ಗುಬ್ಬಿ | ಅಬಕಾರಿ ನಿರೀಕ್ಷಕಿ ವನಜಾಕ್ಷಿ ಅವರಿಗೆ ಅದ್ದೂರಿ ಬೀಳ್ಕೊಡುಗೆ

Date:

ಕಳೆದೆರಡು ವರ್ಷದಿಂದ ಗುಬ್ಬಿ ಅಬಕಾರಿ ವೃತ್ತದಲ್ಲಿ ಕೆಲಸ ಮಾಡಿ ಜನ ಮನ್ನಣೆ ಗಳಿಸಿ ಅಬಕಾರಿ ಇಲಾಖೆಯ ಜವಾಬ್ದಾರಿಯನ್ನು ನಿಯಮಾನುಸಾರ ಜಾರಿ ಮಾಡಿ ಸಾರ್ವಜನಿಕ ಪ್ರಶಂಸೆಗೆ ಪಾತ್ರರಾಗಿ ವರ್ಗಾವಣೆಗೊಂಡ ನಿರೀಕ್ಷಕರಾದ ವನಜಾಕ್ಷಿ ಅವರಿಗೆ ಅದ್ದೂರಿಯಾಗಿ ಬೀಳ್ಕೊಡುಗೆ ಸಮಾರಂಭ ಕಾರ್ಯಕ್ರಮ ನಡೆಸಲಾಯಿತು.

ಗುಬ್ಬಿ ಹೊರ ವಲಯದ ಗ್ರೀನ್ ವ್ಯೂ ರೆಸ್ಟೋರೆಂಟ್ ಸಭಾಂಗಣದಲ್ಲಿ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ತಾಲ್ಲೂಕಿನ ಎಲ್ಲಾ ಪರವಾನಗಿ ಮಧ್ಯ ಮಾರಾಟಗಾರರು, ಇಲಾಖೆ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ವರ್ಗಾವಣೆಗೊಂಡ ವನಜಾಕ್ಷಿ ಅವರಿಗೆ ಅಭಿನಂದನಾರ್ಹ ಬೀಳ್ಕೊಡುಗೆ ನೀಡಿದರು.

ಅಬಕಾರಿ ಉಪ ಆಯುಕ್ತ ಭರತೇಶ್ ಮಾತನಾಡಿ ಸಾರ್ವಜನಿಕ ಕೆಲಸ ಮಾಡುವ ಸಮಯ ಅದರಲ್ಲೂ ಅಬಕಾರಿ ಇಲಾಖೆ ಜವಾಬ್ದಾರಿ ಸುಲಭದ ಕೆಲಸವಲ್ಲ. ಇಂತಹ ಸಮಯದಲ್ಲಿ ತಾಲ್ಲೂಕಿನಲ್ಲಿ ಅಬಕಾರಿ ನಿರೀಕ್ಷಕರಾಗಿ ಮಹಿಳಾ ಅಧಿಕಾರಿ ವನಜಾಕ್ಷಿ ಸೇವೆ ಜನ ಮನ್ನಣೆ ಗಳಿಸಿದೆ. ಸಿಬ್ಬಂದಿಗಳ ಜೊತೆ ಹಗಲಿರುಳು ಕೆಲಸ ಮಾಡಿದ್ದಾರೆ. ಅಕ್ರಮ ಮದ್ಯ ತಡೆಯುವಲ್ಲಿ ನಿರಂತರ ಶ್ರಮ ಪಟ್ಟಿದ್ದಾರೆ. ಕೆಳಗಿನ ಸಿಬ್ಬಂದಿಗಳನ್ನು ಹಿಡಿತಕ್ಕೆ ಪಡೆದು ಕೆಲಸ ಮಾಡಿಸುವುದು ಒಂದು ಕಲೆ. ಈ ಕರ್ತವ್ಯ ನಿಭಾಯಿಸಿದ ವನಜಾಕ್ಷಿ ಅವರಿಗೆ ಇಲಾಖೆಯಲ್ಲಿ ಉನ್ನತ ಸ್ಥಾನಮಾನ ದೊರೆಯಲಿ ಎಂದು ಆಶಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವರ್ಗಾವಣೆಗೊಂಡ ಅಬಕಾರಿ ನಿರೀಕ್ಷಕರಾದ ವನಜಾಕ್ಷಿ ಮಾತನಾಡಿ ತಾಲ್ಲೂಕಿನಲ್ಲಿ 28 ಲೆಸೆನ್ಸ್ ಮಧ್ಯದಂಗಡಿಗಳಿತ್ತು. ಈಗ 38 ಅಂಗಡಿಗಳಿವೆ. ಮದ್ಯ ಮಾರಾಟದ ಗುರಿ ತಲುಪುವ ಜೊತೆಗೆ ಅಕ್ರಮ ಮದ್ಯ ಮಾರಾಟ ತಡೆಯುವುದು ಕ್ಲಿಷ್ಟಕರ. ಎರಡನ್ನೂ ನಿಭಾಯಿಸಿದ ಸಿಬ್ಬಂದಿಗಳು ನನ್ನ ಜೊತೆ ಹಗಲಿರುಳು ದುಡಿದಿದ್ದಾರೆ. ಎಲ್ಲಾ ಸಿಬ್ಬಂದಿಗಳು ಅರಿತು ಕೆಲಸ ಮಾಡಿದ್ದಾರೆ. ಇಲಾಖೆಯ ಜವಾಬ್ದಾರಿ ಅರಿತು ಕೆಲಸ ಮಾಡುವ ಸಮಯದಲ್ಲಿ ನನ್ನಿಂದ ಯಾರಿಗಾದರೂ ಬೇಸರ ಆಗಿದ್ದಲ್ಲಿ ಕ್ಷಮೆ ಇರಲಿ ಎಂದು ಹೇಳಿ ಇಲಾಖೆಯ ನಿಯಮಾನುಸಾರ ಕೆಲಸ ಮಾಡಲು ಬಯಸುತ್ತೇನೆ ಯಾವುದೇ ಸ್ಥಳವಾದರೂ ನಮ್ಮ ಕರ್ತವ್ಯದಲ್ಲಿ ನಿಷ್ಠೆ ಇಟ್ಟುಕೊಳ್ಳೋಣ ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ವರ್ಗಾವಣೆಗೊಂಡ ನಿರೀಕ್ಷಕರಾದ ವನಜಾಕ್ಷಿ ಅವರಿಗೆ ಸನ್ಮಾನಿಸಿ ಗೌರವಿಸಿ ಬೀಳ್ಕೊಡಲಾಯಿತು.

ಕಾರ್ಯಕ್ರಮದಲ್ಲಿ ಅಬಕಾರಿ ಉಪ ಅಧೀಕ್ಷಕ ಸಂದೀಪ್, ನಿರೀಕ್ಷಕರಾದ ಶೇಖ್ ಇಮ್ರಾನ್, ಲಂಕ ಹನುಮಯ್ಯ, ದಿವ್ಯಶ್ರೀ, ಮದ್ಯ ಉದ್ಯಮಿಗಳಾದ ಚರಣ್, ಮಧುಗೌಡ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...