ಗೃಹಲಕ್ಷ್ಮಿ ಯೋಜನೆ | ಹಣ ಬರದವರಿಗೆ ಎರಡು ತಿಂಗಳ ಹಣ ಒಟ್ಟಿಗೆ ಬರಲಿದೆ: ಸಿಎಂ ಸಿದ್ದರಾಮಯ್ಯ

Date:

ಗೃಹಲಕ್ಷ್ಮಿ ಯೋಜನೆಯಲ್ಲಿ ಫಲಾನುಭವಿಗಳ ಅರ್ಜಿ ಸ್ವೀಕಾರವಾಗಿ, ಯಾರಿಗೆ ಈ ತಿಂಗಳ ಹಣ ಬಂದಿಲ್ಲವೋ ಅವರಿಗೆ ಎರಡು ತಿಂಗಳ ಹಣ ಒಟ್ಟಿಗೆ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಖಾಸಗಿ ಸುದ್ದಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ಶುಕ್ರವಾರ ಮಾತನಾಡಿದ ಅವರು, “ಗೃಹಲಕ್ಷ್ಮಿ ಯೋಜನೆಗಾಗಿ ರಾಜ್ಯ ಸರ್ಕಾರವು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಹಣ ಬಿಡುಗಡೆ ಮಾಡಿದೆ. ಮೊದಲ ಕಂತಿನಲ್ಲಿ 4,600 ಕೋಟಿ ರೂ. ಬಿಡುಗಡೆ ಮಾಡಿದೆ. 2023-24ನೇ ಸಾಲಿನಲ್ಲಿ 17,500 ಕೋಟಿ ರೂ. ನಿಗದಿಪಡಿಸಲಾಗಿತ್ತು. ಆಗಸ್ಟ್​, ಸೆಪ್ಟೆಂಬರ್ ತಿಂಗಳ ಅವಧಿಗೆ 4,600 ಕೋಟಿ ರೂ. ಬಿಡುಗಡೆ ಮಾಡಲಾಗಿದೆ” ಎಂದರು.

ಕಾಂಗ್ರೆಸ್​​ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ರಕ್ಷಾ ಬಂಧನದ ದಿನ ಮೈಸೂರಿನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಅದ್ಧೂರಿ ಚಾಲನೆ ಸಿಕ್ಕಿತ್ತು. ಆ ಬಳಿಕ ಅನೇಕ ಮಹಿಳೆಯರ ಖಾತೆಗೆ 2 ಸಾವಿರ ರೂ. ಜಮೆಯಾಗಿತ್ತು. ಆದರೆ ಕೆಲ ಮನೆ ಒಡತಿಯರು ತಮ್ಮ ಖಾತೆಗೆ ಹಣ ಬಂದಿಲ್ಲ ಎಂದು ದೂರಿದ್ದರು. ಎರಡು ತಿಂಗಳಿನ ಹಣ ಬಿಡುಗಡೆ ಮಾಡುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...