ಬೀದರ್‌ | ಗ್ರಾಮ ಪಂಚಾಯತಿಗಳಲ್ಲಿ ಅನಧಿಕೃತವಾಗಿ ಡಿಜಿಟಲ್ ಖಾತೆಗಳು ನೀಡದಂತೆ ಸೂಚಿಸಲಾಗಿದೆ : ಸಿಇಓ ಡಾ.ಗಿರೀಶ್ ಬದೋಲೆ

Date:

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ನಿವೇಶನಗಳ ಡಿಜಿಟಲ್ ಖಾತೆಗಳನ್ನು ಮಾಡಿಸಿಕೊಳ್ಳುವ ಮುನ್ನ ಎಲ್ಲ ಸೂಕ್ತ ದಾಖಲೆಗಳನ್ನು ಪರಿಶೀಲಿಸಿ, ನಿಯಮಾನುಸಾರ ಖಾತೆಗಳನ್ನು ಮಾಡಿಕೊಳ್ಳಬೇಕು. ಕಾನೂನು ಬಾಹಿರ, ಅನಧಿಕೃತ ಖಾತೆಗಳ ವಿಷಯದಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ ಮನವಿ ಮಾಡಿದ್ದಾರೆ.

ಸಾಮಾಜಿಕ ಜಾಲತಾಣ ಹಾಗೂ ಪತ್ರಿಕೆಗಳಲ್ಲಿ ಇತ್ತಿಚೆಗೆ ಜಿ.ಪಂ ಸಿಇಓ ಅವರ ವಿರುದ್ಧ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಮಾಡಿರುವ ಆರೋಪ ಕುರಿತು ಪ್ರಕಟವಾಗಿರುವ ಸುದ್ದಿಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ್ದಾರೆ.

ಬೀದರ ತಾಲೂಕಿನ ಗ್ರಾಮ ಪಂಚಾಯತಿಗಳಲ್ಲಿ ವಸತಿ ನಿರ್ಮಾಣಕ್ಕಾಗಿ, ಕೃಷಿ ಭೂಮಿಯನ್ನು ಸಕ್ಷಮ ಪ್ರಾಧಿಕಾರದಿಂದ ಭೂ ಪರಿವರ್ತನೆ ಆಗದೇ ಇರುವ ಹಾಗೂ ಸಕ್ಷಮ ಪ್ರಾಧಿಕಾರದಿಂದ (ವಿನ್ಯಾಸ ಬಡಾವಣೆ) ಲೇಔಟ್ ಅನುಮೋದನೆ ಪಡೆಯದೆ, ಕೃಷಿ ಭೂಮಿಯಲ್ಲಿ, ಇನಾಮಿ/ ಸರ್ಕಾರಿ, ಅರಣ್ಯ ಇಲಾಖೆ ಜಮೀನಿನಲ್ಲಿ ನಿವೇಶನಗಳಿಗೆ ಅನಧಿಕೃತವಾಗಿ 11-ಬಿ. 9, 11-ಎ ಡಿಜಿಟಲ್ ಖಾತೆಗಳನ್ನು ನೀಡಲಾಗುತ್ತಿದೆ ಎಂದು ಸಾರ್ವಜನಿಕರು ಕೆಲವು ಗ್ರಾಮ ಪಂಚಾಯತ ಪಿಡಿಒಗಳ ವಿರುದ್ಧ ಜಿಲ್ಲಾ ಪಂಚಾಯತಿಗೆ ಪದೇ ಪದೇ ದೂರುಗಳು ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದರಿ ದೂರುಗಳನ್ನು ನಿಯಮಾನುಸಾರ ಪರಿಶೀಲಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕ್ಕೆ ಆದೇಶಿಸಲಾಗಿದೆ. ಈ ಕ್ರಮ ಯಾವುದೇ ಒಬ್ಬ ಅಧಿಕಾರಿಯ ವಿರುದ್ಧವಲ್ಲ, ಸಾರ್ವಜನಿಕರ ಹಿತಕ್ಕಾಗಿ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕುಡಿಯುವ ನೀರಿಗಾಗಿ ಪರದಾಡುತ್ತಿರುವ ಭೀಮರಾವ್ ನಾಯ್ಕ ತಾಂಡಾ ನಿವಾಸಿಗಳು

“ದೂರುಗಳಿಗೆ ಸಂಬಂಧಿಸಿದಂತೆ ಫೆ.21 ರಂದು ಜಿಲ್ಲೆಯ ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಸಭೆಯನ್ನು ಕರೆದು ಅನಧಿಕೃತವಾಗಿ ಡಿಜಿಟಲ್ ಖಾತೆಗಳು ನೀಡದಂತೆ ಹಾಗೂ ಸರ್ಕಾರಕ್ಕೆ ಆರ್ಥಿಕ ನಷ್ಟವಾಗುವ ಯಾವುದೇ ಕೆಲಸಗಳನ್ನು ಮಾಡದಂತೆ ಸೂಚನೆಗಳನ್ನು ನೀಡಲಾಗಿದೆ” ಎಂದು ಜಿಲ್ಲಾ ಪಂಚಾಯತ ಸಿಇಒ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...