ಗೃಹಜ್ಯೋತಿ ಯೋಜನೆ ಈಗ ಗ್ರಹಣಜ್ಯೋತಿಯಾಗಿದೆ: ಬಿ.ಟಿ. ನಾಗಣ್ಣ

Date:

ಕಾಂಗ್ರೆಸ್ ಸರ್ಕಾರದ ಮನೆ ಬಳಕೆಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ ಹಳ್ಳ ಹಿಡಿದಿದೆ. ಗೃಹಜ್ಯೋತಿ ಈಗ ಗ್ರಹಣ ಜ್ಯೋತಿಯಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಟಿ.ನಾಗಣ್ಣ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.

ಬೆಂಗಳೂರಿನ ಆಮ್‌ ಆದ್ಮಿ ಪಕ್ಷದ ಕಚೇರಿಯಲ್ಲಿ ಮಾತನಾಡಿದ ಅವರು, “ಚುನಾವಣೆಗೆ ಮೊದಲು ಉಚಿತ ವಿದ್ಯುತ್ ಕೊಡುವುದಾಗಿ ಭರವಸೆ ನೀಡಿದ್ದ ಕಾಂಗ್ರೆಸ್ ಗೃಹಜ್ಯೋತಿ ಯೋಜನೆಗಾಗಿ ರಾಜ್ಯದ ರೈತರನ್ನು ಸಂಕಷ್ಟಕ್ಕೆ ತಳ್ಳಿದೆ. ರೈತರ ಪಂಪ್‌ಸೆಟ್‌ಗಳಿಗೆ ಈ ಮೊದಲು 7 ಗಂಟೆ ವಿದ್ಯುತ್ ಪೂರೈಕೆ ಮಾಡಲಾಗುತ್ತಿತ್ತು, ಈಗ 2 ಗಂಟೆಗಳು ಕೂಡ ಸರಿಯಾಗಿ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ” ಎಂದು ಹೇಳಿದರು.

“ದೆಹಲಿಯಲ್ಲಿ ನಾವು ಭರವಸೆ ನೀಡಿದಂತೆ 200 ಯೂನಿಟ್ ವಿದ್ಯುತ್ ಉಚಿತವಾಗಿ ಕೊಡಲಾಗುತ್ತಿದೆ. ದೆಹಲಿಯಲ್ಲಿ ವಿದ್ಯುತ್ ಪೂರೈಕೆದಾರರು ಒಂದು ಗಂಟೆ ವಿದ್ಯುತ್ ಕಡಿತ ಮಾಡಿದರೆ ಒಂದು ಗಂಟೆಗೆ 50 ರೂಪಾಯಿ ದಂಡ ಕಟ್ಟಿಕೊಡಬೇಕಾಗುತ್ತದೆ. 2 ಗಂಟೆಗಿಂತ ಹೆಚ್ಚು ಸಮಯ ವಿದ್ಯುತ್ ಕಡಿತ ಮಾಡಿದರೆ ಗಂಟೆಗೆ 100 ರೂಪಾಯಿಯಂತೆ ದಂಡ ಕಟ್ಟಿಕೊಡಬೇಕು. ಅಂತಹ ಕಾನೂನು ರೂಪಿಸಲಾಗಿದೆ. ಅಂತಹ ಕಾನೂನು ಇಲ್ಲಿ ತರಲಿ” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೆಸ್ಕಾಂ ಸೇರಿದಂತೆ ರಾಜ್ಯದ ಎಲ್ಲ ಐದು ವಿದ್ಯುಚ್ಛಕ್ತಿ ಪೂರೈಕೆ ಕಂಪನಿಗಳು ಈಗಾಗಲೇ 63,000 ಕೋಟಿ ಸಾಲದ ಸುಳಿಯಲ್ಲಿ ಸಿಲುಕಿವೆ. ಈ ಸಮಯದಲ್ಲಿ ಮುಖ್ಯಮಂತ್ರಿಗಳು ₹85,000 ಕೋಟಿ ಸಾಲವನ್ನು ಪಡೆಯಲು ಈಗಾಗಲೇ ಆರ್ಥಿಕ ಇಲಾಖೆಗೆ ಸೂಚಿಸಿರುವುದನ್ನು ಗಮನಿಸಿದಾಗ ರಾಜ್ಯವು ಸಂಪೂರ್ಣ ದಿವಾಳಿಯತ್ತ ಸಾಗುತ್ತಿದೆ ಎಂಬುದು ಸ್ಪಷ್ಟವಾಗುತ್ತಿದೆ” ಎಂದರು.

“ರಾಜ್ಯದ ರೈತರಿಗೆ ಪ್ರತಿ ವರ್ಷ ವಿದ್ಯುಚ್ಛಕ್ತಿ ಸಬ್ಸಿಡಿ ರೂಪದಲ್ಲಿ 6,000 ಕೋಟಿ ರೂಪಾಯಿಗಳಷ್ಟು ನೀಡುತ್ತಿರುವ ಸರ್ಕಾರ ಎಲ್ಲ ರೈತರಿಗೂ ಸೋಲಾರ್ ಪಂಪನ್ನು ವಿತರಿಸದೆ ಅನವಶ್ಯಕವಾಗಿ ಸಾವಿರಾರು ಕೋಟಿ ಸಬ್ಸಿಡಿ ಹಣವನ್ನು ಪೋಲು ಮಾಡುತ್ತಿರುವುದು ಸರ್ಕಾರದ ಬೇಜವಾಬ್ದಾರಿಯನ್ನು ತೋರಿಸುತ್ತದೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 1 ಕೆ.ಜಿ 262 ಗ್ರಾಂ ಚಿನ್ನದ ಆಭರಣ ಕದ್ದಿದ್ದ ಸೇಲ್ಸ್‌ ಮ್ಯಾನ್; ಬಂಧನ

ಕುಸುಮ್ ಯೋಜನೆ ಅಸಮರ್ಪಕ ಬಳಕೆ

“ಮಳೆ ಕೊರತೆಯಾಗಿದ್ದರಿಂದ ರೈತರು ಪಂಪ್‌ಸೆಟ್‌ಗಾಗಿ ಹೆಚ್ಚಿನ ವಿದ್ಯುತ್ ಬಳಕೆ ಮಾಡುತ್ತಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಕೇಂದ್ರ ಸರ್ಕಾರದ ಕುಸುಮ್ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ರಾಜ್ಯಕ್ಕೆ ಕೇಂದ್ರದಿಂದ 10,314 ಸೋಲಾರ್ ಪಂಪ್‌ಗಳನ್ನು ನೀಡಲಾಗಿದೆ ಆದರೆ ಕೇವಲ 314 ಸೋಲಾರ್ ಪಂಪ್‌ಗಳನ್ನು ಮಾತ್ರ ರಾಜ್ಯದ ರೈತರಿಗೆ ನೀಡಲಾಗಿದೆ” ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ಸುರೇಶ್ ರಾಥೋಡ್ ಅವರು ಹೇಳಿದರು.

ಮುಂದಿನ 4-5 ವರ್ಷ ರಾಜ್ಯದಲ್ಲಿ ಉಚಿತ ವಿದ್ಯುತ್ ನೀಡುವುದಾಗಿ ಮತ್ತು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡುವುದಿಲ್ಲ ಎಂದು ರಾಜ್ಯ ಸರ್ಕಾರ ಈ ಕೂಡಲೇ ಶ್ವೇತಪತ್ರ ಹೊರಡಿಸಬೇಕು ಅಥವಾ ಅಫಿಡವಿಟ್ ಅನ್ನು ನೀಡಬೇಕು. ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬಿಯಾಗಲು ಏನು ಯೋಜನೆ ರೂಪಿಸಿದ್ದೀರಾ ಎಂದು ತಿಳಿಸುವಂತೆ ಒತ್ತಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...