ಗುಬ್ಬಿ | ಸಮಾನತೆ ಸಾಧಿಸುವುದು ಅಂಬೇಡ್ಕರ್ ಅವರ ತುಡಿತ : ಪಿಡಿಒ ಕೃಷ್ಣಮೂರ್ತಿ

Date:

ಸಮಾಜದಲ್ಲಿ ಅಸಮಾನತೆ ಹೋಗಲಾಡಿಸಿ ಜಾತಿ ಪದ್ಧತಿಯಿಂದ ಹೊರತಾಗಿ ಸಮಾಜದಲ್ಲಿ ತುಳಿತಕ್ಕೆ ಒಳಗಾದವರು, ಶೋಷಿತರನ್ನು ಮುಖ್ಯವಾಹಿನಿಗೆ ತರುವ ಮೂಲಕ ಸಮಾನತೆ ಸಾಧಿಸುವ ನಿರಂತರ ತುಡಿತ ಡಾ.ಬಿ.ಆರ್.ಅಂಬೇಡ್ಕರ್ ಅವರಲ್ಲಿತ್ತು ಎಂದು ಪಿಡಿಒ ಕೃಷ್ಣಮೂರ್ತಿ ತಿಳಿಸಿದರು.

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮದ ಅಂಬೇಡ್ಕರ್ ನಗರ ಬಡಾವಣೆಯಲ್ಲಿ ಯುವಕ ಸಂಘ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಂ ಅವರ ಜನ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಶಿಕ್ಷಣ ಸಂಘಟನೆ ಹೋರಾಟ ಎಂಬ ತತ್ವ ಅಳವಡಿಸಿಕೊಂಡು ಬದುಕು ಸಾಧಿಸಲು ಪ್ರೇರಣೆ ನೀಡಿದ ಅಂಬೇಡ್ಕರ್ ಅವರು ದೀನ ದಲಿತರ ಉದ್ದಾರಕ್ಕೆ ಸದಾ ಕಾಲ ಚಿಂತನೆ ನಡೆಸಿದ್ದರು ಎಂದರು.

ದಲಿತ ಮುಖಂಡ ಕೋಟೆ ಕಲ್ಲೇಶ್ ಮಾತನಾಡಿ ಅಸ್ಪೃಶ್ಯತೆಯಿಂದ ಶತಮಾನಗಳಿಂದ ನಲುಗಿದ ಪರಿಶಿಷ್ಟ ಜಾತಿಯ ಜನಾಂಗಕ್ಕೆ ದಿಟ್ಟತನ ಪಾಠ ಮಾಡಿದ್ದ ಅಂಬೇಡ್ಕರ್ ಅವರು ನಿದ್ದೆಗೆಟ್ಟು ನನ್ನ ಜನ ಎಂದು ಸದಾ ಕಾಲ ದಲಿತರ ಏಳಿಗೆ ಬಗ್ಗೆ ಆಲೋಚಿಸಿದ್ದರು. ಶಿಕ್ಷಣ ಮೂಲಕ ಎಲ್ಲಾ ಅಸಮತೋಲನ ವಿರುದ್ಧ ದಿಟ್ಟವಾಗಿ ಬೆಳೆದು ಸಂವಿಧಾನ ರಚಿಸಿ ಎಲ್ಲಾ ವರ್ಗಕ್ಕೂ ಸಮಾನತೆ ತಂದರು. ಜೊತೆಯಲ್ಲಿ ಬಾಬು ಜಗಜೀವನರಾಂ ಅವರು ಸಹ ದಲಿತರ ಏಳಿಗೆಗೆ ದುಡಿದರು. ಹಸಿರು ಕ್ರಾಂತಿ ಮೂಲಕ ದೇಶದ ಅಭಿವೃದ್ಧಿಗೆ ಶ್ರಮಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಪಂ ಸದಸ್ಯ ದಿಲೀಪ್ ಕುಮಾರ್ ಮಾತನಾಡಿ ಸ್ವಾತಂತ್ರ್ಯ ಬಂದ ನಂತರದಲ್ಲಿ ಪ್ರಜಾಪ್ರಭುತ್ವ ದೇಶ ಸ್ಥಾಪನೆಗೆ ಅವಶ್ಯ ಸಂವಿಧಾನ ರಚಿಸಿಕೊಟ್ಟ ಅಂಬೇಡ್ಕರ್ ಅವರ ತತ್ವಾದರ್ಶ ಯುವ ಪೀಳಿಗೆಗೆ ಮಾರ್ಗಸೂಚಿಯಾಗಿದೆ. ವಿಶ್ವ ಮೆಚ್ಚುವ ಸಂವಿಧಾನ ಎಲ್ಲಾ ವರ್ಗದ ಜನರಿಗೆ ಸಮಾನತೆ ಸಾರುವ ತಂದುಕೊಟ್ಟಿದೆ. ಅಂಬೇಡ್ಕರ್ ಅವರ ಮಾರ್ಗದರ್ಶನದಂತೆ ಮುಂದಿನ ಪೀಳಿಗೆ ಶಿಕ್ಷಣಕ್ಕೆ ಒತ್ತು ನೀಡಿ ದೇಶ ಕಟ್ಟಬೇಕು ಎಂದು ಕರೆ ನೀಡಿದರು.

ಮುಖಂಡರಾದ ಮಾದಣ್ಣ, ರಂಗಸ್ವಾಮಿ, ಪಾಂಡು, ಪ್ರಕಾಶ್, ಫಾರೆಸ್ಟ್ ರಂಗಯ್ಯ, ಬಸವರಾಜ್, ಪೂಜಾರ್ ರಾಜಣ್ಣ, ದೊಡ್ಡರಂಗಯ್ಯ, ಕಾಂತರಾಜು, ದೊಡ್ಡಯ್ಯ, ಕುಂಬಿ, ಕೆ.ರಂಗಸ್ವಾಮಿ, ಮಹೇಶ್, ಗೋವಿಂದರಾಜು, ನಾಗರಾಜ್, ಯೋಗೀಶ್ ಗ್ಯಾರೆಹಳ್ಳಿ, ತಾರಕೇಶ್, ಆಟೋ ಬಸವರಾಜ್, ವಿನಯ್, ನವೀನ್, ಶೇಖರ್, ಮಂಜುನಾಥ್, ಚನ್ನಪ್ಪ ಸೇರಿದಂತೆ ಸ್ಥಳೀಯ ಗ್ರಾಮಸ್ಥರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...