ಗುಬ್ಬಿ | ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಬೃಹತ್ ಪಾದಯಾತ್ರೆ ಆರಂಭ.

Date:

ತುಮಕೂರು ಜಿಲ್ಲೆಯ ಜೀವನಾಡಿ ಹೇಮಾವತಿ ನೀರು ಬೇರೆಡೆಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಅವೈಜ್ಞಾನಿಕವಾಗಿ ಕೊಂಡೊಯ್ಯುವ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಬೃಹತ್ ಪಾದಯಾತ್ರೆ ಶನಿವಾರ ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಸಾಗರನಹಳ್ಳಿ ಗೇಟ್ ಬಳಿ ಮಠಾಧೀಶರ ನೇತೃತ್ವದಲ್ಲಿ ಆರಂಭಿಸಲಾಗಿದೆ.

ಎನ್ ಡಿಎ ಒಕ್ಕೂಟ ಬಿಜೆಪಿ ಹಾಗೂ ಜೆಡಿಎಸ್ ಕರೆ ನೀಡಿದ್ದ ಬೃಹತ್ ಪಾದಯಾತ್ರೆಗೆ ಎರಡೂ ಪಕ್ಷದ ಕಾರ್ಯಕರ್ತರು, ಮುಖಂಡರು ಹಾಗೂ ರೈತ ಭಾಂದವರು ಒಗ್ಗೂಡಿ ತಂಡೋಪತಂಡವಾಗಿ ಯಾತ್ರೆಗೆ ಸೇರುತ್ತಿದ್ದಾರೆ. ನೂರಾರು ಸಂಖ್ಯೆಯಿಂದ ಆರಂಭವಾಗಿ ಸಾವಿರಾರು ಸಂಖ್ಯೆಯಲ್ಲಿ ಪಾದಯಾತ್ರೆ ನಿಟ್ಟೂರು ಸರ್ಕಲ್ ಬಳಿಗೆ ಹುರುಪಿನಿಂದ ಸಾಗಿದೆ. ಬಹುತೇಕ ಎಲ್ಲಾ ಮುಖಂಡರು ನಡೆದು ಸಂಜೆ ವೇಳೆಗೆ 22 ಕಿಮೀ ಕ್ರಮಿಸಿದ್ದಾರೆ. ವಯೋಮಾನದ ಲೆಕ್ಕವಿಲ್ಲದೆ ಎಲ್ಲಾ ವಯಸ್ಸಿನ ರೈತರು ಪಾಲ್ಗೊಂಡಿರುವುದು ವಿಶೇಷ ಎನಿಸಿದೆ.

1000747649

ಪಟ್ಟಣದ ಬಸ್ ಸ್ಟ್ಯಾಂಡ್ ಬಳಿ ಪ್ರತಿಭಟನಾ ಸಭೆ ನಡೆಸಿ ಮಾತನಾಡಿ ಶಾಸಕ ಎಂ.ಟಿ.ಕೃಷ್ಣಪ್ಪ ತಾಕತ್ ಇದ್ದರೆ ನೀರು ತೆಗೆದುಕೊಂಡು ಹೋಗಲಿ. ಅಕ್ರಮ ಮಾಡಿಯೇ ಅಭ್ಯಾಸ ಆಗಿರುವ ಡಿಕೆಶಿ ಅವರಿಗೆ ಈ ಹೇಮಾವತಿ ಲಿಂಕ್ ಕೆನಾಲ್ ಅಕ್ರಮವಾಗಿ ನಡೆಸಿರುವುದು ಸಾಕ್ಷಿಯಾಗಿದೆ. ಬೆಳಗಾವಿ ಅಧಿವೇಶನದಲ್ಲಿ ಈ ಯೋಜನೆ ಬಗ್ಗೆ ಹೋರಾಟ ಮಾಡುತ್ತೇನೆ. ಜಿಲ್ಲೆಯ ಕೆಲ ಶಾಸಕರು ನನ್ನ ಜೊತೆ ಇದ್ದು ಬಾವಿಗಿಳಿದು ಅಹೋರಾತ್ರಿ ಧರಣಿ ನಡೆಸಿ ಈ ಕಾಮಗಾರಿ ಕೈ ಬಿಡಲು ಆಗ್ರಹಿಸುತ್ತೇವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಸಕ ಬಿ.ಸುರೇಶ್ ಗೌಡ ಮಾತನಾಡಿ ಹೇಮಾವತಿ ನಮ್ಮ ಹಕ್ಕು. ನಮ್ಮ ಪಾಲಿನ ನೀರು ನೀವು ತೆಗೆದುಕೊಳ್ಳುವ ಡಿಕೆಶಿ ಅವರ ಹಠಕ್ಕೆ ಸೆಡ್ಡು ಹೊಡೆಯಲು ಜಿಲ್ಲೆಯ ರೈತರು ಸಿದ್ಧರಿದ್ದಾರೆ. ನಮ್ಮ ಹೆಣಗಳ ಮೇಲೆ ನೀರು ಹರಿಸಿಕೊಳ್ಳಿ. ಹೀಗೆ ದೌರ್ಜನ್ಯ ಮಾಡುವ ಕಾಂಗ್ರೆಸ್ ಸರ್ಕಾರ ತುಮಕೂರು ಜಿಲ್ಲೆಯ ರೈತರಿಗೆ ಅನ್ಯಾಯ ಮಾಡುತ್ತಿದೆ. ರಾಮನಗರ ಜಿಲ್ಲೆಯ ರೈತರಿಗೂ ನೀರು ಕೊಡಿ. ನೀರಿನ ಹಂಚಿಕೆ ನ್ಯಾಯ ಬದ್ದವಾಗಿರಲಿ. ಹೇಮಾವತಿ ಡ್ಯಾಂ ಮೂಲಕ ನೇರ ಪೈಪ್ ಲೈನ್ ಮಾಡಿಕೊಳ್ಳಲಿ. ಅಥವಾ ಕೆ ಆರ್ ಎಸ್ ಡ್ಯಾಂ ಮೂಲಕ ತೆಗೆದುಕೊಳ್ಳಲಿ. ಅದು ಬಿಟ್ಟು ನಮ್ಮ ರೈತರಿಗೆ ವಿಷ ಕೊಡುವುದು ಅನ್ಯಾಯ ಎಂದು ಗುಡುಗಿದರು.

1000747638

ಬಿಜೆಪಿ ಮುಖಂಡ ಎಸ್.ಡಿ.ದಿಲೀಪ್ ಕುಮಾರ್ ಮಾತನಾಡಿ ಹೇಮಾವತಿ ನೀರಿನ ಹರಿಕಾರ ಎನಿಸಿಕೊಳ್ಳಲು ಗುಬ್ಬಿ ಶಾಸಕರು ಕೂಡಲೇ ರಾಜೀನಾಮೆ ಸಲ್ಲಿಸಿ ರೈತರೊಂದಿಗೆ ಹೋರಾಟಕ್ಕೆ ಬರಲಿ. ಸರ್ಕಾರ ಜೊತೆ ಮಾತನಾಡುತ್ತೇನೆ ಎನ್ನುತ್ತಾರೆ. ಡಿ.ಕೆ.ಶಿವಕುಮಾರ್ ಅವರ ಮುಂದೆ ಮಾತನಾಡುವ ಧೈರ್ಯ ಇಲ್ಲವಾಗಿದೆ. ಈಗಲೂ ಅವರು ಎಲ್ಲಿರುತ್ತಾರೆ ಎಂಬುದು ತಾಲ್ಲೂಕಿನ ಜನತೆಗೆ ಗೊತ್ತು. ಶಿಷ್ಟಾಂಗ ನಮಸ್ಕಾರ ಮಾಡುತ್ತೇನೆ. ಮೊದಲು ಸುಳ್ಳು ಹೇಳದೇ ರೈತರ ನ್ಯಾಯಕ್ಕೆ ದನಿಯಾಗಿ ನಿಲ್ಲಬೇಕು. ಹಾಗೇ ನಿಂತರೆ ಮುಂದಿನ ಚುನಾವಣೆ ನಿಮ್ಮನ್ನು ಮತ್ತೇ ಗೆಲ್ಲಿಸುತ್ತೇವೆ. ತೋಟದಲ್ಲಿ ಕೂತು ಏನೇನೂ ಮಾಡ್ತೀರಿ ಎಲ್ಲರಿಗೂ ತಿಳಿದಿದೆ ಎಂದು ಛೇಡಿಸಿದರು.

1000747646

ಜೆಡಿಎಸ್ ಮುಖಂಡ ಬಿ.ಸಿ.ನಾಗರಾಜು ಮಾತನಾಡಿ ಹೇಮಾವತಿ ನೀರಿಗಾಗಿ ಸಲ್ಲದ ರಾಜಕಾರಣ ಬದಿಗೊತ್ತಿ ಗುಬ್ಬಿ ಶಾಸಕರು ಮುಂದೆ ಬರಬೇಕು. ಕಾವೇರಿ ಹೋರಾಟದಂತೆ ಮುಂದಿನ ದಿನಗಳು ಕಳೆಯಬೇಕಿದೆ. ಚುನಾವಣೆ ಸಮಯದಲ್ಲಿ ಕುಕ್ಕರ್ ಹಂಚಿ, ಕುಂಕುಮ ಹಂಚಿ ಆದರೆ ನಿಮ್ಮನ್ನು 25 ವರ್ಷದಿಂದ ಗೆಲ್ಲಿಸಿದ ರೈತರ ಪರ ಈಗ ನಿಲ್ಲದೇ ಸರ್ಕಾರದ ಒಂದು ಭಾಗ ಎನ್ನುತ್ತೀರಿ. ರೈತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕದೆ ನೀರುಗಂಟಿ ಎಂಬ ಹೆಸರು ಕೊಟ್ಟಿದ್ದಾರೆ. ಅದಕ್ಕೆ ಬಂದು ಹೋರಾಟಕ್ಕೆ ಬನ್ನಿ ಎಂದು ಕಿಡಿಕಾರಿದರು.

ಎಪಿಎಂಸಿ ಮಾಜಿ ಅಧ್ಯಕ್ಷ ಕಳ್ಳಿಪಾಳ್ಯ ಲೋಕೇಶ್ ಮಾತನಾಡಿ ಹೇಮಾವತಿ ನೀರು ಅನ್ಯಾಯ ಆದರೆ ಅದು ಗುಬ್ಬಿ ತಾಲ್ಲೂಕಿಗೆ ಅತಿ ಹೆಚ್ಚು ಆಗಲಿದೆ. ಈ ಬಗ್ಗೆ ನಮ್ಮ ರೈತರು ಎಚ್ಚೆತ್ತುಕೊಳ್ಳಬೇಕು. ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿ ಮುಂದಿನ ಬೆಳಗಾವಿ ಅಧಿವೇಶನದಲ್ಲಿ ನಮ್ಮ ದನಿಯೇ ಚರ್ಚೆ ಆಗಬೇಕು. ಈ ಹೋರಾಟಕ್ಕೆ ಬೆಂಬಲ ಸೂಚಿಸುವ ರೈತರು ಮುಂದಿನ ಹೋರಾಟಕ್ಕೆ ಹತ್ತು ಪಟ್ಟು ಸಂಖ್ಯೆ ಹೆಚ್ಚಿಸಬೇಕು ಎಂದು ಕರೆ ನೀಡಿದರು.

1000747647

ಮಾಜಿ ಶಾಸಕ ಮಸಾಲಾ ಜಯರಾಮ್ ಮಾತನಾಡಿ ಜಿಲ್ಲೆಯ ಶಾಸಕರು ಬೆಳಗಾವಿಯಲ್ಲಿ ಈ ಬಗ್ಗೆ ಚರ್ಚಿಸಿ ಕಾಮಗಾರಿ ನಿಲ್ಲಿಸಬೇಕು. ಮುಖ್ಯನಾಲೆಯ ಮೂಲಕವೇ ನೀರು ತೆಗೆದುಕೊಂಡು ಹೋಗಲಿ. ಅದಕ್ಕೆ ಯಾರೂ ಅಭ್ಯಂತರ ಮಾಡುತ್ತಿಲ್ಲ. ಹೇಮಾವತಿ ನಮ್ಮ ಹಕ್ಕಿನ ನೀರು ಪಡೆಯಲು ಈಗ ಜಿಲ್ಲಾಧಿಕಾರಿಗಳ ಕಚೇರಿ ಮುತ್ತಿಗೆ ಹಾಕಿದ್ದೇವೆ. ಹೋರಾಟ ತೀವ್ರತೆ ಪಡೆದುಕೊಂಡಲ್ಲಿ ವಿಧಾನಸೌಧ ಮುತ್ತಿಗೆ ಹಾಕಲು ಸಜ್ಜಾಗಿದ್ದೇವೆ ಎಂದು ಎಚ್ಚರಿಕೆ ನೀಡಿದರು.

ಶಾಸಕರಾದ ಸುರೇಶ್ ಬಾಬು, ಜ್ಯೋತಿಗಣೇಶ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಎಚ್. ಟಿ. ಭೈರಪ್ಪ, ತಮ್ಮಡಿಹಳ್ಳಿ ವಿರಕ್ತ ಮಠದ ಶ್ರೀ ಅಭಿನವ ಮಲ್ಲಿಕಾರ್ಜುನ ದೇಶಿಕೇಂದ್ರ ಸ್ವಾಮೀಜಿ, ಬೆಳ್ಳಾವಿ ಮಠದ ಶ್ರೀ ಕಾರದ ಬಸವ ಸ್ವಾಮೀಜಿಗಳು, ಗೊಲ್ಲಹಳ್ಳಿ ಮಠದ ಶ್ರೀ ವಿಭವ ವಿದ್ಯಾಶಂಕರ ಸ್ವಾಮೀಜಿ ನೇತೃತ್ವದಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ, ಶಾಸಕ ಜಿ.ಬಿ.ಜ್ಯೋತಿ ಗಣೇಶ್, ಮುಖಂಡರಾದ ಬೆಟ್ಟಸ್ವಾಮಿ, ಹೊನ್ನಗಿರಿಗೌಡ, ಚಂದ್ರಶೇಖರಬಾಬು, ಎನ್.ಸಿ.ಪ್ರಕಾಶ್, ಬಿಜೆಪಿ ಜಿಲ್ಲಾಧ್ಯಕ್ಷ ರವಿ ಹೆಬ್ಬಾಕ, ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಸಿ.ಆಂಜನಪ್ಪ, ಕೆ.ಟಿ.ಶಾಂತಕುಮಾರ್, ಪಂಚಾಕ್ಷರಿ, ಚಿಕ್ಕವೀರಯ್ಯ, ಸಾಗರನಹಳ್ಳಿ ವಿಜಯಕುಮಾರ್ ಸೇರಿದಂತೆ ನೂರಾರು ಮುಖಂಡರು ಭಾಗವಹಿಸಿದ್ದರು.

ವರದಿ – ಎಸ್. ಕೆ. ರಾಘವೇಂದ್ರ ಗುಬ್ಬಿ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...