ಗುಬ್ಬಿ | ಟೊಮೊಟೊ ತುಂಬಿದ್ದ ಲಾರಿ ಪಲ್ಟಿ

Date:

ಬೆಂಗಳೂರು ಮಾರ್ಕೆಟ್ ಕಡೆ ಹೊರಟಿದ್ದ ಟೊಮೋಟೊ ತುಂಬಿದ್ದ ಲಾರಿ ಪಟ್ಟಣದ ಶ್ರೀ ಚನ್ನಬಸವೇಶ್ವರಸ್ವಾಮಿ ದೇವಾಲಯದ ಎದುರು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಚಾಲಕ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

1001845657

ತೋಟಸಾಗರ ಗ್ರಾಮದಿಂದ ರೈತರ ಟೊಮೋಟೊ ತುಂಬಿಕೊಂಡ ಲಾರಿ ಪಟ್ಟಣದ ಗುಬ್ಬಿಯಪ್ಪ ದೇವಾಲಯದ ಮುಂದೆ ತಿರುವು ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದಿದೆ. ಕ್ರೇಟ್ ನಲ್ಲಿ ತುಂಬಿದ್ದ ಟೊಮೋಟೊ ನೆಲದಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು ಸ್ಥಳದಲ್ಲಿ ಸಾರ್ವಜನಿಕರು ಚಾಲಕ ಹಾಗೂ ಕ್ಲೀನರ್ ನನ್ನು ರಕ್ಷಿಸಿ ಟೊಮೋಟೊ ಕ್ರೇಟ್ ಗಳನ್ನು ರಕ್ಷಿಸಿದರು.

ಬೆಂಗಳೂರು ಮಾರುಕಟ್ಟೆಗೆ ತೆರಳುವ ಟೊಮೋಟೊ ಉತ್ತಮ ಬೆಲೆ ಸಿಗುವ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆ ಉಂಟಾಗಿದೆ. ಚಾಲಕನ ನಿರ್ಲಕ್ಷ್ಯ ಬಗ್ಗೆ ರೈತರ ಆಕ್ರೋಶ ವ್ಯಕ್ತವಾಯಿತು. ದೇವಾಲಯ ಮುಂದೆ ತಿರುವು ಬಳಿ ವೇಗ ನಿಯಂತ್ರಣ ಮಾಡಬೇಕಿತ್ತು. ರಸ್ತೆಯ ಬದಿಯಲ್ಲಿ ಸಾಮಾನ್ಯವಾಗಿ ಜನರು ಇರುತ್ತಿದ್ದರು. ಅದೃಷ್ಟವಶಾತ್ ಲಾರಿ ಬಂದ ವೇಳೆ ಯಾರೂ ಇಲ್ಲದ ಕಾರಣ ಬಾರಿ ಅನಾಹುತ ತಪ್ಪಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...