ಗುಬ್ಬಿ | ಗಣೇಶ ಉತ್ಸವಕ್ಕೆ ಏಕ ಗವಾಕ್ಷಿ ಅರ್ಜಿ ಸ್ವೀಕಾರ

Date:

ಗಣೇಶ ಹಬ್ಬದ ಹಿನ್ನಲೆ ಗುಬ್ಬಿ ತಾಲೂಕಿನಲ್ಲಿ ಗಣೇಶ ಪ್ರತಿಷ್ಠಾಪನೆ ಹಾಗೂ ಉತ್ಸವ ಮಾಡುವ ಸಂಘ ಸಂಸ್ಥೆಗಳು ಅನುಮತಿ ಪಡೆಯಲು ಏಕ ಗವಾಕ್ಷಿ ಮೂಲಕ ಅರ್ಜಿ ಸ್ವೀಕಾರಕ್ಕೆ ಅನುವು ಮಾಡಲಾಗುವುದು. ಅಗತ್ಯ ದಾಖಲೆ ಒದಗಿಸಿ ಗಣೇಶ ಪ್ರತಿಷ್ಠಾಪನೆ ಹಬ್ಬ ಆಚರಣೆ ಮಾಡಿಕೊಳ್ಳುವಂತೆ ಗುಬ್ಬಿ ಪಿಎಸ್‌ಐ ಸುನಿಲ್ ಕುಮಾರ್ ಮನವಿ ಮಾಡಿದರು.

ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಗೌರಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನಲೆ ಆಯೋಜಿಸಿದ್ದ ಶಾಂತಿ ಸಭೆಯಲ್ಲಿ ಮಾತನಾಡಿದರು.

“ಪ್ರತಿ ವರ್ಷದಂತೆ ಗಣೇಶ ಹಬ್ಬ ಆಚರಣೆಯಲ್ಲಿ ನಡೆಯುವ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಉತ್ಸವ ಸರ್ಕಾರದ ನಿಬಂಧನೆಯಂತೆ ಆಚರಿಸಬೇಕಿದೆ. ಸಾರ್ವಜನಿಕರಿಗೆ ಕಿರಿಕಿರಿಯಾಗದಂತೆ ಪೆಂಡಾಲ್ ನಿರ್ಮಾಣ ಮಾಡಬೇಕು. ಧ್ವನಿ ವರ್ಧಕ ಅಳವಡಿಕೆಗೆ ಅನುಮತಿ ಹಾಗೂ ಉತ್ಸವಕ್ಕೆ ಪೊಲೀಸ್ ಬಂದೋಬಸ್ತ್ ಎಲ್ಲದಕ್ಕೂ ಅರ್ಜಿ ಮೂಲಕ ಅನುಮತಿ ಪಡೆಯಬೇಕು” ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸ್ಥಳೀಯ ಸಂಸ್ಥೆ, ಪೊಲೀಸ್ ಹಾಗೂ ಬೆಸ್ಕಾಂ ಇಲಾಖೆ ಸಿಬ್ಬಂದಿಗಳನ್ನು ಒಂದಡೆ ಒಗ್ಗೂಡಿಸಿ ಅನುಮತಿ ನೀಡುವ ವ್ಯವಸ್ಥೆ ಮಾಡಲಾಗುತ್ತದೆ. ಅನುಮತಿ ಇಲ್ಲದೆ ಯಾವುದೇ ಕಾರ್ಯಕ್ರಮ ಮಾಡದಂತೆ ಮನವಿ ಮಾಡಿ ಮೆರವಣಿಗೆ, ಡಿಜೆ ಸೌಂಡ್ಸ್‌ಗೆ ಯಾವುದೇ ಕಾರಣಕ್ಕೂ ಅನುಮತಿ ನೀಡದಂತೆ ಸರ್ಕಾರ ಆದೇಶಿಸಿದೆ. ಈ ನಿಟ್ಟಿನಲ್ಲಿ ಯಾವುದೇ ಸಾಂಸ್ಕೃತಿಕ ಕಲಾ ತಂಡಗಳು, ವಾದ್ಯವೃಂದ, ಜನಪದ ತಂಡ ಬಳಸಿ ಮೆರವಣಿಗೆ ಮಾಡಬಹುದಾಗಿದೆ. ನಿಗದಿ ಮಾಡಿದ ಸ್ಥಳದಲ್ಲಿ ಗಣೇಶ ವಿಸರ್ಜನೆ ಮಾಡಬೇಕು. ಸಂಜೆಯೊಳಗೆ ಮೆರವಣಿಗೆ ನಡೆಸಬೇಕು. ರಾತ್ರಿ 10 ಗಂಟೆ ಮೇಲೆ ಸೌಂಡ್ ಸಿಸ್ಟಂ ಬಳಸದೆ ಕಾರ್ಯಕ್ರಮ ನಡೆಸಿ ಹಬ್ಬವನ್ನು ಸೌಹಾರ್ದ ರೀತಿಯಲ್ಲಿ ನಡೆಸಬೇಕು” ಎಂದು ಮನವಿ ಮಾಡಿದರು.

“ಗಣೇಶ ಉತ್ಸವದ ಸಂದರ್ಭ ವಿದ್ಯುತ್ ಕಂಬ ಮತ್ತು ತಂತಿ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು. ಇದೇ ಸಂದರ್ಭದಲ್ಲಿ ಈದ್ ಮಿಲಾದ್ ಹಬ್ಬ ಇರುವ ಕಾರಣ ಯಾವುದೇ ಕೋಮು ಪ್ರಚೋದನಾಕಾರಿ ಘಟನೆ ನಡೆಯದಂತೆ ಎಚ್ಚರವಹಿಸಬೇಕಿದೆ. ಬಾವುಟ, ಫ್ಲೆಕ್ಸ್, ಬಂಟಿಂಗ್ ಹಾಕುವಾಗ ಕೇಸರಿ, ಹಸಿರು ಯಾವುದೇ ಇರಲಿ ಸ್ಥಳೀಯ ಸಂಸ್ಥೆಗಳ ಅನುಮತಿ ಪಡೆದು ಗೊಂದಲ ಇಲ್ಲದೆ ಆಚರಣೆ ಮಾಡಬೇಕು” ಎಂದು ಸಲಹೆ ನೀಡಿದರು.

ಪಟ್ಟಣದ ಟ್ರಾಫಿಕ್ ಸಮಸ್ಯೆ, ಕಾಲೇಜು ಮತ್ತು ಮೈದಾನದ ಬಳಿ ನಡೆಯುವ ಗುಂಪುಗಾರಿಕೆ, ಅಪ್ರಾಪ್ತ ವಯಸ್ಸಿನ ಮಕ್ಕಳು ಬೈಕ್ ಓಡಿಸುವುದರ ಬಗ್ಗೆ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಮನವಿ ಮಾಡಿದರು. ಈ ಹಿನ್ನೆಲೆಯಲ್ಲಿ ಸಿಬ್ಬಂದಿ ಕೊರತೆ ನಡುವೆ ಈ ತುರ್ತು ವಿಚಾರಕ್ಕೆ ಕ್ರಮ ವಹಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಪ.ಪಂ ಸದಸ್ಯ ಶೌಕತ್ ಅಲಿ, ಮುಖಂಡರಾದ ಎಚ್ ಟಿ ಭೈರಪ್ಪ, ರಾಮಯ್ಯ, ಸಿ ಆರ್ ಶಂಕರಕುಮಾರ್, ರೈತ ಸಂಘದ ಲೋಕೇಶ್, ಬಿ ಲೋಕೇಶ್, ಜಿ ಆರ್ ರಮೇಶ್, ಅರ್ಜುನ, ಬ್ಯಾಟರಾಯಪ್ಪ, ಯು ರಾಜಣ್ಣ, ಎಚ್ ಕೆ ಮಧು, ಸಚಿನ್, ವಾಸುಗೌಡ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...