ಗುಬ್ಬಿ | ಕಾಮಗಾರಿಗಳನ್ನು ಅರ್ಧಕ್ಕೆ ಕೈಬಿಟ್ಟ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ : ಶಾಸಕ ಎಸ್.ಆರ್.ಶ್ರೀನಿವಾಸ್

Date:

ಯಾವುದೇ ಕಾಮಗಾರಿ ಇರಲಿ ಕೆಲಸ ಪೂರ್ಣಗೊಳ್ಳದೆ ಬಿಲ್ ಪಾವತಿಸಬೇಡಿ. ಕೆಲಸದ ಗುಣಮಟ್ಟ ಪರಿಶೀಲನೆ ನಡೆಸಿ ಕೊನೆಯ ಹಂತದಲ್ಲಿ ಬಿಲ್ ಪಾವತಿ ಪ್ರಕ್ರಿಯೆ ನಡೆಸಿ. ಕಾಮಗಾರಿಗಳನ್ನು ಅರ್ಧಕ್ಕೆ ಕೈಬಿಟ್ಟ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ ಎಂದು ಇಂಜಿನಿಯರ್‌ಗಳಿಗೆ ಶಾಸಕ ಎಸ್.ಆರ್.ಶ್ರೀನಿವಾಸ್ ಖಡಕ್ ಎಚ್ಚರಿಕೆ ನೀಡಿದರು.

ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಇಲಾಖಾವಾರು ಅಂಕಿ ಅಂಶಗಳ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಒಂದು ಕೋಟಿ ರೂಗಳ ಕೆಲಸ ಬಾಕಿ ಇರುವ ಬಗ್ಗೆ ಕಿಡಿಕಾರಿ, ಯಾರೇ ಗುತ್ತಿಗೆದಾರ ಆದರೂ ಸರಿ ಕೆಲಸ ಪೂರ್ಣ ಮಾಡಿದ ಬಳಿಕ ಬಿಲ್ ನೀಡಬೇಕು ಎಂದು ಸೂಚಿಸಿದರು.

ಅಂಬೇಡ್ಕರ್ ಭವನ ಹಾಗೂ ಬಾಬು ಜಗಜೀವನ ರಾಂ ಭವನ ನಿರ್ಮಾಣಕ್ಕೆ ಗ್ರಾಮಗಳಲ್ಲಿ ಅವಕಾಶ ನೀಡಲಾಗಿದೆ. ಸ್ಥಳಕ್ಕೆ ಗ್ರಾಮ ಪಂಚಾಯಿತಿ ಮೂಲಕ ಸಿಎ ನಿವೇಶನ ಪಡೆದು ಕೆಲಸ ಆರಂಭಿಸಲು ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ಸಲಹೆ ನೀಡಿ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಗ್ರಾಮೀಣ ಭಾಗದಲ್ಲಿ ನಮ್ಮ ರೈತರ ತೆಂಗು ಅಡಿಕೆ ಮರಗಳಿಗೆ ತಗುಲುವ ಸುಳಿ ರೋಗ, ನುಸಿ ರೋಗದ ಬಗ್ಗೆ ವಿಜ್ಞಾನಿಗಳನ್ನು ಕರೆತಂದು ಪರಿಶೀಲಿಸಿ ಸೂಕ್ತ ಪರಿಹಾರ ನೀಡಬೇಕು ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಆಗುವ ಪೌಷ್ಟಿಕ ಆಹಾರ ತಯಾರಿಕಾ ಘಟಕದಲ್ಲಿ ಕೆಲಸ ಮಾಡುವ ಹೆಣ್ಣು ಮಕ್ಕಳಿಗೆ ಪ್ರತಿ ತಿಂಗಳು ವೇತನ ಸರಿಯಾಗಿ ನೀಡಲು ಹೇಳಿದರು. ತಾಲೂಕಿನಲ್ಲಿ ಸ್ವಂತ ಕಟ್ಟಡ ಇಲ್ಲದ 37 ಕೇಂದ್ರಕ್ಕೆ ಕೂಡಲೇ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಲು ಸೂಚಿಸಿ ಭಾಗ್ಯಲಕ್ಷ್ಮಿ ಬಾಂಡ್ ಗಾಗಿ 186 ಅರ್ಜಿಗಳು ಬಂದಿದೆ. ಈ ಬಗ್ಗೆ ಕೂಡಲೇ ಕ್ರಮ ವಹಿಸಬೇಕು ಎಂದು ತಿಳಿಸಿದರು. ಜೊತೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅನಾಥಾಲಯ ಮಕ್ಕಳ ಬಗ್ಗೆ ಸರಿಯಾಗಿ ನಿಗಾ ವಹಿಸಬೇಕು. ಅಂತಹ ಮಕ್ಕಳಿಗೆ ತೊಂದರೆ ಅದಲ್ಲಿ ಅಮಾನತು ಶಿಕ್ಷೆ ಕಟ್ಟಿಟ್ಟ ಬುತ್ತಿ ಎಂದು ಎಚ್ಚರಿಸಿದರು.

ಡೆಂಘೀ ಜೊತೆ ಚಿಕುನ್ ಗುನ್ಯಾ ವೈರಸ್ ಹರಡದಂತೆ ತಾಲೂಕು ಆಡಳಿತ ಅಗತ್ಯ ಕ್ರಮ ಕೈಗೊಳ್ಳಬೇಕು. ಆರೋಗ್ಯ ಇಲಾಖೆ ಈ ಬಗ್ಗೆ ಮುನ್ನೆಚ್ಚರಿಕೆ ಕ್ರಮ ವಹಿಸಲು ಹೇಳಿ ಕೆರೆಗಳಲ್ಲಿ ಊಳು ಎತ್ತುವ ಕೆಲಸಕ್ಕೆ ಸರ್ಕಾರ ಹಣ ನೀಡಲು ಅಸಾಧ್ಯ. ಈ ನಿಟ್ಟಿನಲ್ಲಿ ರೈತರು ತಮ್ಮ ಜಮೀನಿಗೆ ಕೆರೆಯಲ್ಲಿ ಎರಡು ಅಡಿ ಆಳದಲ್ಲಿ ಮಣ್ಣು ತೆಗೆದರೆ ಅಡ್ಡಿ ಪಡಿಸಬೇಡಿ. ಹೆಚ್ಚು ಆಳ ಮಣ್ಣು ತೆಗೆದಲ್ಲಿ ಕಾನೂನು ರೀತಿ ಕ್ರಮ ಕೈಗೊಳ್ಳಲು ಎಲ್ಲಾ ಅಧಿಕಾರಿಗಳಿಗೆ ಸೂಚಿಸಿದರು.

ಗುಬ್ಬಿಗೆ ಕುಡಿಯುವ ನೀರು ಒದಗಿಸುವ ಹೇರೂರು ಕೆರೆಗೆ ಹೇಮಾವತಿ ನೀರು ಹರಿಸುವ ನಾಲೆಯ ಅಭಿವೃದ್ದಿ ಕಡೆ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಗಮನ ಹರಿಸಬೇಕು. ಗೌಡನಕಟ್ಟೆಗೆ ನೀರು ಒದಗಿಸಲು ಕೆಲಸ ಇನ್ನೂ ಮೂರು ತಿಂಗಳಲ್ಲಿ ಪೂರ್ಣ ಗೊಳಿಸಲು ತಿಳಿಸಿ ಡಿಸೆಂಬರ್ ಮಾಹೆಯಲ್ಲಿ ಹಾಗಲವಾಡಿ ಕೆರೆಗೆ ಹೇಮಾವತಿ ಹರಿಯಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ಶಿವಮೊಗ್ಗ | ಆಯನೂರಿನ ಬೇಕರಿಯಲ್ಲಿ ಸಿಲಿಂಡರ್ ಸ್ಫೋಟ: ತಪ್ಪಿದ ಭಾರೀ ದುರಂತ

ಮೀನುಗಾರಿಕೆ, ಶಿಕ್ಷಣ, ಕೃಷಿ, ತೋಟಗಾರಿಕೆ, ಕಾರ್ಮಿಕ ಹೀಗೆ ಎಲ್ಲಾ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದರು. ಸಭೆಯಲ್ಲಿ ತಹಶೀಲ್ದಾರ್ ಬಿ.ಆರತಿ, ತಾಪಂ ಆಡಳಿತಾಧಿಕಾರಿ ಪುಷ್ಪಲತಾ, ತಾಪಂ ಇಓ ಶಿವಪ್ರಕಾಶ್, ಪಪಂ ಮುಖ್ಯಾಧಿಕಾರಿ ಮಂಜುಳಾದೇವಿ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...