ತುಮಕೂರು | ವೃದ್ಧಾಪ್ಯ ವೇತನ ಮಾಡಿಸಿಕೊಡುವುದಾಗಿ ನಂಬಿಸಿ ವಂಚನೆ ಆರೋಪ: ಗ್ರಾಮ ಸಹಾಯಕನ ವಜಾಕ್ಕೆ ಒತ್ತಾಯ

Date:

ವೃದ್ಧಾಪ್ಯ ವೇತನ ಮಾಡಿಸಿಕೊಡುವುದಾಗಿ ನಂಬಿಸಿ ವಯೋವೃದ್ಧೆಯ ಬಳಿ ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ನಾಡಕಚೇರಿಯ ಗ್ರಾಮ ಸಹಾಯಕ 200 ರೂಪಾಯಿ ಲಂಚ ಪಡೆದಿರುವ ಘಟನೆ ವರದಿಯಾಗಿದೆ.

ತುಮಕೂರಿನ ತುರುವೇಕೆರೆ ತಾಲೂಕಿನ ತುಯಲಹಳ್ಳಿ ಗ್ರಾಮದ ದಲಿತ ಸಮುದಾಯದ 70 ವರ್ಷದ ವಯೋವೃದ್ಧೆ ನರಸಮ್ಮ ಎಂಬವರಿಂದ ಗ್ರಾಮ ಸಹಾಯಕ ಆರ್.ರಂಗಸ್ವಾಮಿ ಎಂಬಾತ ಲಂಚ ಪಡೆದಿದ್ದಾನೆ ಎಂದು ಆರೋಪಿಸಲಾಗಿದೆ.

ಅಲ್ಲದೆ, ಗ್ರಾಮ ಸಹಾಯಕ ಆರ್. ರಂಗಸ್ವಾಮಿ ವಿರುದ್ಧ ವಿದ್ಯಾರ್ಥಿಗಳಿಂದ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರಗಳನ್ನು ಮಾಡಿಸಿಕೊಡುವುದಾಗಿ ಸಾವಿರಾರು ರೂಪಾಯಿ ಲಂಚ ಪಡೆದಿರುವ ಆರೋಪವೂ ಕೇಳಿಬಂದಿದೆ.  

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಉಡುಪಿ | ಬೀದಿನಾಯಿಗೆ ಅನ್ನ ಹಾಕಿದ್ದಕ್ಕೆ ದಲಿತ ಮಹಿಳೆ ಮೇಲೆ ಹಲ್ಲೆ; ದಸಂಸ ಖಂಡನೆ

ಮೂರು ವರ್ಷದ ಹಿಂದೆ ತುಯಲಹಳ್ಳಿ ಗ್ರಾಮದ ದಲಿತ ಸಮುದಾಯದ ನಿವಾಸಿ ನರಸಮ್ಮ ಕೋಂ ಲೇಟ್ ರಂಗಯ್ಯ ಎಂಬುವವರಿಗೆ ವೃದ್ಧಾಪ್ಯ ವೇತನ ಮಾಡಿಸಿಕೊಡುವುದಾಗಿ ನಂಬಿಸಿ ಮಾಯಸಂದ್ರ ನಾಡಕಚೇರಿಯ ತುಯಲಹಳ್ಳಿ ವೃತ್ತದಲ್ಲಿ ಕರ್ತವ್ಯ ನಿರ್ವಹಿಸುವ ಗ್ರಾಮ ಸಹಾಯಕ ಆರ್.ರಂಗಸ್ವಾಮಿ ಎಂಬಾತ 1500 ರೂ.ಗೆ ಬೇಡಿಕೆ ಇಟ್ಟು ಮುಂಗಡವಾಗಿ 200 ರೂ.ಗೆ ಪಡೆದಿದ್ದಾನೆ. ಆದರೆ, ಈವರೆಗೆ ವೃದ್ಧಾಪ್ಯದ ಪಿಂಚಣಿ ಬರುವಂತೆ ಮಾಡಿಸಿಲ್ಲ ಎಂದು ಸಂತ್ರಸ್ಥೆ ಆರೋಪಿಸಿದ್ದಾರೆ.

ಈ ಬಗ್ಗೆ ಆರ್.ರಂಗಸ್ವಾಮಿಯನ್ನು ವಿಚಾರಿಸಿದರೆ ದಾಖಲಾತಿಗಳನ್ನು ಯಾವುದೋ ಜಾಗದಲ್ಲಿಟ್ಟು ಮರೆತಿದ್ದೇನೆ. ಬೇರೆ ಕೆಲಸ ಇತ್ತು. ಕಚೇರಿ ಹೋದಾಗ ನೆನಪಾಗಿಲ್ಲ, ಈಗ, ನಾಳೆ ಮಾಡಿಸಿಕೊಡುತ್ತೇನೆ ಎಂಬಿತ್ಯಾದಿ ಆರಿಕೆಯ ಉತ್ತರಗಳನ್ನು ನೀಡುತ್ತಾ ಬಂದಿದ್ದಾನೆ ಎಂದು ವೃದ್ಧೆ ಆರೋಪಿಸಿದ್ದಾರೆ.

ಇದನ್ನು ಓದಿದ್ದೀರಾ?  ಜಾತಿ ದೌರ್ಜನ್ಯ | ದಲಿತ ಮಹಿಳೆಯರಿಗೆ ತೆಂಗಿನ ಚಿಪ್ಪಿನಲ್ಲಿ ಚಹಾ ಕೊಟ್ಟ ಸವರ್ಣೀಯರು

“ನನಗೆ ಈವರೆಗೆ ಹಣ ಬಂದಿಲ್ಲ. ಒಪ್ಪತ್ತಿನ ಊಟಕ್ಕೆ ಕೂಲಿ ಮಾಡಿಕೊಂಡು ತಿನ್ನುವಂತಾಗಿದೆ. ನನ್ನ ಕೂಲಿ ಮಾಡಲು ಶಕ್ತಿ ಇಲ್ಲದಿದ್ದರೂ ಅನಿವಾರ್ಯವಾಗಿದ್ದು, ಪಿಂಚಣಿ ಹಣ ಬಂದರೆ ಜೀವನ ಹೇಗೋ ಸಾಗುತ್ತದೆ ಎಂದು ನಂಬಿ ಹಣ ನೀಡಿದ್ದೆ. ವೃದ್ಧಾಪ್ಯ ವೇತನದ ಅಧಿಕೃತ ಪತ್ರವನ್ನು ಕೈಗೆ ಕೊಟ್ಟ ನಂತರ ಬಾಕಿ ಹಣ ಕೊಡುವುದಾಗಿ ಹೇಳಿದರೂ ನನಗೆ ಮಾಡಿಸಿಲ್ಲ” ಎಂದು ದೂರಿದ್ದಾರೆ.

“ತುಯಲಹಳ್ಳಿ ವೃತ್ತದ ವ್ಯಾಪ್ತಿಯ ಅನೇಕರಿಗೆ ವೃದ್ಧಾಪ್ಯ ವೇತನ, ವಿಧವಾ ವೇತನಗಳನ್ನು ಮಾಡಿಸಿಕೊಡಲು ರಂಗಸ್ವಾಮಿ ಹಣ ಪಡೆದಿದ್ದು, ಕೆಲವರಿಗೆ ಮಾಡಿಸಿಕೊಟ್ಟಿದ್ದು, ಬಹುತೇಕರಿಗೆ ಸತಾಯಿಸುತ್ತಿದ್ದಾನೆ. ನನಗೆ ನ್ಯಾಯ ಕೊಡಿಸಿ, ಹಣ ಬರುವಂತೆ ಮಾಡಿಸಿಕೊಡಿ” ಎಂದು ಸಂತ್ರಸ್ಥೆ ನರಸಮ್ಮ ಅಳಲು ತೋಡಿಕೊಂಡಿದ್ದಾರೆ.

ಪ್ರಕರಣ ಕುರಿತು ಅನೇಕರಿಗೆ ಲಂಚ ಪಡೆದುಕೊಂಡು ವಂಚನೆ ಎಸಗುತ್ತಿರುವ ಕಂದಾಯ ಇಲಾಖೆಯ ನೌಕರ ಆರೋಪಿ ರಂಗಸ್ವಾಮಿ ವಿರುದ್ಧ ಇಲಾಖೆಯ ಅಧಿಕಾರಿಗಳು, ತಹಸೀಲ್ದಾರರು ಕ್ರಮ ಜರುಗಿಸಿ, ನೌಕರಿಯಿಂದ ವಜಾಗೊಳಿಸಬೇಕು, ನೊಂದವರಿಗೆ ನ್ಯಾಯ ಕೊಡಿಸಬೇಕೆಂದು ತುಮಕೂರು ಜಿಲ್ಲಾ ಘಟಕದ ದಲಿತ ಮುಖಂಡರು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...