ಗುಬ್ಬಿ | ತೊರೆಹಳ್ಳಿ ಬಳಿಯ ಶಿಂಷಾ ನದಿ ತೊರೆಯಲ್ಲಿ ಕೊಚ್ಚಿ ಹೋದ ಕಾರು ಹಾಗೂ ಬೈಕ್

Date:

 ಎರಡು ದಿನದಿಂದ ಸುರಿದ ಮಳೆಗೆ ತಾಲ್ಲೂಕಿನ ತೊರೆಹಳ್ಳಿ ಬಳಿಯ ಶಿಂಷಾ ನದಿಯ ತೊರೆಯಲ್ಲಿ ಬಿರುಸಾಗಿ ಹರಿದ ನೀರು ರಸ್ತೆಯ ಸೇತುವೆ ಮೇಲೆ ಕಾರು ಹಾಗೂ ಬೈಕ್ ಕೊಚ್ಚಿ ಹೋದ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ಮಂಗಳವಾರ ಸಂಜೆ ಕಾರ್ಯನಿಮಿತ್ತ ಗುಬ್ಬಿಗೆ ಬಂದಿದ್ದ ತೋಟಸಾಗರ ಗ್ರಾಮದ ಪರಮಣ್ಣ ಅವರು ಕಾರಿನಲ್ಲಿ ರಾತ್ರಿ ಮರಳಿ ಇದೇ ಮಾರ್ಗದಲ್ಲಿ ಊರಿಗೆ ಮರಳುವಾಗ ತೊರೆಯ ನೀರಿನ ರಭಸಕ್ಕೆ ಕಾರು ಸಮೇತ ಕೊಚ್ಚಿ ಹೋಗಿದ್ದರು. ಸ್ಥಳೀಯರ ನೆರವಿನಿಂದ ಪರಮಣ್ಣ ಪಾರಾಗಿದ್ದಾರೆ. ಇದೇ ಸಮಯದಲ್ಲಿ ಸ್ಥಳೀಯ ಯುವಕನೊಬ್ಬನ ಬೈಕ್ ಸಹ ಕೊಚ್ಚಿ ಹೋಗಿದೆ. ಸದ್ಯ ಯುವಕ ಹಾರಿ ಹೊರ ಬಂದಿದ್ದಾನೆ. ಈ ರೀತಿಯ ಸಮಸ್ಯೆ ಪ್ರತಿ ವರ್ಷ ನಡೆಯುತ್ತಲೇ ಇರುತ್ತದೆ. ಕಳೆದ ವರ್ಷ ಟ್ರ್ಯಾಕ್ಟರ್, ಕಾರು ಕೊಚ್ಚಿ ಹೋಗಿತ್ತು. ಮೂವತ್ತು ವರ್ಷದಿಂದ ಸಮಸ್ಯೆಗೆ ಪರಿಹಾರ ಕೇಳಿ ಬೇಸತ್ತಿದ್ದೇವೆ ಎಂದು ಸ್ಥಳೀಯ ಗ್ರಾಪಂ ಮಾಜಿ ಅಧ್ಯಕ್ಷ ರಂಗನಾಥ್ ಹೇಳುತ್ತಾರೆ. 

ತೊರೆಹಳ್ಳಿ ತೊರೆಗೆ ಅಗತ್ಯ ಸೇತುವೆ ನಿರ್ಮಾಣಕ್ಕೆ ಕಳೆದ ಮೂರು ಎರಡು ದಶಕದ ಬೇಡಿಕೆ ಇದ್ದರೂ ಇಲ್ಲಿನ ಸಮಸ್ಯೆಗೆ ಪರಿಹಾರ ಸಿಗಲಿಲ್ಲ. ವರ್ಷದ ಆರು ತಿಂಗಳು ಸೇತುವೆ ರಸ್ತೆ ಬಂದ್ ಆಗುತ್ತದೆ. ಹರಿಯುವ ನೀರಿನಲ್ಲಿ ಸರ್ಕಸ್ ಮಾಡಿದರೆ ವಾಹನ ಕೊಚ್ಚಿ ಹೋಗುವುದು ಗ್ಯಾರಂಟಿ. ಇಲ್ಲಿನ ಸಮಸ್ಯೆಗೆ ಪರಿಹಾರಕ್ಕೆ ಶಾಸಕರು ಹಾಗೂ ಸಂಸದರ ಗಮನಕ್ಕೆ ತಂದಿದ್ದರೂ ಸೂಕ್ತ ಪರಿಹಾರ ಸಿಕ್ಕಿಲ್ಲ. ರೈತರ ಕೃಷಿ ಚಟುವಟಿಕೆಗೆ ತೀವ್ರ ಸಮಸ್ಯೆ ಎದುರಾಗಿದೆ. ತೊರೆ ಹಳ್ಳಕ್ಕೆ ಮೇಲ್ಸೇತುವೆ ಅವಶ್ಯವಿದೆ. ಗುಬ್ಬಿ ಪಟ್ಟಣಕ್ಕೆ ತೊರೆಹಳ್ಳಿ ಗ್ರಾಮಸ್ಥರು ಹೋಗಲು ಹೊಸಹಳ್ಳಿ ಮೂಲಕ ಎಂಟು ಕಿಮೀ ಅಧಿಕವಾಗಿ ಸುತ್ತುವರಿದು ಹೋಗಬೇಕಿದೆ. ಕಡಬ ಗ್ರಾಮಕ್ಕೆ ತೆರಳುವ ಈ ಮಾರ್ಗ ಬಂದ್ ಆಗುತ್ತದೆ. ಹೊನ್ನಶೆಟ್ಟಿಹಳ್ಳಿ ಯಡವನಹಳ್ಳಿ ಮಾರ್ಗ ಕೂಡಾ ಬಂದ್ ಆಗುತ್ತದೆ. ಈ ಸಮಸ್ಯೆ ಪ್ರತಿ ಮಳೆಗಾಲದಲ್ಲಿ ಕಂಡರೂ ಅಧಿಕಾರಿಗಳು ಪ್ರತಿನಿಧಿಗಳು ಜಾಣ ಮೌನ ವಹಿಸಿದ್ದಾರೆ ಎಂದು ರೈತ ಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸಿ.ಜಿ.ಲೋಕೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಮಾರು 300 ಮೀಟರ್ ದೂರದವರೆಗೆ ಕೊಚ್ಚಿ ಹೋಗಿದ್ದ ಕಾರು ಮತ್ತು ಬೈಕ್ ಸ್ಥಳೀಯರ ಸಹಕಾರದಿಂದ ತೊರೆ ನೀರಿನಿಂದ ಹೊರ ತೆಗೆಯಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...