ಗುಬ್ಬಿ | ಸ್ಪ್ರೇ ಮಾಡಿ ಬೈಕ್ ಸವಾರನ ಪ್ರಜ್ಞೆ ತಪ್ಪಿಸಿ ಚಿನ್ನದ ಸರ ಕದ್ದೊಯ್ದ ಖದೀಮರು

Date:

ಯುವತಿಯೊಬ್ಬಳು ರಸ್ತೆಯಲ್ಲಿ ನಿಂತು ಬೈಕ್ ನಲ್ಲಿ ಬರುವವರನ್ನು ಟಾರ್ಗೆಟ್ ಮಾಡಿ ಸ್ಪ್ರೇ ಮಾಡಿ ಅರೆಪ್ರಜ್ಞೆ ಆದ ತಕ್ಷಣ ಚಿನ್ನದಸರ ಕದ್ದೊಯ್ದ ಘಟನೆ ತಾಲ್ಲೂಕಿನ ಪತ್ರೆ ಮತ್ತಿಘಟ್ಟ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.

ತ್ಯಾಗಟೂರು ನಿವಾಸಿ ಶಿವಾನಂದ್ ಅವರು ಇದೇ ತಿಂಗಳ 12 ರಂದು ರಾತ್ರಿ 9.38 ಗಂಟೆ ಸಮಯದಲ್ಲಿ ಗುಬ್ಬಿಯಿಂದ ಮದುವೆ ಮುಗಿಸಿ ತಮ್ಮೂರಿಗೆ ವಾಪಸ್ ತೆರಳುವಾಗ ನಡೆದು ಹೋಗುತ್ತಿದ್ದ ಯುವತಿ ಸ್ಪ್ರೇ ಮಾಡಿದ ತಕ್ಷಣದಲ್ಲೇ ಅರೆ ಪ್ರಜ್ಞೆಗೆ ಜಾರಿದ್ದರು. ಕೊರಳಲಿದ್ದ ಸುಮಾರು 24 ಗ್ರಾಂ ಚಿನ್ನದ ಸರ ಎಗರಿಸಿ ಸ್ಕೂಟಿನಲ್ಲಿ ಯುವತಿ ಯುವಕನೊಬ್ಬನ ಜೊತೆ ಎಸ್ಕೇಪ್ ಆಗಿದ್ದಾರೆ.

ಹೆದ್ದಾರಿಯ ಪಕ್ಕದ ಸರ್ವಿಸ್ ರಸ್ತೆಯ ಉಬ್ಬುಗಳು ಖದೀಮರಿಗೆ ವರದಾನವಾಗಿದೆ. ಬೈಕ್ ಸವಾರರು ಬ್ರೇಕ್ ಹಿಡಿದ ತಕ್ಷಣ ಸ್ಪ್ರೇ ಮಾಡುತ್ತಾರೆ. ನಡೆದು ಹೊರಟಿದ್ದ ಯುವತಿ ಕೊಂಚ ದೂರದಲ್ಲಿ ಬೈಕ್ ಜೊತೆ ನಿಂತಿದ್ದ ಯುವಕ ಇಬ್ಬರ ಕೈಚಳಕ ಹೆದ್ದಾರಿ ಸಿಸಿ ಕ್ಯಾಮೆರಾದಲ್ಲಿ ಸಿಕ್ಕಿದೆ ಎನ್ನುತ್ತಾರೆ ಸರ ಕಳೆದುಕೊಂಡ ಶಿವಾನಂದ್.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವಿಸ್ ರಸ್ತೆಯಲ್ಲಿ ಕಾದಿದ್ದು ಬೈಕ್ ಸವಾರರನ್ನು ದೋಚುವ ತಂಡ ತಾಲ್ಲೂಕಿನ ಕೆಲ ಗ್ರಾಮಗಳ ಗೇಟ್ ಆಯ್ಕೆ ಮಾಡಿಕೊಂಡಿದ್ದಾರೆ. ತ್ಯಾಗಟೂರು ಗೇಟ್ ಬಳಿ ಇತ್ತೀಚಿಗೆ ಕಾರು ಅಡ್ಡ ಹಾಕುವ ಪ್ರಯತ್ನ ನಡೆಸಿದ್ದರು ಎಂದು ಸ್ಥಳೀಯರು ಚರ್ಚೆ ಮಾಡುತ್ತಿದ್ದಾರೆ. ಈ ದರೋಡೆಕೋರರ ತಂಡಗಳಿಂದ ಸಾರ್ವಜನಿಕರ ಕಾಪಾಡುವ ಕೆಲಸ ಪೊಲೀಸರು ಮಾಡಬೇಕಿದೆ. ಚುರುಕಿನ ಕಾರ್ಯಾಚರಣೆ ನಡೆಸುವರೇ ಕಾದು ನೋಡಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...