ರಾಯಚೂರು | ಒಂದೇ ರಸ್ತೆ ಅಭಿವೃದ್ಧಿಗೆ ಮೂರು ಬಾರಿ ಅನುದಾನ; ಸಾರ್ವಜನಿಕರ ಆರೋಪ

Date:

ದೇವದುರ್ಗ ತಾಲೂಕಿನ ಎನ್ ಗಣೇಕಲ್ ಗ್ರಾಮದಿಂದ ನೀಲಗಲ್ ಗ್ರಾಮದವರೆಗೆ ಕೈಗೊಂಡಿರುವ ಒಂದೇ ರಸ್ತೆ ಕಾಮಗಾರಿಗೆ ಎರಡು ಬಾರಿ ಭೂಮಿಪೂಜೆ ನೆರೆವೇರಿಸಿ ಕಾಮಗಾರಿ ಪ್ರಾರಂಭಿಸಿದ್ದೇವೆಂದು ಹಣ ಲೂಟಿ ಹೊಡೆಯುವ ಹುನ್ನಾರ ನಡೆದಿದೆ ಎಂದು ಸಾರ್ವಜನಿಕರು ಆರೋಪಿಸಿದರು.

“2017-18ನೇ ಸಾಲಿನಲ್ಲಿ ರಸ್ತೆ ಕಾಮಗಾರಿಗೆ ಒಟ್ಟು ₹70 ಲಕ್ಷ ಬಿಡುಗಡೆಯಾಗಿತ್ತು. ಆದರೆ ಕಾಮಗಾರಿ ಪೂರ್ಣಗೊಳಿಸದೆ ಕಳಪೆ ನಡೆಸಿ ಅರ್ಧಕ್ಕೆ ಬಿಟ್ಟಿದ್ದರು. ಬಳಿಕ ಅದೇ ರಸ್ತೆ ಕಾಮಗಾರಿಗೆ ಎರಡನೇ ಬಾರಿಗೆ ₹3.10 ಕೋಟಿ ಅನುದಾನ ಲೋಕೋಪಯೋಗಿ ಇಲಾಖೆಯಿಂದ ಬಿಡುಗಡೆಯಾಗಿದೆ. ಹೀಗೆ ಒಂದೇ ರಸ್ತೆಗೆ ಎರಡು ಬಾರಿ ಕೋಟ್ಯಂತರ ರೂಪಾಯಿ ಹಣ ಬಿಡುಗಡೆಯಾದರೂ ಗುಣಮಟ್ಟದ ರಸ್ತೆ ನಿರ್ಮಿಸದೇ ಸರ್ಕಾರದ ಹಣ ದುರ್ಬಳಕೆ ಮಾಡಿಕೊಂಡು ಕಳಪೆ ಕಾಮಗಾರಿ ಕೈಗೊಂಡು ಹಣ ಲೂಟಿ ಹೊಡೆದಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು” ಎಂದು ಸಾರ್ವಜನಿಕರು ಒತ್ತಾಯಿಸಿದರು.

“ಇದೀಗ 2024-25ನೇ ಸಾಲಿನಲ್ಲಿ ಮತ್ತೆ ಎನ್ ಗಣೇಕಲ್‌ನಿಂದ ನೀಲಗಲ್ ಗ್ರಾಮದವರೆಗಿನ ರಸ್ತೆ ಕಾಮಗಾರಿಗೆ ₹1 ಕೋಟಿ ಮಂಜೂರಾಗಿದೆ. ಒಂದೇ ರಸ್ತೆ ಕಾಮಗಾರಿಗೆ ಮೂರು ಬಾರಿ ಹಣ ಮಂಜೂರು ಮಾಡುತ್ತಿರುವುದು ಜನಪ್ರತಿನಿಧಿಗಳ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿಯಂತಿದೆ. ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಶಾಮೀಲಾಗಿ ರಸ್ತೆ ಹೆಸರಿನಲ್ಲಿ ಸರ್ಕಾರದ ಬೊಕ್ಕಸವನ್ನು ಲೂಟಿ ಮಾಡುತ್ತಿದ್ದಾರೆ” ಎಂದು ಗ್ರಾಮಸ್ಥರು ಹಿಡಿಶಾಪ ಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಥಳೀಯ ನಿವಾಸಿ ಶಾಂತಕುಮಾರ್ ಈದಿನ.ಕಾಮ್ ಜೊತೆ ಮಾತನಾಡಿ‌, “ರಸ್ತೆ ಕಾಮಗಾರಿಗೆ ಒಮ್ಮೆ ಮಂಜೂರಾದ ಹಣ ದುರ್ಬಳಕೆ ಮಾಡಿಕೊಂಡು ಗುಣಮಟ್ಟದ ರಸ್ತೆ ನಿರ್ಮಿಸದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಅದೇ ರಸ್ತೆ ಅಭಿವೃದ್ಧಿಗೆ ಮತ್ತೆ ಹಣ ಮಂಜೂರು ಮಾಡಿರುವುದನ್ನು ರದ್ದುಪಡಿಸಬೇಕು. ಈ ಅವ್ಯವಹಾರದಲ್ಲಿ ಶಾಮೀಲಾದ ಅಧಿಕಾರಿ, ಗುತ್ತಿಗೆದಾರರ ವಿರುದ್ಧ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭರ್ಜಿಯ ಕೊನೆಗೆ ಪ್ರೀತಿಯ ಮುಳ್ಳು ಚುಚ್ಚಿದ ತಾಯಂದಿರು – ಆಲಿಸಲಿ ‘ಮಕ್ಕಳು’

“ಗಣೇಕಲ್‌-ನೀಲಗಲ್ ಮಧ್ಯದ ರಸ್ತೆ ಅಭಿವೃದ್ಧಿಗೆ ಮಂಜೂರಾದ ₹1 ಕೋಟಿಯ ಕಾಮಗಾರಿ ಟೆಂಡರ್ ಈಗಾಗಲೇ ಮುಗಿದಿದೆ. ಇದನ್ನು ರದ್ದುಪಡಿಸಬೇಕು. ಇದೇ ಅನುದಾನವನ್ನು ಎನ್ ಗಣೇಕಲ್ ಗ್ರಾಮದ ಮಲದಕಲ್ ಗ್ರಾಮದ ಸಿಸಿ ರಸ್ತೆ ಮತ್ತು ಒಳಚರಂಡಿ ನಿರ್ಮಿಸಲು ಬಳಕೆ ಮಾಡಬೇಕು. ಈ ಹಿಂದೆ ರಸ್ತೆ ಹೆಸರಿನಲ್ಲಿ ಸರ್ಕಾರದ ಹಣ ದುರ್ಬಳಕೆ ಮಾಡಿಕೊಂಡ ಅಧಿಕಾರಿ ಹಾಗೂ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಂಡು ಅನುಮತಿ ರದ್ದು ಮಾಡಬೇಕು” ಎಂದು ಒತ್ತಾಯಿಸಿದರು.

Rafi
ರಫಿ ಗುರುಗುಂಟ
+ posts

ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ರಫಿ ಗುರುಗುಂಟ
ರಫಿ ಗುರುಗುಂಟ
ಗುಲಬರ್ಗಾ ವಿವಿಯಿಂದ ಪತ್ರಿಕೋದ್ಯಮದಲ್ಲಿ ಎಂ ಎ ಪದವಿ, ಕಲ್ಯಾಣ ಕರ್ನಾಟಕ ವಲಯ ಕೋರ್ಡಿನೇಟರ್

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...