್ದರು. ಸ್ಥಳೀಯ ವಿದ್ಯಾಭಿಮಾನಿಗಳ ಆಸೆಗಳಿಗೆ ಪ್ರೋತ್ಸಾಹದ ನೀರೇರೆದ ಈ ಕುಟುಂಬದ ಅಳಿಯ, ರಾಜ್ಯ ಹಾಗೂ ಕೇಂದ್ರ ಸರಕಾರದ ಹಿರಿಯ ಅಧಿಕಾರಿಯಾಗಿ ನಿವೃತ್ತರಾದ ಬಿ.ಎನ್.ಶೆಟ್ಟಿಯವರು, ಕುಟುಂಬ ಸದಸ್ಯರನ್ನು ಒಟ್ಟು ಮಾಡಿ, ಶಾಲೆಯ ಅಭಿವೃದ್ಧಿಗೆ ಊರುಗೋಲಾಗುವ ತೀರ್ಮಾನ ಪ್ರಕಟಿಸಿದರು.

ಶಾಲೆಯ ಅಭಿವೃದ್ಧಿ ಯೋಜನೆ ರೂಪಿಸಿ, ಒಟ್ಟು ವೆಚ್ಚದ ಮೂರನೇ ಒಂದು ಪಾಲನ್ನು ಹೊಳಗೆ ಸಿಂಗಾರಿ ಶಿವರಾಮ್ ಶೆಟ್ಟಿ ಕುಟುಂಬದಿಂದ ನೀಡಿದರು. ಸರಕಾರದ ನಿಯಮಾನುಸಾರದಂತೆ ಒಟ್ಟು ವೆಚ್ಚದ ಮೂರನೇ ಒಂದು ಪಾಲನ್ನು ನೀಡಿದ್ದ ಕುಟುಂಬದ ಹಿರಿಯರಾದ ಹೊಳ್ಳಗೆ ಸಿಂಗಾರಿ ಶಿವರಾಮ್ ಶೆಟ್ಟಿ ಹೆಸರನ್ನು ಶಾಲೆಗೆ ಮರು ನಾಮಕರಣ ಮಾಡಲು ತೀರ್ಮಾನಿಸಿ ಸರಕಾರಕ್ಕೆ ಮನವಿಯನ್ನು ಸಲ್ಲಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಾನಿಗಳು ಹಾಗೂ ಪ್ರಾಕ್ತನ ವಿದ್ಯಾರ್ಥಿಗಳ ನೆರವಿನಿಂದ ಶಾಲೆಯ ಅಭ್ಯುದಯಕ್ಕೆ ಕಾರ್ಯ ಯೋಜನೆಗಳು ವ್ಯವಸ್ಥಿತವಾಗಿ ನಡೆಯುತ್ತಿದೆ. ಸರಕಾರದಿಂದ ಅನುಮತಿಯೂ ದೊರಕಿ, ಇದೀಗ ಶಾಲೆ ಹೊತ್ಮಗೆ ಸಿಂಗಾರಿ ಶಿವರಾಮ್ ಶೆಟ್ಟಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂದಬಾರಂದಾಡಿ ಎನ್ನುವ ಹೆಸರಿನೊಂದಿಗೆ ಪುನ‌ರ್ ನಾಮಕರಣಗೊಂಡು ಹೊಸ ಹುರುಪಿನೊಂದಿಗೆ ಶಿಕ್ಷಣ ಯಜ್ಞ ಆರಂಭಿಸಿದೆ.

ಸ್ಥಳೀಯ ಪೋಷಕರ ಬೇಡಿಕೆಗೆ ಪೂರಕವಾಗಿ ಈ ವರ್ಷದಿಂದಲೇ 1 ಮತ್ತು 2 ನೇ ತರಗತಿಯನ್ನು ಆಂಗ್ಲ ಮಾಧ್ಯಮದಲ್ಲಿ ಆರಂಭಿಸಲಾಗಿದೆ. ಉತ್ತಮ ವಿದ್ಯಾರ್ಜನೆ ನೀಡಲು ಮೂವರು ಅರೆಕಾಲಿಕ ಶಿಕ್ಷಕರನ್ನು ನೇಮಕಗೊಳಿಸಲಾಗಿದೆ. ತನ್ನೂರಿನ ಮಕ್ಕಳಿಗೆ ಉನ್ನತ ಮಟ್ಟದ ಶಿಕ್ಷಣ ದೊರಕಿಸಲು ಇಡೀ ಊರು ಒಟ್ಟಾಗಿದೆ.

ಪ್ರಸ್ತುತ ಎಲ್‌ಕೆಜಿಯಿಂದ 7ನೇ ತರಗತಿಯವರೆಗೆ ಶಾಲೆಯಲ್ಲಿ ವಿದ್ಯಾಭ್ಯಾಸಕ್ಕೆ ಅವಕಾಶ ಇದೆ. ಮೂವರು ಸರಕಾರಿ ಶಿಕ್ಷಕರಿದ್ದು, ಮೂವರು ಗೌರವ ಶಿಕ್ಷಕರು ಇದ್ದಾರೆ. ಆಟದ ಮೈದಾನ, ಕ್ರೀಡಾ ತರಬೇತಿ, ಯೋಗ ತರಬೇತಿ, ಸ್ಮಾರ್ಟ್ ಕ್ಲಾಸ್, ಕಂಪ್ಯೂಟರ್ ಕ್ಲಾಸ್, ಕೌಶಲ್ಯ ತರಬೇತಿಯಂತಹ ಹತ್ತಾರು ಯೋಜನೆಯ ಕನಸುಗಳು ಇಲ್ಲಿದೆ.

1929ರಲ್ಲಿ ಕುಂದಾಪುರ ತಾಲೂಕಿನ ಕುಂದಬಾರಂದಾಡಿಯಲ್ಲಿ ಸ್ಥಾಪಿತವಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 2029ರಲ್ಲಿ ಶತಮಾನ. ಕುಂದಬಾರಂದಾಡಿ ಪರಿಸರದ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಾರ್ಜನೆಯ ಕನಸನ್ನು ನನಸು ಮಾಡಿ, ಅವರ ಭವಿಷ್ಯದ ಜೀವನಕ್ಕೆ ಭದ್ರ ನೆಲೆ ಒದಗಿಸಿದ ಈ ಶಾಲೆ ಇತ್ತೀಚಿನ ವರ್ಷಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿದೆ ಎನ್ನುವ ಕಾರಣಕ್ಕಾಗಿ ಗಮನ ಸೆಳೆದಿತ್ತು. ಶತಮಾನೋತ್ಸವದ ಹೊಸ್ತಿಲಲ್ಲಿ ನಿಂತಿರುವ ನಮ್ಮೂರು ಶಾಲೆ ಯಾವುದೇ ಕಾರಣಕ್ಕೂ ಕಳೆ ಕುಂದಬಾರದು ಹಾಗೂ ಶತಮಾನದ ಇತಿಹಾಸವುಳ್ಳ ಈ ವಿದ್ಯಾ ದೇಗುಲ ಮುಚ್ಚ ಬಾರದು ಎನ್ನುವ ನಿಶ್ಚಯ ಮಾಡಿದ್ದ ಊರಿನವರು ಹಾಗೂ ಹಳೆ ವಿದ್ಯಾರ್ಥಿಗಳು ಈ ಶಾಲೆಯ ಉಳಿಯುವಿಕೆಗಾಗಿ ಕಾರ್ಯಯೋಜನೆ ರೂಪಿಸಿದ್ದರು.

100 ಸಂವತ್ಸರಗಳು ಪೂರ್ಣಗೊಳ್ಳುವಾಗ ಜಿಲ್ಲೆಗೆ ಮಾದರಿ ಸರಕಾರಿ ಶಾಲೆಯನ್ನಾಗಿಸುವ ಕನಸುಗಳೊಂದಿಗೆ, ದಾನಿಗಳು, ಹಳೆ ವಿದ್ಯಾರ್ಥಿಗಳು ಹಾಗೂ ಶಿಕ್ಷಣಾಭಿಮಾನಿಗಳು ಒಟ್ಟಾಗಿ ಅಭಿವೃದ್ಧಿಯ ಯೋಜನೆಗಳ ಗುರಿಯನ್ನು ಇರಿಸಿಕೊಂಡಿದೆ. ಇದಕ್ಕೆ ಶಿಕ್ಷಕ ರಕ್ಷಕ ಸಂಘ, ಸ್ಥಳೀಯ ಗೆಳೆಯರ ತಂಡಗಳು, ಹಕ್ಲಾಡಿ ಲಯನ್ಸ್ ಕ್ಲಬ್ ಸಾಥ್ ನೀಡುತ್ತಿದೆ.

ಈ ಬಗ್ಗೆ ಮಾತನಾಡಿದ ಶಾಲೆಯ ಪ್ರಧಾನ ಪೋಷಕರಾದ ಶೋಭಾ ಬಿ.ಎನ್. ಶೆಟ್ಟಿ, ಈ ಶಾಲೆಯನ್ನು ಉಳಿಸಲು ಸ್ಥಳೀಯರು ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಹೀಗಾಗಿ ಸಿಂಗಾರಿ ಶಿವರಾಮ್ ಶೆಟ್ಟಿಯವರ ಕುಟುಂಬಸ್ಥರ ಸಹಕಾರವನ್ನು ಬಯಸಿದ್ದರು. ವಿದ್ಯಾ ದೇಗುಲವೊಂದರ ಉಳಿಯುವಿಕೆಗಾಗಿ ನಮ್ಮ ಕುಟುಂಬದಿಂದ ಆಗುವ ಸಹಕಾರ ನೀಡಲು ನಾವು ಬದ್ಧರಿದ್ದೇವೆ ಎಂದು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಪ್ರಭಾರ ಮುಖ್ಯ ಶಿಕ್ಷಕ ಶಿವರಾಜ್ ಭಂಡಾರಿ ಎನ್, ಈ ಭಾಗದ ಸರಕಾರಿ ಶಾಲೆಯಲ್ಲಿ ಉಳಿಸಲು ಸ್ಥಳೀಯರು, ದಾನಿಗಳು, ಹಳೆ ವಿದ್ಯಾರ್ಥಿಗಳು, ಪೋಷಕರು ಸಹಕಾರ ನೀಡುತ್ತಿದ್ದಾರೆ. ಶಿಕ್ಷಕರ ತಂಡ ಉತ್ತಮ ಗುಣಮಟ್ಟದ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡುತ್ತಿದ್ದೇವೆ ಎಂದು ಹೇಳಿದ್ದಾರೆ.

WhatsApp Image 2023 08 22 at 3.23.15 PM
ಶಾರೂಕ್ ತೀರ್ಥಹಳ್ಳಿ
+ posts

ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಶಾರೂಕ್ ತೀರ್ಥಹಳ್ಳಿ
ಶಾರೂಕ್ ತೀರ್ಥಹಳ್ಳಿ
ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...