ಕಲಬುರಗಿ | ಬಗರ್‌ ಹುಕುಂ ಜಮೀನಿನಲ್ಲಿ ಸ್ಮಶಾನ; ಸ್ಥಳಾಂತರಕ್ಕೆ ಆಗ್ರಹಿಸಿ ಪ್ರತಿಭಟನೆ

Date:

ಕಲಬುರಗಿ ತಾಲೂಕಿನ ಇಟಗಾ (ಕೆ) ಗ್ರಾಮದ ವ್ಯಾಪ್ತಿಯಲ್ಲಿ ಬರುವ ತಾಂಡಾದ ರೈತರು ಸುಮಾರು 70 ವರ್ಷಗಳಿಂದ ಸಾಗುವಳಿ ಮಾಡುವ ಬಗರ್ ಹುಕುಂ ಜಮೀನಿನಲ್ಲಿ ಸ್ಮಶಾನ ಭೂಮಿ ಮಾಡಿರುವುದನ್ನು ಖಂಡಿಸಿ ಶನಿವಾರ ಜಿಲ್ಲಾಧಿಕಾರಿ ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಿದರು.

ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘಟನೆ (ಎಐಕೆಕೆಎಂಎಸ್) ನೆತೃತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು ಜಿಲ್ಲಾಧಿಕಾರಿಗಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿ ನ್ಯಾಯ ಕೊಡಿಸುವಂತೆ ಮನವಿ ಮಾಡಿದರು.

ʼಹಲವು ವರ್ಷಗಳಿಂದ ಸಾಗುವಳಿ ಮಾಡುತ್ತಾ ಬಂದಿರುವ ರೈತರು ಇದೇ ಭೂಮಿ ನಂಬಿ ಜೀವನ ಸಾಗಿಸುತ್ತಿದ್ದೇವೆ.
ಆದರೆ ಅಧಿಕಾರಿಗಳು ಯಾವುದೇ ಮಾಹಿತಿ ನೀಡದೆ ಏಕಾಏಕಿ ಜಮೀನನಲ್ಲಿ 4 ಎಕರೆ ಸ್ಮಶಾನಕ್ಕಾಗಿ ಗೊತ್ತು ಮಾಡಿದ್ದಾರೆ. ಇದರಿಂದ ನಮಗೆ ಆತಂಕ ಎದುರಾಗಿದೆʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಜಮೀನಿನಲ್ಲಿ ಸಾಗುವಳಿ ನಡೆಯುತ್ತಿರುವುದರಿಂದ ಕೃಷಿ ಯೋಗ್ಯ ಭೂಮಿಯನ್ನು ಹೊರತುಪಡಿಸಿ ಅನುಪಯುಕ್ತ ಭೂಮಿಯಲ್ಲಿ ಸ್ಮಶಾನಕ್ಕೆ ಜಮೀನು ಗುರುತಿಸಿ, ಸದರಿ ಭೂಮಿ ರೈತರಿಗೆ ಸಾಗುವಳಿಗೆ ಅವಕಾಶ ನೀಡಬೇಕುʼ ಎಂದು ಪ್ರತಿಭಟನಾಕಾರರು ಅಗ್ರಹಿಸಿದರು.

ʼಬಗರ್ ಹುಕುಂ ಭೂಮಿಗಾಗಿ ಗ್ರಾಮಸ್ಥರು ಸಲ್ಲಿಸಿರುವ ಫಾರ್ಮ್ ನಂ.57 ಅರ್ಜಿಯನ್ನು ಕೂಡಲೇ ಪರಿಶೀಲಿಸಿ, ಸೂಕ್ತ ಸಮೀಕ್ಷೆ ನಡೆಸಿ 70 ವರ್ಷಗಳಿಂದಲೂ ಸಾಗುವಳಿ ಮಾಡುತ್ತಿರುವ ರೈತರಿಗೆ ಹಕ್ಕು ಪತ್ರ ನೀಡಬೇಕುʼ ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಜನಾಂದೋಲನ ಸಭೆ | ನನ್ನ ನಾಯಕತ್ವಕ್ಕೆ 135 ಸೀಟು, ಎಚ್‌ಡಿಕೆ ನಾಯಕತ್ವಕ್ಕೆ 19 ಸೀಟು: ಡಿಕೆಶಿ ತಿರುಗೇಟು

ಪ್ರತಿಭಟನೆಯಲ್ಲಿ ಎಐಕೆಕೆಎಂಎಸ್ ಜಿಲ್ಲಾ ಕಾರ್ಯದರ್ಶಿ ಮಹೇಶ ಎಸ್.ಬಿ, ತಾಲೂಕು ಅಧ್ಯಕ್ಷ ವಿಶ್ವನಾಥ್ ಸಿಂಘೇ, ಸದಸ್ಯರಾದ ಭೀಮಾಶಂಕರ ಆಂದೋಲಾ, ಅಮೃತ್ ಚವ್ಹಾಣ, ಗುಂಡು ಬಾಬು ಚವ್ವಾಣ, ಶಿವರಾಂ ರಾಠೋಡ, ರಾಜು ರಾಠೋಡ, ಶಾಂತಾಬಾಯಿ ರಾಠೋಡ, , ಪಾಂಡು ರಾಠೋಡ, , ರವಿ ರಾಠೋಡ, , ಸಂತೋಷ್ ರಾಠೋಡ, , ಶಿವಕುಮಾರ್ ರಾಠೋಡ ಸೇರಿದಂತೆ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...