ಗುಬ್ಬಿ | ಶ್ರೀ ಗೋಸಲ ಚನ್ನಬಸವೇಶ್ವರಸ್ವಾಮಿ ಜಾತ್ರಾ ಸಿದ್ಧತೆಗೆ ಪೂರ್ವಭಾವಿ ಸಭೆ

Date:

ಐತಿಹಾಸಿಕ ಪ್ರಸಿದ್ಧ ಗುಬ್ಬಿಯ ಶ್ರೀ ಗೋಸಲ ಚನ್ನಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಅಂಗವಾಗಿ ಸಕಲ ಸಿದ್ಧತೆಗೆ ತಾಲ್ಲೂಕು ಆಡಳಿತ ಹಾಗೂ ವ್ಯವಸ್ಥಾಪನಾ ಸಮಿತಿ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಹದಿನೆಂಟು ಕೋಮಿನ ಮುಖಂಡರು ತಮ್ಮ ಸಲಹೆ ಸೂಚನೆ ನೀಡಿ ಅದ್ದೂರಿ ಜಾತ್ರೆ ನಡೆಸಲು ತೀರ್ಮಾನ ಕೈಗೊಳ್ಳಲಾಯಿತು.

ಪಟ್ಟಣದ ಶ್ರೀ ಚನ್ನಬಸವೇಶ್ವರಸ್ವಾಮಿ ದೇವಾಲಯದ ದಾಸೋಹ ನಿಲಯದಲ್ಲಿ ಉಪ ವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾರ್ಚ್ 5 ರಂದು ಧ್ವಜಾರೋಹಣ ಮೂಲಕ ಜಾತ್ರಾ ಮಹೋತ್ಸಕ್ಕೆ ಚಾಲನೆ ನೀಡಿ ಮಾರ್ಚ್ 9 ರಂದು ರಥೋತ್ಸವ ಹಾಗೂ ಮಾರ್ಚ್ 14 ರಂದು ಬೆಳ್ಳಿ ಪಲ್ಲಕ್ಕಿ ಉತ್ಸವ ನಡೆಯಲಿದೆ. ಪ್ರಮುಖ ದಿನಗಳಲ್ಲಿ ಸುವ್ಯವಸ್ಥೆ ಮಾಡುವ ಬಗ್ಗೆ ಹತ್ತು ಹಲವು ವಿಚಾರ ಚರ್ಚೆ ಮಾಡಿದರು.

ಜಾತ್ರೆಯಲ್ಲಿ ಮಾರ್ಚ್ 20 ರಂದು ನಾಟಕರತ್ನ ಗುಬ್ಬಿ ವೀರಣ್ಣ ಅವರ ಕುಟುಂಬದವರಿಂದ ವಿಚಿತ್ರ ಮಂಟಪ ಉತ್ಸವ, ಮಾರ್ಚ್ 20 ರಂದು ತೆಪ್ಪೋತ್ಸವ ನಡೆದು ಮಾರ್ಚ್ 23 ರ ಭಾನುವಾರ ಸ್ವಾಮಿಯ ಚನ್ನಶೆಟ್ಟಿಹಳ್ಳಿ ಗದ್ದುಗೆ ಮಠ ತೆರಳಿ ರಾತ್ರಿ ಮರಳಿ ದೇವಾಲಯಕ್ಕೆ ಬರುವ ಮೂಲಕ ಜಾತ್ರೆ ಸಂಪನ್ನಗೊಳ್ಳಲಿರುವ ಎಲ್ಲಾ ಧಾರ್ಮಿಕ ವಿಧಿ ವಿಧಾನ ಚರ್ಚಿಸಿ ನಂತರ ಜಾತ್ರೆಗೆ ಅಗತ್ಯ ಮೂಲಭೂತ ಸೌಕರ್ಯಗಳ ಬಗ್ಗೆ ಚರ್ಚೆ ನಡೆಸಲಾಯಿತು. ಪ್ರತಿ ಬಾರಿ 12 ಲಕ್ಷಕ್ಕೂ ಅಧಿಕ ಹಣ ವ್ಯಯ ಆಗಲಿದೆ. ಈ ಬಾರಿ ಮತ್ತಷ್ಟು ಆರ್ಥಿಕ ಸಹಾಯ ದೇಣಿಗೆ ಮೂಲಕ ತರುವ ವಿಚಾರ ಪ್ರಸ್ತಾಪಿಸಿ ನಿರಂತರ ದಾಸೋಹ ವ್ಯವಸ್ಥೆ ಮಾಡಲು ಹಲವು ಸಿದ್ಧತೆ ಅಗತ್ಯ ಬಗ್ಗೆ ಕೂಡ ಚರ್ಚೆ ನಡೆಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾವಿರಾರು ಭಕ್ತಾದಿಗಳು ಹರಿದು ಬರುವ ಈ ದೊಡ್ಡ ಜಾತ್ರೆಗೆ ಮೊದಲು ವಸತಿ ಹಾಗೂ ಊಟದ ವ್ಯವಸ್ಥೆ, ಬೇಸಿಗೆ ಕಾಲದಲ್ಲಿ ಕುಡಿಯುವ ನೀರು ಪೂರೈಕೆ ಹಾಗೂ ರಥೋತ್ಸವ ಹಾಗೂ ಬೆಳ್ಳಿಪಲ್ಲಕ್ಕಿ ಉತ್ಸವದಲ್ಲಿ ಪೊಲೀಸ್ ಬಂದೋಬಸ್ತ್ ಮಾಡುವುದು, ಬೆಸ್ಕಾಂ ಇಲಾಖೆ ಕರೆಂಟ್ ವ್ಯತ್ಯಯ ಆಗದಂತೆ ನಿರ್ವಹಿಸುವುದು, ಲೋಕೋಪಯೋಗಿ ಇಲಾಖೆ ರಥೋತ್ಸವ ವ್ಯವಸ್ಥೆ ಗಮನಿಸುವುದು, ಅಗ್ನಿಶಾಮಕದಳ ಮುನ್ನೆಚ್ಚರಿಕೆ ಕ್ರಮ, ಸಾರಿಗೆ ಇಲಾಖೆ ಮೂಲಕ ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ ಹಾಗೂ ಆರೋಗ್ಯ ಇಲಾಖೆ ಸಂಚಾರಿ ಚಿಕಿತ್ಸಾಲಯ ತೆರೆಯುವುದು ಕಡ್ಡಾಯ ಮಾಡುವಂತೆ ಸೂಚನೆ ನೀಡಲಾಯಿತು.

ಈ ಸಭೆಯಲ್ಲಿ ತಹಶೀಲ್ದಾರ್ ಬಿ.ಆರತಿ, ಪಪಂ ಅಧ್ಯಕ್ಷೆ ಮಂಗಳಮ್ಮ ರಾಜಣ್ಣ, ಮುಖ್ಯಾಧಿಕಾರಿ ಮಂಜುಳಾದೇವಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಮಯ್ಯ, ದಾಸೋಹ ಸಮಿತಿ ಅಧ್ಯಕ್ಷ ಕಾಯಿ ಸುರೇಶ್, ಹದಿನೆಂಟು ಕೋಮಿನ ಮುಖಂಡ ಪಟೇಲ್ ಕೆಂಪೇಗೌಡ, ಯಜಮಾನ್ ಕುಮಾರಯ್ಯ, ಪಣಗಾರ್ ನಿಜಲಿಂಗಪ್ಪ, ಪಪಂ ಸದಸ್ಯ ರೇಣುಕಾ ಪ್ರಸಾದ್, ಪೇಶಗಾರ್ ಕುಮಾರ್, ತಾಲ್ಲೂಕು ವೈದ್ಯಾಧಿಕಾರಿ ಡಾ.ಬಿಂದು ಮಾಧವ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...