ಗುಬ್ಬಿ | ದುಡಿಮೆಯ ಒಂದಂಶ ಶೈಕ್ಷಣಿಕ ಸೇವೆಗೆ ಮುಡುಪು : ಕಳ್ಳಿಪಾಳ್ಯ ಲೋಕೇಶ್

Date:

ಸಮಾಜದಲ್ಲಿ ಗುರುತಿಸಿಕೊಂಡು ಬೆಳೆದ ನಂತರ ತಮ್ಮ ದುಡಿಮೆಯ ಒಂದಂಶ ಸಮಾಜದ ಸೇವೆ ಮುಡಿಪಾಗಿ ಇಡುವುದು ನಿಜವಾದ ಸೇವೆ. ಇದರಲ್ಲಿ ಬಡ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಅವಶ್ಯ ಸೌಕರ್ಯ ಒದಗಿಸುವುದು ಪ್ರಸ್ತುತ ದಿನಗಳಲ್ಲಿ ಅರ್ಥಪೂರ್ಣ ಸೇವೆ ಎನಿಸಿಕೊಂಡಿದೆ ಎಂದು ಜೆಡಿಎಸ್ ಮುಖಂಡ ಕಳ್ಳಿಪಾಳ್ಯ ಲೋಕೇಶ್ ತಿಳಿಸಿದರು.

ತಾಲ್ಲೂಕಿನ ಕಸಬಾ ಹೋಬಳಿ ಕಳ್ಳಿಪಾಳ್ಯ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ನೋಟ್ ಬುಕ್ ಹಾಗೂ ಲೇಖನಿ ಸಾಮಾಗ್ರಿ ವಿತರಿಸಿ 64 ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡು ಕಳೆದ 25 ವರ್ಷದಿಂದ ಶಿಕ್ಷಣಕ್ಕೆ ಒತ್ತು ನೀಡುವ ಉದ್ದೇಶದಲ್ಲಿ ಹುಟ್ಟುಹಬ್ಬವನ್ನು ದುಂದುವೆಚ್ಚ ಮಾಡದೆ ಬಡ ಮಕ್ಕಳ ಶಿಕ್ಷಣಕ್ಕೆ ಅನುಕೂಲ ಮಾಡುವ ನಿಟ್ಟಿನಲ್ಲಿ ಪಾಠೋಪಕರಣ ವ್ಯವಸ್ಥೆ ಮಾಡುತ್ತಾ ಸರಳವಾಗಿ ಆಚರಿಸಿಕೊಳ್ಳುತ್ತಿದ್ದೇವೆ ಎಂದು ತಿಳಿಸಿದರು.

ಗ್ರಾಮೀಣ ಪ್ರದೇಶದಲ್ಲಿ ಓದುವ ಮಕ್ಕಳಿಗೆ ಅನುಕೂಲಗಳು ಸಿಗುತ್ತಿಲ್ಲ. ನಮ್ಮ ಬಾಲ್ಯದ ಜೀವನದಲ್ಲಿ ಈ ಸಂಕಷ್ಟ ಅನುಭವಿಸಿದ ಹಿನ್ನಲೆ ಇಂದು ಬಡ ಮಕ್ಕಳಿಗೆ ಶಿಕ್ಷಣ ಒದಗಿಸುವ ಕೆಲಸವನ್ನು ಮಾಡುತ್ತಿದ್ದೇನೆ. ಶುಲ್ಕ ಭರಿಸುವುದು, ಉನ್ನತ ವ್ಯಾಸಂಗಕ್ಕೆ ಸಹಕಾರ ಹೀಗೆ ಹಲವು ಸತ್ಕಾರ್ಯ ಮಾಡುವ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳಲು ಪರದಾಡುವ ಬಡವರಿಗೂ ಸಹಕಾರ ಮಾಡಿದ್ದೀನಿ. ಇಂತಹ ಸಂದರ್ಭದಲ್ಲಿ ಸಾರ್ಥಕ ಬದುಕು ಎಂಬ ಭಾವನೆ ಮನೆ ಮಾಡುತ್ತದೆ. ರಾಜಕೀಯ ಕ್ಷೇತ್ರಕ್ಕಿಂತ ಭಿನ್ನವಾಗಿ ಸಾಮಾಜಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡ ಹಿನ್ನಲೆ ಜಾತ್ಯತೀತ ನಿಲುವು ಕಾಣುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಷ್ಟ್ರೀಯ ಹೆದ್ದಾರಿ ಬದಿಯ ನಮ್ಮ ಗ್ರಾಮಕ್ಕೆ ಮೂಲಭೂತ ಸವಲತ್ತುಗಳ ತರಲು ಪ್ರಯತ್ನ ಮಾಡುತ್ತಿದ್ದೇವೆ. ಈಗಾಗಲೇ ಕೇಂದ್ರ ಸಚಿವ ಸೋಮಣ್ಣ ಅವರಿಂದ ಹೆದ್ದಾರಿಗೆ ಮೇಲ್ಸೇತುವೆ ನಿರ್ಮಾಣ ಆಗಲಿದೆ. ರೈಲ್ವೆ ಅಂಡರ್ ಪಾಸ್ ಕೂಡಾ ಶೀಘ್ರದಲ್ಲಿ ನಿರ್ಮಾಣ ಆಗಲಿದೆ ಎಂದ ಅವರು ಹುಟ್ಟುಹಬ್ಬ ಆಚರಣೆ ಹಿನ್ನಲೆ ಅಡಗೂರು, ಪ್ರಭುವನಹಳ್ಳಿ, ಸಿಂಗೋನಹಳ್ಳಿ ಶಾಲಾ ಮಕ್ಕಳಿಗೆ ಪುಸ್ತಕಗಳು, ಲೇಖನಿ ಸಾಮಾಗ್ರಿ ವಿತರಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಕೇಕ್ ಕತ್ತರಿಸಿ ಶಾಲಾ ಮಕ್ಕಳಿಗೆ ಹಂಚಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ದಿಲೀಪ್ ಕುಮಾರ್, ರೈತ ಸಂಘದ ಅಧ್ಯಕ್ಷ ವೆಂಕಟೇಗೌಡ, ಮುಖಂಡರಾದ ಯೋಗಾನಂದಕುಮಾರ್, ಎಂ.ಜಿ.ಶಿವಲಿಂಗಯ್ಯ, ವೀರಭದ್ರೇಗೌಡ, ವೆಂಕಟೇಶ್, ಶಂಕರೇಗೌಡ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...