ಗುಬ್ಬಿ | ದುರ್ಗಾ ಪರಮೇಶ್ವರಿ ದೇವಸ್ಥಾನ ನಿರ್ಮಾಣಕ್ಕೆ ಮುಸ್ಲಿಂ ಸಮಾಜದಿಂದ 50 ಸಾವಿರ ದೇಣಿಗೆ..!!

Date:

ಗುಬ್ಬಿ ಪಟ್ಟಣದ ಬಾಬು ಜಗಜೀವನರಾಂ ನಗರ ಬಡಾವಣೆಯಲ್ಲಿ ನಿರ್ಮಾಣ ಆಗುತ್ತಿರುವ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಮುಸ್ಲಿಂ ಸಮಾಜ 50 ಸಾವಿರ ರೂ ದೇಣಿಗೆ ನೀಡಿ ಪರಸ್ಪರ ಸೌಹಾರ್ದತೆ ಹಾಗೂ ಧಾರ್ಮಿಕ ವಿಚಾರದಲ್ಲಿ ಜಾತ್ಯತೀತ ಮನೋಭಾವ ತೋರಿದ್ದಾರೆ.

ಪಟ್ಟಣದಲ್ಲಿ ಮುಸ್ಲಿಂ ಸಮಾಜ ಪರವಾಗಿ ಚೆಕ್ ವಿತರಣೆ ಮಾಡಿದ ಪಪಂ ಸದಸ್ಯ ಮಹಮ್ಮದ್ ಸಾದಿಕ್ ಮಾತನಾಡಿ ಗುಬ್ಬಿ ತಾಲ್ಲೂಕಿನಲ್ಲಿ ಎಂದೆಂದೂ ಕೋಮು ಸೌಹಾರ್ದ ವಾತಾವರಣ ಸೃಷ್ಟಿಯಾಗಿದೆ. ಧರ್ಮ ಬೇಧವಿಲ್ಲದೆ ಎಲ್ಲಾ ಹಬ್ಬಗಳನ್ನು ಆಚರಿಸುವ ನಮ್ಮಲ್ಲಿ ಮತ್ತಷ್ಟು ಬಾಂಧವ್ಯ ಗಟ್ಟಿಯಾಗಲು ಮುಸ್ಲಿಂ ಸಮಾಜದಿಂದ ನೂತನವಾಗಿ ನಿರ್ಮಾಣವಾಗುತ್ತಿರುವ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಸಮಿತಿಗೆ 50 ಸಾವಿರ ನಗದು ದೇಣಿಗೆಯನ್ನು ಚೆಕ್ ಮೂಲಕ ನೀಡಿದ್ದೇವೆ ಎಂದರು.

ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಸಮಿತಿ ಅಧ್ಯಕ್ಷ ನರಸಿಂಹಮೂರ್ತಿ ಮಾತನಾಡಿ ನಮ್ಮ ಬಡಾವಣೆಯಲ್ಲಿ ದುರ್ಗಾ ಪರಮೇಶ್ವರಿ ದೇವಸ್ಥಾನ ನಿರ್ಮಿಸಲು ಬಹಳ ವರ್ಷಗಳ ಶ್ರಮವಿದೆ. ನಮ್ಮ ಧಾರ್ಮಿಕ ವಿಚಾರದಲ್ಲಿ ಸಾಥ್ ನೀಡಿದ ಮುಸ್ಲಿಂ ಸಮಾಜ ತಮ್ಮಲ್ಲೇ ದೇಣಿಗೆ ಸಂಗ್ರಹ ಮಾಡಿ ನಮಗೆ ನೀಡಿ ದೇವರ ಕಾರ್ಯಕ್ಕೆ ಧರ್ಮ, ಜಾತಿ ಭೇದವಿಲ್ಲ ಎಂದು ರುಜುವಾತು ಮಾಡಿದ್ದಾರೆ. ಅವರ ಸೌಹಾರ್ದ ಭಾವನೆಗೆ ಬೆಲೆ ನೀಡಿ ಅವರ ದೇಣಿಗೆ ಹಣವನ್ನು ದೇವಾಲಯ ಕೆಲಸಕ್ಕೆ ಬಳಸಿ ಸಾರ್ಥಕಗೊಳಿಸುತ್ತೇವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಪಪಂ ಸದಸ್ಯ ಶೌಕತ್ ಆಲಿ, ಎಸ್.ಎಸ್ ಬಾಬು, ಮಂಜನ್ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...