ಗುಬ್ಬಿ | ಕೆಎನ್ಆರ್ ಅಮೃತ ಮಹೋತ್ಸವ ಕಾರ್ಯಕ್ರಮ ಮುಗಿಸಿ ಬರುವಾಗ್ಗೆ ಮಹಿಳೆ ಸಾವು

Date:

ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ 75 ನೇ ವರ್ಷದ ಹುಟ್ಟು ಹಬ್ಬದ ಅಮೃತ ಮಹೋತ್ಸವ ಸಮಾರಂಭ ಮುಗಿಸಿ ಮರಳಿ ಊರಿಗೆ ಹೊರಟಿದ್ದ ಮಹಿಳೆ ಬಸ್ಸಿನಲ್ಲೇ ಹೃದಯಾಘಾತಕ್ಕೆ ಬಲಿಯಾದ ಘಟನೆ ಶನಿವಾರ ಸಂಜೆ ನಡೆದಿದೆ.

ತುಮಕೂರಿನಿಂದ ಹೊರಟು ಮಾರ್ಗ ಮಧ್ಯೆ ಹೃದಯಾಘಾತಕ್ಕೆ ಒಳಗಾದ ತುರುವೇಕೆರೆ ತಾಲ್ಲೂಕು ಮಾಯಸಂದ್ರ ಹೋಬಳಿ ಸೀಗೆಹಳ್ಳಿ ಗ್ರಾಮದ ಸುನಂದಮ್ಮ (55) ಬಸ್ಸಿನಲ್ಲೇ ಮೃತ ಪಟ್ಟಿದ್ದಾರೆ. ತುರುವೇಕೆರೆ ಕಡೆಗೆ ಹೊರಟಿದ್ದ ಬಸ್ಸು ಕೂಡಲೇ ಗುಬ್ಬಿ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಲಾಗಿ ಮೃತಪಟ್ಟಿರುವ ಬಗ್ಗೆ ವೈದ್ಯರು ದೃಢಪಡಿಸಿದರು.

ವಿಷಯ ತಿಳಿದು ಸ್ಥಳಕ್ಕೆ ತಹಶೀಲ್ದಾರ್ ಆರತಿ.ಬಿ ಹಾಗೂ ಗುಬ್ಬಿ ಪೊಲೀಸರು ಧಾವಿಸಿ ಮುಂದಿನ ಕ್ರಮ ಕೈಗೊಂಡರು. ಮರಣೋತ್ತರ ಪರೀಕ್ಷೆ ನಡೆಸಿ ಮೃತರ ಸಂಬಂಧಿಕರಿಗೆ ಹಸ್ತಾಂತರಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...