ಗುಬ್ಬಿ | ಚಿರತೆ ದಾಳಿಗೆ 9 ಕುರಿಗಳ ಬಲಿ : ಆತಂಕದಲ್ಲಿ ಸುರುಗೇನಹಳ್ಳಿ ಗ್ರಾಮಸ್ಥರು.

Date:

ತೋಟದಮನೆಯ ಕುರಿ ರೊಪ್ಪಕ್ಕೆ ನುಗ್ಗಿದ ಚಿರತೆ 9 ಕುರಿಗಳ ಬಲಿ ಪಡೆದ ಘಟನೆ ತಾಲ್ಲೂಕಿನ ಕಸಬ ಹೋಬಳಿ ಸುರುಗೇನಹಳ್ಳಿ ಗ್ರಾಮದ ಹೊರ ವಲಯದಲ್ಲಿ ನಡೆದಿದೆ.

ಕೃಷ್ಣಪ್ಪ ಎಂಬ ರೈತರಿಗೆ ಸಂಬಂಧಿಸಿದ ಕುರಿಗಳ ರೊಪಕ್ಕೆ ತಡರಾತ್ರಿ ನುಗ್ಗಿದ ಚಿರತೆ ಹತ್ತಾರು ಕುರಿಗಳ ಮಧ್ಯೆ 9 ಕುರಿಗಳ ಕುತ್ತಿಗೆ, ಹೊಟ್ಟೆ ಬಗೆದು ಬಲಿ ಪಡೆದಿದೆ. ಅಂದಾಜು ಒಂದೂವರೆ ಲಕ್ಷ ಬೆಲೆ ಬಾಳುವ ಕುರಿಗಳು ರೈತನ ಪಾಲಿಗೆ ನಷ್ಟ ತಂದಿದೆ.

ಈಗಾಗಲೇ ಸುರುಗೇನಹಳ್ಳಿ ಗ್ರಾಮದ ಸುತ್ತಮುತ್ತಲೂ ಇರುವ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಳ್ಳುವ ಚಿರತೆಗಳು ಈ ಭಾಗದ ರೈತರಲ್ಲಿ ಆತಂಕ ತಂದಿದೆ. ಈ ಹಿಂದೆ ಬ್ಯಾಟಪ್ಪನಪಾಳ್ಯ ಗ್ರಾಮದಲ್ಲಿ ಕುರಿಗಳು, ಮೇಕೆಗಳ ಬಳಿ ಪಡೆದ ಘಟನೆ ನಡೆದಿತ್ತು ಎಂದು ಸ್ಥಳೀಯರು ತಮ್ಮ ಅಳಲು ತೋಡಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುರುಗೇನಹಳ್ಳಿ ಪ್ರೌಢಶಾಲೆಯ ಸಮೀಪದಲ್ಲಿ ಚಿರತೆ ಬೋನಿನಲ್ಲಿ ಸೆರೆಯಾಗಿತ್ತು. ಕಡಬ ಹೋಬಳಿ ಸೇರಿದಂತೆ ಹಲವು ಬಾರಿ ಚಿರತೆಗಳು ಗ್ರಾಮಸ್ಥರ ಕಣ್ಣಿಗೆ ಕಾಣಿಸಿಕೊಂಡಿವೆ. ಎಲ್ಲಾ ಪ್ರಕರಣದ ಹಿನ್ನಲೆ ಇಲ್ಲಿರುವ ಚಿರತೆ ಉಪಟಳ ತಪ್ಪಿಸಲು ಅರಣ್ಯ ಇಲಾಖೆ ಚುರುಕುಗೊಳ್ಳಬೇಕು ಎಂದು ರೈತ ಅಶೋಕ್ ಆಗ್ರಹಿಸಿದರು

“ಹೈನುಗಾರಿಕೆ, ಕುರಿ, ಮೇಕೆ ಸಾಕಾಣಿಕೆ ಮೂಲಕ ಬದುಕು ಕಟ್ಟಿಕೊಂಡ ಬಡ ರೈತರಿಗೆ ಚಿರತೆ ಹಾವಳಿ ತೀವ್ರ ನಷ್ಟ ತಂದಿದೆ. ದಿಢೀರ್ ಈ ನಷ್ಟ ಇಡೀ ಜೀವನಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಹತ್ತು ಸಾವಿರ ಬೆಲೆ ಬಾಳುವ ಕುರಿಗೆ ಮೂರು ಸಾವಿರ ಕೊಟ್ಟರೆ ಪ್ರಯೋಜನವಿಲ್ಲ. ಕುರಿ ಮೇಕೆಗೆ ಶೇಕಡಾ 30 ರಷ್ಟು ಪರಿಹಾರ ಸಿಗುತ್ತಿದೆ. ಸರ್ಕಾರ ಕೂಡಲೇ ಕಾಡು ಪ್ರಾಣಿ ದಾಳಿಗೆ ಶೇಕಡಾ 100 ರಷ್ಟು ಪರಿಹಾರ ನೀಡಬೇಕು ಎಂದು ರೈತ ಸಂಘ ಪ್ರಧಾನ ಕಾರ್ಯದರ್ಶಿ ಸಿ.ಜಿ.ಲೋಕೇಶ್ ಒತ್ತಾಯಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...