ವಿದ್ಯುತ್‌ ಬಿಲ್ ಬಾಕಿ ಇದ್ದರು ‘ಗೃಹಜ್ಯೋತಿ’ ಲಾಭ ಪಡೆಯಬಹುದು: ಇಂಧನ ಇಲಾಖೆ

Date:

  • ಬಾಕಿ ಮೊತ್ತ ಮಾವತಿಸಲು ಸೆ. 30ರ ವರೆಗೂ (ಮೂರು ತಿಂಗಳು) ಗಡುವು
  • ಜುಲೈ 25ರ ಒಳಗೆ ನೋಂದಾಯಿಸಿಕೊಂಡರೆ, ಆಗಸ್ಟ್ ಬಿಲ್‌ನಲ್ಲಿ ಪ್ರಯೋಜನ

ಗ್ರಾಹಕರು ವಿದ್ಯುತ್‌ ಬಿಲ್ ಹಿಂಬಾಕಿ ಉಳಿಸಿಕೊಂಡಿದ್ದರೂ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್‌ ಪಡೆಯಲು ಅರ್ಹರಾಗಿದ್ದಾರೆ. ಆದರೆ, ಹಿಂಬಾಕಿ ಮೊತ್ತವನ್ನು ಸೆಪ್ಟೆಂಬರ್‌ 30ರ ಒಳಗೆ ಪಾವತಿಸಬೇಕು ಎಂದು ಇಂಧನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಗೃಹಜ್ಯೋತಿ ಯೋಜನೆಗೆ ಗ್ರಾಹಕರು ಜುಲೈ 25ರ ಒಳಗೆ ನೋಂದಾಯಿಸಿಕೊಂಡರೆ, ಆಗಸ್ಟ್ ತಿಂಗಳ ಬಿಲ್‌ನಲ್ಲಿ ಪ್ರಯೋಜನ ಸಿಗಲಿದೆ. ಅದೇ ರೀತಿ ಜುಲೈ 25ರಿಂದ ಆಗಸ್ಟ್ 25ರ ಒಳಗೆ ನೋಂದಾಯಿಸಿಕೊಂಡರೆ ಸೆಪ್ಟೆಂಬರ್ ತಿಂಗಳ ಬಿಲ್‌ನಲ್ಲಿ ಪ್ರಯೋಜನ ದೊರೆಯಲಿದೆ. ಪ್ರತಿ ತಿಂಗಳು 25ನೇ ತಾರೀಕಿನಿಂದ ನಂತರದ ತಿಂಗಳ 25ನೇ ತಾರೀಕಿನವರೆಗೆ ಬಿಲ್ ಮಾಡಲಾಗುತ್ತದೆ.

ಗೃಹಜ್ಯೋತಿ ಯೋಜನೆಯ ಪ್ರಯೋಜನ ಪಡೆಯಲು ವಿದ್ಯುತ್ ಬಳಕೆಯ ಸರಾಸರಿ 200 ಯೂನಿಟ್ ಮೀರಿರಬಾರದು. ಗ್ರಾಹಕರು ಜುಲೈ 25ರ ನಂತರ ಅರ್ಜಿ ಸಲ್ಲಿಸಿದರೆ ಅವರಿಗೆ ಆಗಸ್ಟ್ ತಿಂಗಳಲ್ಲಿ ಬರುವ ಬಿಲ್‌ನಲ್ಲಿ ಪ್ರಯೋಜನ ಸಿಗುವುದಿಲ್ಲ. ಆದರೆ, ಯೋಜನೆಯ ಪ್ರಯೋಜನವನ್ನು ಸೆಪ್ಟೆಂಬರ್ ತಿಂಗಳಲ್ಲಿ ಪಡೆಯಲಿದ್ದಾರೆ. ಹೀಗಾಗಿ, ಯೋಜನೆಯ ಪ್ರಯೋಜನ ಪಡೆಯಲು ತಕ್ಷಣವೇ ನೋಂದಣಿ ಮಾಡಿಕೊಳ್ಳಬೇಕು ಎಂದೂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಜಾತಿಗಣತಿ ಪಡೆಯಬೇಡಿ ಎಂದು ಪುಟ್ಟರಂಗಶೆಟ್ಟಿಯವರಿಗೆ ಹೇಳಿದ್ದೇ ಆಗಿನ ಸಿಎಂ ಕುಮಾರಸ್ವಾಮಿ: ಸಿದ್ದರಾಮಯ್ಯ ಆರೋಪ

ಗೃಹಜ್ಯೋತಿ’ ಯೋಜನೆಗೆ ನೋಂದಣಿ ಮಾಡುವುದು ಹೇಗೆ?

‘ಗೃಹಜ್ಯೋತಿ’ ಯೋಜನೆಗೆ ನೋಂದಣಿ ಮಾಡುವಾಗ ಫಲಾನುಭವಿಗಳು ಆಧಾರ್ ಕಾರ್ಡ್, ಗ್ರಾಹಕರ ಐಡಿ ಮಾಹಿತಿ (ವಿದ್ಯುಚ್ಛಕ್ತಿ ಬಿಲ್‌ನಲ್ಲಿ ಇರುವಂತೆ) ಮತ್ತು ಮೊಬೈಲ್‌ ನಂಬರ್‌ ಬೇಕು. ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಣಿಗೆ ವೆಬ್​ಸೈಟ್​ ವಿಳಾಸ https://sevasindhugs.karnataka.gov.in. ಸಂಪರ್ಕಿಸಬಹುದು. ಮೊಬೈಲ್, ಕಂಪ್ಯೂಟರ್, ಲ್ಯಾಪ್​ಟಾಪ್​ನಲ್ಲೂ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 1912 ಸಂಪರ್ಕಿಸಿ ಎಂದು ಇಂಧನ ಇಲಾಖೆ ಹೇಳಿದೆ.

  • ಎಸ್ಕಾಂ ಹೆಸರು
  • ಖಾತೆ ಸಂಖ್ಯೆ
  • ಖಾತೆದಾರರ ಹೆಸರು ಎಸ್ಕಾಂ ನಲ್ಲಿರುವಂತೆ
  • ಖಾತೆದಾರರ ವಿಳಾಸ ಎಸ್ಕಾಂ ನಲ್ಲಿರುವಂತೆ
  • ಎಸ್ಕಾಂ ಹೆಸರು1
  • ಬಳಕೆದಾರರ ವಿಧ (ಇಲ್ಲಿ ಎರಡು ಆಯ್ಕೆಗಳಿದ್ದು ಬಾಡಿಗೆದಾರರು/ ಮಾಲೀಕರು) ಎಂದಿದೆ
  • ಆಧಾರ್ ಸಂಖ್ಯೆ
  • ಅರ್ಜಿದಾರರ ಹೆಸರು
  • ಸಂವಹನಕ್ಕಾಗಿ ದೂರವಾಣಿ ಸಂಖ್ಯೆ

ಈ ವಿವರಗಳನ್ನು ಭರ್ತಿ ಮಾಡಬೇಕಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...